ಥೂ, ನಮ್ಮ ಜನ್ಮಕ್ಕೊಂದಿಷ್ಟು ಬೆಂಕಿ ಹಾಕ! ನಾವು ಬರಹಗಾರರೇ ಹೀಗೆ! ಬರಿ ಬರಹದಲ್ಲಿ ಮಾತ್ರ ಮಾನವೀಯತೆ, ಪ್ರೀತಿ, ಅಂತಃಕರಣ, ಕನಿಕರದ ಬಗ್ಗೆ ಅಗಾಧವಾದದನ್ನು ಬರೆದು ಶಹಭಾಸ್ಗಿರಿ ಪಡೆಯುವ ನಾವು ನಿಜಜೀವನದಲ್ಲಿ ಇದ್ಯಾವುದಕ್ಕೂ ಸ್ಪಂದಿಸದೆ ತೆಪ್ಪಗೆ ಕುಳಿತು ಬಿಡುತ್ತೇವೆ. ಇದಕ್ಕೆ ಜ್ವಲಂತ ಸಾಕ್ಷಿ ಈಗಷ್ಟೆ ನಮ್ಮ ನಾಡಿನ ಉತ್ತರ ಕರ್ನಾಟಕದ ಭಾಗದಲ್ಲಿ ನಡೆದ ಪ್ರವಾಹದ ದುರಂತ! ಈ ದುರಂತ ಸಂಭವಿಸಿ ಒಂದು ವಾರವಾಗುತ್ತ ಬಂದರೂ ನಾವು ಬ್ಲಾಗಿಗರು ಬರಿ ನಮ್ಮ ನಮ್ಮ ಬ್ಲಾಗಗಳಲ್ಲಿ ಹೊಸ ಹೊಸ ಪೋಸ್ಟಿಂಗ್ಗಳನ್ನು ಪ್ರಕಟಿಸುವದರಲ್ಲಿ, ಅದನ್ನು ಸಿಂಗರಿಸುವದರಲ್ಲಿ ಮಾತ್ರ ಬಿಜಿಯಾಗಿದ್ದೇವೆ ಹೊರತು ನಮ್ಮಲ್ಲಿ ಯಾರೊಬ್ಬರೂ ನಮ್ಮದೇ ಬ್ಲಾಗರ್ಸ್ ಟೀಮ್ನಿಂದ ನೆರೆಯಲ್ಲಿ ಸಿಲುಕಿದ ಸಂತ್ರಸ್ತರ ನೋವಿಗೆ ಮಿಡಿಯುವದಾಗಲಿ, ಅಥವಾ ಅವರಿಗೆ ಹೇಗೆ ಸಹಾಯ ಮಾಡಬಹುದೆಂಬುದರ ಬಗ್ಗೆಯಾಗಲಿ ನಾವು ಯಾರೂ ಯೋಚಿಸುತ್ತಿಲ್ಲ. ಇಡಿ ಉತ್ತರ ಕರ್ನಾಟಕ ಜಲಪ್ರಳಯದಲ್ಲಿ ಅಕ್ಷರಶಃ ಕೊಚ್ಚಿಹೋಗಿದೆ. ಆದರೆ ನಾವು ಮಾತ್ರ ಯಾವ ರೀತಿಯೂ ಸ್ಪಂದಿಸುತ್ತಿಲ್ಲ. (ಈಗಾಗಲೇ ನೀವು ಸ್ಪಂದಿಸಿದ್ದರೆ ಸಹಾಯವನ್ನು ನೀಡಿದ್ದರೆ ನನ್ನ ಖಾರದ ಮಾತುಗಳಿಗೆ ಕ್ಷಮೆಯಿರಲಿ) ದುರಂತ ಸಂಭವಿಸಿದ ಮೇಲೆ ನಾವು ಅದರ ಮೇಲೆ ಬರಿ ಕಥೆ, ಕವನ, ಲೇಖನಗಳನ್ನು ಬರೆದುಬಿಟ್ಟರೆ ನಮ್ಮ ಜವಾಬ್ದಾರಿ ಮುಗಿಯಿತೆ? ನಾವು ಅವರಿಗೆ ಸಹಾಯ ಮಾಡಬಾರದೆ?
ನಾನು ಕಾಯುತ್ತಲೇ ಇದ್ದೆ ಈ ಬಗ್ಗೆ ಒಬ್ಬರಾದರೂ ಮಾತನಾಡುತ್ತಾರಾ? ಎಂದು. ಕೊನೆಗೆ ಬೇಸತ್ತು ನಾನಿಲ್ಲಿ ಬರೆಯಬೇಕಾಗಿಬಂದಿದ್ದು ಅನಿವಾರ್ಯವಾಯಿತು. ಈ ಸಮಾಜದಲ್ಲಿ ಅತ್ಯಂತ ಜವಾಬ್ದಾರಿಯಿಂದಿರುವ ವ್ಯಕ್ತಿಗಳೆಂದರೆ ಲೇಖಕರು ಹಾಗೂ ಬರಹಗಾರರು. ಇದೀಗ ನಾವೇ ಹೀಗೆ ಸುಮ್ಮನೆ ಕುಳಿತುಬಿಟ್ಟರೆ ಹೇಗೆ? ಇಲ್ಲಿ ದೊಡ್ದ ದೊಡ್ದ ಬರಹಗಾರರಿದ್ದಾರೆ, ಲೇಖಕರಿದ್ದಾರೆ, ಬುದ್ಧಿಜೀವಿಗಳಿದ್ದಾರೆ ಇವರೆಲ್ಲ ಇತ್ತ ಗಮನಹರಿಸಲಾರರೆ? ಎಲ್ಲಕ್ಕಿಂತ ಹೆಚ್ಚಾಗಿ ಈಗಾಗಲೇ ನಮ್ಮದೇ ಆದಂಥ ಬ್ಲಾಗರ್ಸ್ ಟೀಮಿದೆ. ಎಲ್ಲ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಕೊಟ್ಟರಾಯಿತು. ನಮ್ಮ ಟೀಮಿನಲ್ಲಿಯೇ ಯಾರಾದರೊಬ್ಬರು ಈ ಜವಾಬ್ದಾರಿಯನ್ನು ತೆಗೆದುಕೊಂಡು ನಮ್ಮ ಟೀಮಿನ ಅಧ್ಯಕ್ಷರಾದ ಜಿ.ಎನ್.ಮೋಹನ್ ಅವರ ಮುಂದಾಳತ್ವದಲ್ಲಿ ಎಲ್ಲ ಸದಸ್ಯರಿಂದ ಯಾಕೆ ದುಡ್ಡು ಸಂಗ್ರಹಿಸಿ ಕೊಡಬಾರದು? ನಮ್ಮ ಟೀಮಿನಲ್ಲಿ ಒಟ್ಟು ೧೭೦೦ ಸದಸ್ಯರಿದ್ದಾರೆ. ಒಬ್ಬೊಬ್ಬರೂ ೧೦೦ ರೂಪಾಯಿ ನೀಡಿದರೂ ಒಟ್ಟು ರೂ ೧,೭೦,೦೦೦ ಸಂಗ್ರಹಿಸಬಹುದು. ಅನಿವಾಸಿ ಕನ್ನಡಿಗರು, ದೊಡ್ದ ದೊಡ್ದ ಹುದ್ದೆಯಲ್ಲಿರುವವರು ಇನ್ನೂ ಹೆಚ್ಚಿಗೆ ನೀಡಬಹುದು. ಇದನ್ನು ಅವರಿವರ ಮೂಲಕ ಕೊಡುವ ಬದಲು ನಾವೇ ಒಟ್ಟಾಗಿ ಸಂಗ್ರಹಿಸಿ ನಮ್ಮ ಬ್ಲಾಗರ್ಸ್ ಟೀಮಿನಿಂದಲೇ ಕೊಟ್ಟರೆ ಒಳ್ಳೆಯದಲ್ಲವೆ? ಈಗಲೂ ತಡವಾಗಿಲ್ಲ. ಮನಸ್ಸು ಮಾಡಿದರೆ ಏನು ಬೇಕಾದರು ಮಾಡಬಲ್ಲೆವು. ಈ ಕೂಡಲೇ ಬೆಂಗಳೂರಿನಲ್ಲಿರುವ ಬ್ಲಾಗಿಗರಲ್ಲಿ ಯಾರಾದರೊಬ್ಬರು ಕಾರ್ಯಪ್ರವರ್ತರಾಗಿ ಈ ಕೆಲಸಕ್ಕೆ ಚಾಲನೆ ನೀಡಬಾರದೆ? ಅಥವಾ ಮೋಹನ್ ಅವರೇ ಎಲ್ಲರಲ್ಲಿ ಒಂದು ಮನವಿಯನ್ನು ಮಾಡಿ ದುಡ್ದು ಸಂಗ್ರಹಿಸಿ ಕೊಟ್ಟರೆ ಹೇಗೆ? ನಾವೆಲ್ಲ ಸಹೃದಯರು. ಬನ್ನಿ ನಮ್ಮ ಸಹಾಯ ಹಸ್ತವನ್ನು ನೀಡೋಣ, ಕುಸಿದ ಬದುಕನ್ನು ಮತ್ತೆ ಕಟ್ಟೋಣ. ಅವರ ಕಳೆದು ಕನಸುಗಳನ್ನು ಅವರಿಗೆ ಮತ್ತೆ ಹುಡುಕಿಕೊಡೋಣ. ಇದಕ್ಕೆ ನೀವೇನಂತೀರಿ?
-ಉದಯ ಇಟಗಿ
ಏಳಿ, ಎದ್ದೇಳಿ ಬ್ಲಾಗಿಗರೇ, ನೆರೆಗೆ ಸಿಲುಕಿದವರಿಗೆ ನಿಮ್ಮ ಸಹಾಯ ಹಸ್ತವನ್ನು ಚಾಚಿರಿ!
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಪಕ್ಕ ಸಾಹಸಪ್ರಧಾನ ಸಿನಿಮಾ3 ವಾರಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …2 ತಿಂಗಳುಗಳ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ8 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!1 ವರ್ಷದ ಹಿಂದೆ
-
Pic by Hengki Lee3 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
ಕೆಲವು ಹಾಯ್ಕುಗಳು...ಒಂದು ಕವನ5 ವರ್ಷಗಳ ಹಿಂದೆ
-
ಅಳಿವು ಉಳಿವಿನ ನಡುವೆ...5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?6 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!6 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್6 ವರ್ಷಗಳ ಹಿಂದೆ
-
ಹೊಸದೊಂದು ಜಾವಳಿ7 ವರ್ಷಗಳ ಹಿಂದೆ
-
ಮಾಯೆ7 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ7 ವರ್ಷಗಳ ಹಿಂದೆ
-
ಅನುಸಂಧಾನ-೩7 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ9 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್9 ವರ್ಷಗಳ ಹಿಂದೆ
-
ಕತ್ತಲೆ.................9 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..9 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ9 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ9 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...10 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ10 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?11 ವರ್ಷಗಳ ಹಿಂದೆ
-
ತೀರ....11 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ11 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?11 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)12 ವರ್ಷಗಳ ಹಿಂದೆ
-
(ಮಹಿಳಾ)ವಾದ:12 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್13 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು14 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧14 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು15 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು15 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?15 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...17 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಏಕೋ ಏನೋ ಅಲ್ಲಿ ಒಂದಷ್ಟು ಒಳದನಿಗಳು ಮಾರ್ದನಿಸಲೇ ಇಲ್ಲ!
- ಪ್ರವೇಶನ.......
- ನಿನ್ನ ಪ್ರೀತಿಸುವದೇ ಒಂದು ಹಿಂಸೆ!
- ಉರಿದು ಬಿದ್ದ ಉಲ್ಕೆ-ಕಮಲಾ ದಾಸ್
- ಮರ ಕತ್ತರಿಸುವದು
- ನಾವು ಹುಡುಗರೇ ಹೀಗೆ........
- ಅವ್ವಂದಿರ ವಿಶೇಷ ದಿನಕ್ಕಾಗಿ ಅವ್ವನ ಮೇಲೆ ಒಂದಿಷ್ಟು ಪದ್ಯಗಳು
- ಹೆಣ್ಣು ಸದಾ ಸಂದಿಗ್ಧ, ಗೊಂದಲಗಳಲ್ಲಿಯೇ ತನ್ನ ಸಾಕಷ್ಟು ಸಮಯ ಕಳೆದು ಬಿಡುತ್ತಾಳೆ!
- ನಾನೂ ಹಾಫ್ ಸೆಂಚ್ಯುರಿ ಬಾರಿಸಿಬಿಟ್ಟೆ!
- ದಿ ಲೇಟ್ ಮಿಸ್ಟರ್ ಶೇಕ್ಷಪೀಯರ್ (ಭಾಗ-1)
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
12 ಕಾಮೆಂಟ್(ಗಳು):
ಹೌದು ಸರ್,
ಕಳೆದು ಹೋದ ಕನಸು ಹುಡುಕಿಕೊಡಲು ಸಾಧ್ಯವಾಗದಿದ್ದರೊ, ಕನಸ ಕಟ್ಟವ ಆಸೆ, ಧೈರ್ಯ, ಹುಮ್ಮಸ್ಸು ಎಂಬ ಮನೋಬಲವನ್ನು ಮೊದಲು ಕಟ್ಟೋಣ...
ನಿಮ್ಮ ಲೇಖನದಿಂದಾದರು ಮಲಗಿದ ಜನ ಎದ್ದೇಳಬೇಕಿದೆ...
ನಮ್ಮ ಸಹಾಯ ಹಸ್ತವನ್ನು ನಾವು ಪ್ರಾರಂಭಿಸಿಬಿಟ್ಟಿದ್ದೇವೆ ಉಳಿದವರು ಹಾಗೆಯೇ ಮುನ್ನುಗ್ಗಿದ್ದಾರೆಂದು ಕೊಳ್ಳುತ್ತೆವೆ.
ಧನ್ಯವಾದಗಳು ಸಮಯಕ್ಕೆ ತಕ್ಕ ಬರಹ...ನೊಂದ ಜನಕೆ ಸಹಾಯ ಹಸ್ತಗಳು ಮುಂದೆ ಬರಲಿ, ಬಂದ ಸಹಾಯವನ್ನು ಮಧ್ಯಸ್ಥಿಕೆಯ ಜನ ನುಂಗಿನೀರು ಕುಡಿಯದಿರಲೆಂದು ಆಶಿಸುತ್ತೆನೆ.
