ಮೊನ್ನೆ ಉತ್ತರ ಕರ್ನಾಟಕದಲ್ಲಿ ನೆರೆ ಸಂಭವಿಸಿ ಒಂದು ವಾರವಾಗುತ್ತಾ ಬಂದರೂ ಯಾವ ಬ್ಲಾಗರೂ ನೆರೆ ಸಂತ್ರಸ್ತರಿಗೆ ನಮ್ಮ ಬ್ಲಾಗರ್ಸ್ ಸಂಘದಿಂದ ಪರಿಹಾರ ನಿಧಿಯೊಂದನ್ನು ನೀಡಿದರೆ ಹೇಗೆ ಎಂದು ಯೋಚಿಸದೇ ಇದ್ದುದಕ್ಕೆ ಬೇಸತ್ತು ಬರಹಗಾರರೇ ಹೀಗಾದರೆ ಹೇಗೆಂದು ಅವರಿಗೆ ಅದೇ ಬ್ಲಾಗರ್ಸ್ ಜಾಲತಾಣದ ಮೂಲಕ ಇದರ ಬಗ್ಗೆ ಯೋಚಿಸಿ ಎಂದು ನನ್ನ ಲೇಖನವೊಂದರ ಮೂಲಕ ಸ್ವಲ್ಪ ಖಾರವಾಗಿ ಆಗ್ರಹಿಸಿದ್ದೆ. ಇದನ್ನು ಓದಿದ ಗಂಭೀರ ಬರಹಗಾರರೊಬ್ಬರು ನನ್ನ ಇಂಥ ಮಾತುಗಳಿಂದ ಅವರಿಗೆ (ಬರಹಗಾರರಿಗೆಲ್ಲರಿಗೂ) ಇರುಸುಮುರುಸಾಗಿದೆಯೆಂದು ಹಾಗೂ ಈ ಮೂಲಕ ಬರಹಗಾರರನ್ನು ಚುಚ್ಚಿದ್ದೇನೆಂದು ನೊಂದುಕೊಂಡು ಬರಹಗಾರರದು ಬರಿ ಬರೆಯುವದಷ್ಟೆ ಕೆಲಸ ಮಿಕ್ಕೆಲ್ಲವೂ ಬೇರೆಯವರದು ಎನ್ನುವಂತೆ ಬರಹಗಾರರನ್ನು ವಹಿಸಿಕೊಂಡು ಬರೆದ ತಮ್ಮ ಲೇಖನವೊಂದರ ಮೂಲಕ ಗಂಭೀರವಾಗಿ ಆರೋಪಿಸಿದ್ದಾರೆ. ಮೊದಲಿಗೆ ನನ್ನ ಮಾತಿನಿಂದ ಅವರಿಗೆ ಇರುಸುಮುರುಸಾಗಿದ್ದರೆ ಮುಜುಗರವಾಗಿದ್ದರೆ ಅದಕ್ಕೆ ನನ್ನ ವಿಷಾದವಿದೆ ಎಂದು ಹೇಳುತ್ತಾ ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ. ಮೊದಲಿಗೆ ಇಡಿ ಉತ್ತರ ಕರ್ನಾಟಕ ನೆರೆಯಲ್ಲಿ ಕೊಚ್ಚಿಹೋಗಿರುವ ಇಂಥ ಸಂದರ್ಭದಲ್ಲೂ ಸಂತ್ರಸ್ತರಿಗೆ ಈಗಾಗಲೆ ತಮ ತಮ್ಮ ವ್ಯಯಕ್ತಿಕ ನೆಲೆಯಲ್ಲಿ ಸಹಾಯ ಮಾಡಿದ ಮೇಲೂ ಮತ್ತೆ ಬ್ಲಾಗರ್ಸ್ ಸಂಘದಿಂದ ಮಾಡಬೇಕೋ ಬೇಡವೋ? ಮಾಡಿದರೆ ಅದು ಸಂತ್ರಸ್ತರನ್ನು ತಲುಪುತ್ತದೋ ಇಲ್ಲವೋ ಎಂಬ ಚರ್ಚೆ, ಜಿಜ್ಞಾಸೆ ಮಾಡುತ್ತಾ ಕೂಡುವಂಥ ಸಮಯವೇ ಇದು? ಇಂಥ ಮೂರ್ಖತನಕ್ಕೆ ಏನು ಹೇಳಬೇಕು? ಇಂಥ ಕ್ಷುಲ್ಲಕ ವಿಷಯಗಳಿಗೇ ನಾನು ಬರಹಗಾರರನ್ನು hate ಮಾಡುವದು. ಒಂದು ವೇಳೆ ಎಲ್ಲರೂ ನಮ್ಮ ತರಾನೆ ಯೋಚಿಸಿದ್ದರೆ ಮೊನ್ನೆ ಮುಖ್ಯಮಂತ್ರಿಗಳು ಪಾದಯಾತ್ರೆ ಮೂಲಕ ದೇಣಿಗೆ ಸಂಗ್ರಹಿಸಲು ಹೊರಟಾಗ ಸಾರ್ವಜನಿಕರಿಂದ ಬರಿ ಬೆಂಗಳೂರೊಂದರಲ್ಲಿಯೇ ೩ ಕೋಟಿಯಷ್ಟು ಹಣ ಹೇಗೆ ಸಂಗ್ರಹವಾಗುತ್ತಿತ್ತು? ಸಂತ್ರಸ್ತರಿಗೆ ಸಹಾಯವಾದರೆ ಸಾಕೆಂದು ಎರೆಡೆರಡು ಬಾರಿ ಸಹಾಯ ಮಾಡಿದ ಎಷ್ಟೊ ಜನರಿದ್ದಾರೆ. ನಮ್ಮ ಬ್ಲಾಗರ್ ಶಿವು ಅವರ ಕೆಳಗೆ ಕೆಲಸ ಮಾಡುವ ಪೇಪರ್ ಬೀಟ್ ಹುಡುಗರು ಸಹ ಐದೋ ಹತ್ತೋ ರೂಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಅಂಥದುರಲ್ಲಿ ನಾವು ಬರಹಗಾರರು ಈಗಾಗಲೆ ಸಹಾಯ ಮಾಡಿದಮೇಲೂ ಐವತ್ತೋ ಅರವತ್ತೋ ನೀಡದಿರುವಷ್ಟು ಕಡುಬಡವರೆ? ಸದರಿ ಲೇಖಕರು ಒಂದೇ ಉದ್ದೇಶಕ್ಕೆ ಎರಡೆರೆಡು ಬಾರಿ ಸಹಾಯ ಮಾಡದಿರುವಷ್ಟು ಬರಹಗಾರರು ಬಡವರಿದ್ದಾರೆ ಎಂದು ಹೇಳಿದ್ದಾರೆ. ಏನ್ ಸ್ವಾಮಿ? ಇವತ್ತಿನ ಕಾಲದಲ್ಲಿ ಯಾವ ಬರಹಗಾರ ಬರಿ ಬರವಣಿಗೆಯೊಂದನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾನೆ? ಎಲ್ಲ ಬರಹಗಾರರಿಗೆ ಒಂದಲ್ಲ ಒಂದು ಉದ್ಯೋಗವಿದೆ. ಅದೂ ನಮ್ಮ ಬಹಳಷ್ಟು ಬ್ಲಾಗರ್ಸ್ ಒಳ್ಳೆ ಉದ್ಯೋಗದಲ್ಲಿದ್ದುಕೊಂಡೇ ಬರವಣಿಗೆಯನ್ನು ಮುಂದುವರಿಸುತ್ತಿದ್ದಾರೆ. ಅಂಥವರಿಂದ ಇನ್ನೊಂದು