ವಂದನೆಗಳು
ಉದಯ್ ಅವರೆ,
ನಿಮ್ಮ ಕಾಳಜಿಗೆ ಮೆಚ್ಚುಗೆ ಇದೆ. ಈಗಾಗಲೇ ನಾವೂ ಈ ನಿಟ್ಟಿನಲ್ಲಿ ಯೋಚಿಸಿ, ಸಹಾಯಧನ್ ಕಳುಹಿಸಿದ್ದೇವೆ. ಸಂಘಟನೆಗಳ ಮೂಲಕವೇ ಸಹಾಯ ಮಾಡಬೇಕೆಂದೇನಿಲ್ಲವಲ್ಲ? ಅವರವರ ವೈಯಕ್ತಿಕ ನೆಲೆಯಲ್ಲೂ ಮಾಡಬಹುದು. ಹಾಗೆ ಸಹಾಯ ಮಾಡಿ ಮಾಡಿದ್ದೇವೆ ಎಂದು ಸಾರುವುದೂ ಸಲ್ಲ. ಹಾಗಾಗಿಯೇ ಎಲ್ಲೂ ನಾನು ಹಾಕಿರಲಿಲ್ಲ. ಬ್ಲಾಗ್ನಲ್ಲಿ ಕವನ, ಕಥೆ ಹಾಕುತ್ತಾ, ಸಿಂಗರಿಸುತ್ತಾ ಇದ್ದವರೆಲ್ಲಾ ಇದರ ಬಗ್ಗೆ ಗಂಭೀರವಾಗಿ ಯೋಚಿಸುತ್ತಿಲ್ಲ ಎಂದೆಣಿಸದಿರಿ..:) ನಿಮ್ಮ ಈ ಲೇಖನದಿಂದ ಪ್ರೇರಿತರಾಗಿ ಹಲವರು ಮುಂದೆ ಬಂದು ಸಹಾಯನೀಡಲೆಂದು ಹಾರೈಸುವೆ. ವಂದನೆಗಳು.
ಹಾಂ. ... ಅಂತೆಯೇ ಬ್ಲಾಗ್ ಜಗತ್ತಿನೊಳಗಿನ ಕಲ್ಮಶತೆಯ ಕುರಿತು ಒಂದು ಲೇಖನ ಹಾಕಿರುವೆ. ಬಿಡುವಾದಾಗ ನೋಡಿ.
We have already made our donation through our company (All 800 the employees have contributed a day's towards the flood relief.
ಮನಸು ಮೇಡಂ,
ನನ್ನ ಲೇಖನದ ಧಾಟಿಯನ್ನು ಚನ್ನಾಗಿ ಅರ್ಥ ಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿದ್ದೀರಿ ಅದಕ್ಕೆ ಧನ್ಯವಾದಗಳು. ಹೀಗೆ ನನ್ನ ಬ್ಲಾಗಿಗೆ ಭೇಟಿ ಕೊಡುತ್ತಿರಿ.
ಪ್ರೀತಿಯ ತೇಜಸ್ವಿನಿಯವರೆ,
ನಾವು ಸಹಾಯ ಮಾದಬೇಕಾದರೆ ಸಂಘಟನೆಯ ಮೂಲಕವೇ ಮಾಡಬೇಕೆಂದೇನಿಲ್ಲ ಎನ್ನುವ ನಿಮ್ಮ ಮಾತನ್ನು ನಾನು ಒಪ್ಪುತ್ತೇನೆ. ಆದರೆ ನಾವು ಪ್ರತ್ಯೇಕವಾಗಿ ಕಳಿಸುವ ಬಹಳಷ್ಟು ಹಣ ಮಧ್ಯವರ್ತಿಗಳ ಪಾಲಾಗುವದರಿಂದಲೇ ಒಂದು ಸಂಘಟನೆಯ ಮೂಲಕ ಅದು ಬರಹಗಾರರಂಥ ಸಂಘಟನೆಯ ಮೂಲಕ ಕಳಿಸುವದರಿಂದ ಅದಕ್ಕೊಂದು ಹೆಚ್ಚು ತೂಕ, ಮೌಲ್ಯವಿರುತ್ತದೆ ಮತ್ತು ಇದು ಬರಹಗಾರರ ಸಂಘಟನೆಯಿಂದ ಬಂದಿದೆ ಎನ್ನುವ ಕಾರಣಕ್ಕೇನೆ ತಪ್ಪಿಸದೆ ತಲುಪಿಸಬೇಕಾದ ಜಾಗಕ್ಕೆ ತಲುಪಿಸಲಾಗುತ್ತದೆ. ಹಾಗು ಏನಾದರು ಹೆಚ್ಚುಕಮ್ಮಿಯಾದರೆ ನಾವು ಸಂಘಟನೆಯ ಮೂಲಕ ಕೇಳಬಹುದೆಂಬ ಉದ್ದೇಶದಿಂದ ನಮ್ಮ ಟೀಮಿನಿಂದ ಕಳಿಸಿದರೆ ಒಳಿತು ಎಂಬ ಅರ್ಥದಲ್ಲಿ ಹೇಳಿದ್ದೇನೆ ಹೊರತು ಅವರು ಕೊಟ್ಟಿದ್ದನ್ನು ಜಗಜ್ಜಾಹಿರುಗೊಳಿಸಬೇಕೆಂಬ ಉದ್ದೇಶದಿಂದಲ್ಲ. ಸಹಾಯವನ್ನು ಹೇಗೆ ಬೇಕಾದರು ಮಾದಬಹುದು ಮಾಡಿದ್ದನ್ನು ಹೇಳಿಕೊಳ್ಳಬಾರದು ಎನ್ನುವ ನಿಮ್ಮ ಈ ಮಾತನ್ನು ಸಹ ಒಪ್ಪುತ್ತೇನೆ. ಆದರೆ ಒಂದು ಸಂಘಟನೆಯಿರಬೇಕಾದರೆ ಅದರಿಂದ ಚಾಲನೆ ನೀಡಿದರೆ ಒಳಿತಾಗಿತ್ತು ಎನ್ನುವದಷ್ಟೆ ನನ್ನ ಅಭಿಪ್ರಾಯವಾಗಿತ್ತು. ಮೇಲಾಗಿ ನೀವೇ ಹೇಳಿದಂತೆ ನನ್ನೀ ಲೇಖನದಿಂದ ಪ್ರೇರಿತರಾಗಿ ಹಲವರು ಮುಂದೆ ಬಂದು ಸಹಾಯನೀಡಲೆಂಬುದಷ್ಟೆ ನನ್ನ ಉದ್ದೇಶವಾಗಿತ್ತು. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮಿಸಿ.
ಅಂದಹಾಗೆ ನಿಮ್ಮ ಲೇಖನವನ್ನು ಓದಿ ಅಲ್ಲಿಯೇ ಕಾಮೆಂಟಿಸುವೆ!
ಜಯಲಕ್ಷ್ಮಿ ಮೇಡಂ,
ಮೊಟ್ಟ ಮೊದಲಿಗೆ ಪರಿಹಾರ ಧನ ನೀಡಿದ್ದಕ್ಕಾಗಿ ಅಭಿನಂದನೆ ಹಾಗು ನಿಮ್ಮ ಅಭಿಪ್ರಾಯಕ್ಕೆ ಧನ್ಯವಾದಗಳು. ಆಗಾಗ ನನ್ನ ಬ್ಲಾಗಿಗೆ ಭೇಟಿ ಕೊಡುತ್ತಿರಿ.
ಉತ್ತಮ ಯೋಚನೆ ಸರ್,
ಸರಿಯಾದ ಜನರಿಗೆ ಮುಟ್ಟುತ್ತೆಯಾದರೆ ಎಲ್ಲರು ಕೊಡುತ್ತಾರೆ, ಅದರ ಬರವಸೆಯೇ ಇಲ್ಲವಲ್ಲ..... ದೇಣಿಗೆಗಾಗಿ ಬಂದ ಎಲ್ಲರಿಗೂ ನಾನು ಕೊಟ್ಟಿದ್ದೇನೆ, ತೊಂದರೆಯಾದ ಜನರಿಗೆ ಉಪಯೋಗವಾಗತ್ತೆ ಎಂಬ ನಂಬಿಕೆ ಬಿಟ್ಟು.....
ಉದಯ್ ಸರ್,
ನಿಮ್ಮ ಅಭಿಪ್ರಾಯ ಸರಿ. ಬ್ಲಾಗಿಗರಾಗಿ ನಾವು ಈ ವಿಚಾರದಲ್ಲಿ ಹಿಂದೆ ಬಿದ್ದರೂ, ನಾವು ದಿನಪತ್ರಿಕೆ ವಿತರಕರು ಈ ನಿಟ್ಟಿನಲ್ಲಿ ಆಗಲೇ ತೊಡಗಿಕೊಂಡಿದ್ದೇವೆ. ಪುಟ್ಟ ಪುಟ್ಟ ಬೀಟ್ ಹುಡುಗರೂ ಕೂಡ ಐದು ಹತ್ತು ಕೊಡುತ್ತಿದ್ದಾರೆ. ಸದ್ಯದಲ್ಲೇ ಡಿ.ಡಿ ತೆಗೆದು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕಳಿಸುವವರಿದ್ದೇವೆ...
ದಿನಕರ್,
ಕೇಳಿಕೊಂಡು ಬಂದವರಿಗೆಲ್ಲಾ ಮತ್ತೆ ಮತ್ತೆ ಕೊಟ್ಟ ನಿಮ್ಮ ಧಾರಾಳತನಕ್ಕೆ ಹ್ಯಾಟ್ಶಾಫ್! ಅದು ತಲುಪಬೇಕಾದವರನ್ನು ತಲುಪುತ್ತದೋ ಇಲ್ಲವೋ ಎನ್ನುವ ನಿರಾಶವಾದ ಹಾಗೂ ಜಿಜ್ಞಾಸೆ ಬೇಡ. ಕೊಡುವ ಮನಸ್ಸೊಂದಿದ್ದರೆ ಸಾಕು. ಅದು ತಲುಪತ್ತದೆ ಮತ್ತು ತಲುಪಲಿ ಎಂದು ಹಾರೈಸುತ್ತೇನೆ.
ಶಿವು,
ನೀವು ಈಗಾಗಲೆ ದಿನಪತ್ರಿಕೆ ವಿತರಕರು ಈ ನಿಟ್ಟಿನಲ್ಲಿ ಕೆಲಸ ಮಾಡಿದ್ದು ಕೇಳಿ ಖುಶಿಯಾಯಿತು. ಎಲ್ಲಕ್ಕಿಂತ ಹೆಚ್ಚಾಗಿ ಪುಟ್ಟ ಪುಟ್ಟ ಬೀಟ್ ಹುಡುಗರೂ ಕೂಡ ಯಾವುದೇ ಜಿಜ್ಞಾಸೆಕ್ಕೊಳಗಾಗದೆ ಐದು ಹತ್ತು ಕೊಡುತ್ತಿದ್ದಾರೆ ಎನ್ನುವದು ಹೆಚ್ಚಿನ ಖುಶಿಯ ವಿಚಾರ. keep it up.
ನಿಜ ಬ್ಲಾಗಿಗರಿಂದ ಸಾಧ್ಯವಾದಷ್ಟು ಸಹಾಯ ಆಗಲೇಬೇಕು. ಜಿ ಎನ್ ಮೋಹನ್ ಸರ್ ದಯವಿಟ್ಟು ಮುಂದಾಳತ್ವವಹಿಸಿಕೊಳ್ಳಿ, ತಡವಾಗುವುದು ಬೇಡ.
ಜಯಲಕ್ಶ್ಮಿ ಮೇಡಂ,
ನಿಮ್ಮ ಸಹಮತಕ್ಕೆ ವಂದನೆಗಳು. ಆದರೆ ಇದೆ ಕಾಮೆಂಟನ್ನು ಬ್ಲಾಗರ್ಸ್ ತಾಣದಲ್ಲಿ ಆರಂಭವಾದ ನನ್ನ ಚರ್ಚೆಯ ಫೋರಂನಲ್ಲಿ ಹಾಕಿ. ಆಗ ಎಲ್ಲರೂ ಓದಿಯಾದರು ಎಚ್ಚೆತ್ತುಕೊಳ್ಳಲಿ. ಹಾಗೂ ಮೋಹನ್ ಅವರು ಮುಂದಾಳತ್ವವನ್ನು ವಹಿಸಿಕೊಂಡಾರು.
ಕಾಮೆಂಟ್ ಪೋಸ್ಟ್ ಮಾಡಿ