ಅತಿ ಸಣ್ಣ ಸಹಾಯವನ್ನು ನಿರೀಕ್ಷಿಸುವದು ತಪ್ಪೆ? ಏಕೆಂದರೆ ಸಹಾಯ ಮಾಡುವಾಗ ಇಂತಿಷ್ಟೆ ಮಾಡಬೇಕೆಂಬ ನಿಯಮವೇನೂ ಇಲ್ಲವಲ್ಲ? ಎಲ್ಲರೂ ಅವರವರ ಶಕ್ತಾನುಸಾರ ಮಾಡುತ್ತಾರೆ. ಆದರೆ ಕಡಿಮೆಕೊಟ್ಟರೆ ಎಲ್ಲಿ ತಮ್ಮ ಘನತೆಗೆ ಕುಂದು ಬರುತ್ತದೋ ಎಂದು ಹಿಂದೆ ಮುಂದೆ ನೋಡುವವರನ್ನು ಹಿಂದೆ ತಳ್ಳಿ. ಇಂಥ ಸಮಯದಲ್ಲೂ ಚರ್ಚೆ, ಜಿಜ್ಞಾಸೆ ಮಾಡುತ್ತಾ ಕಾಲ ಕಳೆಯುವದು ಬಿಟ್ಟು ತಕ್ಷಣ ನಾವು ಅಂದರೆ so called ಬರಹಗಾರರು ಕಾರ್ಯೋನ್ಮುಖರಾಗಬೇಕಿದೆ.
ನಾನು ನನ್ನ ಲೇಖನದಲ್ಲಿ ನಾವು ಬರಹಗಾರರು ನಮ್ಮ ಮೇಲೆ ಗುರುತರವಾದ ಜವಾಬ್ದಾರಿಯಿದೆ, ಮೇಲಾಗಿ ನಮ್ಮದೇ ಆದಂತ ಸಂಘಟನೆಯಿರುವದರಿಂದ ಆ ಮೂಲಕ ಸದಸ್ಯರೆಲ್ಲಾ ಒಟ್ಟಾಗಿ ಒಂದು ಸಣ್ಣ ಪರಿಹಾರ ನಿಧಿಯೊಂದನ್ನು ನೀಡಿದ್ದರೆ ಒಳಿತಿತ್ತು ಎಂದು ನೇರವಾಗಿ ಅಲ್ಲದಿದ್ದರೂ ಸೂಕ್ಷ್ಮವಾಗಿ ಹಾಗೂ ಪರೋಕ್ಷವಾಗಿ ಹೇಳಿದ್ದೆ. ಹಾಗಂತ ನನಗೆ ಸಂಘಟನೆಗಳ ಮೂಲಕವೇ ಸಹಾಯ ಮಾಡಬೇಕೆನ್ನುವ ಖಯಾಲಿಯಿದೆಂದಲ್ಲ. ಏಕೆಂದರೆ ಈಗಾಗಲೆ ನಾನೂ ಸಹ ವ್ಯಯಕ್ತಿಕ ನೆಲೆಯಲ್ಲಿ ಸಹಾಯ ಮಾಡಿದ್ದೇನೆ. ಅದು ಇಲ್ಲಿ ಅಪ್ರಸ್ತುತ. ಸಾಮಾನ್ಯವಾಗಿ ಇಂಥ ಸಂದರ್ಭದಲ್ಲಿ ಎಲ್ಲರೂ ಬರಹಗಾರರು ಹೇಗೆ ಸ್ಪಂದಿಸಬಹುದು? ಎಂದು ಕಾಯುತ್ತಿರುತ್ತಾರೆ ಹಾಗೂ ನಮ್ಮದೇ ಆದಂಥ ಒಂದು ಸಂಘಟನೆಯಿರುವದರಿಂದ ಇನ್ನೂ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಹೇಗೆ ನೀವು ವ್ಯಯಕ್ತಿಕ ನೆಲೆಯಿಂದ ನಿಮ್ಮ ಕಛೇರಿಗಳಿಂದ, ಸಂಸ್ಥೆಗಳಿಂದ ದಾನ ಮಾಡುತ್ತೀರೋ ಹಾಗೆಯೇ ನಮ್ಮ ಬ್ಲಾಗರ್ಸ್ ಸಂಸ್ಥೆಯಿಂದ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಿದ್ದರೆ ಒಳಿತಿತ್ತೆಂದೂ ಮೇಲಾಗಿ ಒಂದು ಸಂಘಟನೆಯಿಂದ ಅದೂ ಬರಹಗಾರರಂಥ ಸಂಘಟನೆಯಿಂದ ಮಾಡಿದ್ದರೆ ಅದಕ್ಕೆ ಒಂದು ಸಾತ್ವಿಕತೆಯಿರುವದರಿಂದ ಅದನ್ನು ಸಾಮಾನ್ಯವಾಗಿ ಯಾರೂ ದುರುಪಯೋಗ ಮಾಡಿಕೊಳ್ಳಲಾರರು ಒಂದು ವೇಳೆ ದುರುಪಯೋಗವಾದರು ಬರಹಗಾರರು ಕತ್ತಿನ ಪಟ್ಟಿ ಹಿಡಿದು ಕೇಳುತ್ತಾರೆ ಎಂಬ ಹೆದರಿಕೆಯಿಂದಾದರೂ ಅದನ್ನು ತಲುಪಿಸಬೇಕಾದ ಜಾಗಕ್ಕೆ ತಲುಪಿಸುತ್ತಾರೆ ಎಂಬ ಕಳಕಳಿಯಿಂದ ಹೇಳಿದ್ದೆ. ಆದರೆ ನನ್ನ ಉದ್ದೇಶವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಇಂಥ ಒಂದು ಆಗ್ರಹದ ಮೂಲಕ ನಾನು ಪ್ರಚಾರವನ್ನು ಗಿಟ್ಟಿಸಿಕೊಳ್ಳುತ್ತೇದ್ದೇನೆಂದೂ ಅಥವಾ ನಾನೊಬ್ಬ ದೊಡ್ದ ಸಮಾಜ ಸುಧಾರಕ ಎಂಬಂತೆ ಪೋಸ್ ಕೊಡುತ್ತಿದ್ದೇನೆಂದೂ ಕೆಲವು ಜನ ತಿಳಿದುಕೊಂಡಿದ್ದಾರೆ. ಅಂಥವರಿಗೆ ನಾನೇನೂ ಮಾಡಲಾಗುವದಿಲ್ಲ.
ಅಸಲಿಗೆ ನಾನು ನನ್ನ ಲೇಖನದಲ್ಲಿ ಬ್ಲಾಗರ್ಸ್ ಸಂಘದ ಎಲ್ಲ ಸದಸ್ಯರಿಂದ ಒಂದಿಷ್ಟು ಪರಿಹಾರ ನಿಧಿ ನೀಡಿದರೆ ಸಾಕಿತ್ತು ಎಂದಷ್ಟೆ ಹೇಳಿದ್ದೆನೆ ಹೊರತು ಅವರು ಫೀಲ್ಡಿಗಿಳಿದು ಕಾರ್ಯೋನ್ಮುಖರಾಗಬೇಕೆಂದಲ್ಲ. ಆದರೆ ಸದರಿ ಆ ಬರಹಗಾರರು ತಪ್ಪಾಗಿ ಅರ್ಥ ಮಾಡಿಕೊಂಡು ಒಬ್ಬ ಲೇಖಕನದು ಬರಿ ಬರೆಯುವದಷ್ಟೆ ಕೆಲಸ ಆತ ಎಲ್ಲ ಕೆಲಸವನ್ನು ಮಾಡಲಾರ ಹಾಗೆ ಹೀಗೆ ಎಂದೆಲ್ಲಾ ಹೇಳಿದ್ದಾರೆ. ನಾನೂ ಅವರ ಈ ಮಾತನ್ನು ಒಂದು ಹಂತದವರೆಗೆ ಒಪ್ಪುತ್ತೇನೆ. ಆದರೆ ನಾವು ಬರೆಯುವದಕ್ಕೂ ಹಾಗೂ ನಾವು ನಡೆಸುವ ಬದುಕಿಗೂ ಗಾಢ ಸಂಬಂಧವಿರುವದರಿಂದ ಬರೆದಂತೆ ಬದುಕುವದು ಗೌರವಯುತವಾಗಿರುತ್ತದೆ. ಏಕೆಂದರೆ ಎಷ್ಟೋ ಬರಹಗಾರರಲ್ಲಿ ಕೊಳಕುತನ ಮನೆ ಮಾಡಿರುವದನ್ನು ನಾನು ತುಂಬಾ ಹತ್ತಿರದಿಂದ ನೋಡಿ ಬೇಸತ್ತಿದ್ದೇನೆ ಹಾಗೂ ಅವರ ಮೇಲಿನ ಗೌರವ ಕ್ಷಣಾರ್ಧದಲ್ಲಿ ಕರಗಿಹೋಗಿದೆ. ಬರಿ ಪುಸ್ತಕ ಬರೆಯುತ್ತಾ ಹೊಲಸು ರಾಜಕಾರಣ ಮಾಡುತ್ತಾ ಒಂದು ತರಗತಿಯನ್ನೂ ಸಹ ತೆಗೆದುಕೊಳ್ಳದೆ ಸದಾ ಕಾಲೇಜಿನಿಂದ ಹೊರಗುಳಿಯುವ ಬರಹಗಾರ ಅಧ್ಯಾಪಕ ಮಿತ್ರರನ್ನು ನಾನು ನೋಡಿದ್ದೇನೆ. ಎಲ್ಲೋ ಯಾರಿಗೋ ಪ್ರಶಸ್ತಿ ಬಂದರೆ ಅವರನ್ನು ಹೀಯಾಳಿಸಿ ಮಾತನಾಡುವ ಲೇಖಕಿಯರೊಬ್ಬರೊಟ್ಟಿಗೆ ಕೆಲಸ ಮಾಡಿದ್ದೇನೆ. ಕನ್ನಡ ಕನ್ನಡ ಎಂದು ಸಾರುವ ಕನ್ನಡದ ಖ್ಯಾತ ಕವಿಯೊಬ್ಬರ ಮಗಳು ನನ್ನ ವಿದ್ಯಾರ್ಥಿನಿಯಾಗಿದ್ದು ದ್ವಿತಿಯ ಪಿ.ಯು.ಸಿ ಯಲ್ಲಿ ನಾಲ್ಕೈದು ಬಾರಿ ಕನ್ನಡ ವಿಷಯದಲ್ಲಿಯೇ ಫೇಲ್ ಆಗಿದ್ದಳಲ್ಲದೆ ಕನ್ನಡ ಅಧ್ಯಾಪಕರ ಜೊತೆಯೂ ಸಹ ಆಕೆ ಇಂಗ್ಲೀಷನಲ್ಲಿಯೇ ಮಾತನಾಡುತ್ತಿದ್ದಳು. ಹೀಗಿರುವಾಗ ಲೇಖಕರಿಗೆ, ಬರಹಗಾರರಿಗೆ ನೈತಿಕ ಬಲವಾಗಲಿ, ಹೊಣೆಯಾಗಲಿ ಇರುವದಿಲ್ಲ. ಈ ಕಾರಣಕ್ಕಾಗಿಯೇ ನಾನು ನನ್ನ ಲೇಖನದಲ್ಲಿ ಇದೇ ವಿಷಯವನ್ನು ಒತ್ತಿ ಹೇಳಿದ್ದು.
ಯಾರು ಏನೇ ಹೇಳಲಿ ತಡವಾಗಿದೆಯಾದರೂ ಈ ಕೂಡಲೆ ಬ್ಲಾಗರ್ಸ್ ಸಂಘದಿಂದ ಸಂತ್ರಸ್ತರಿಗೆ ಒಂದಿಷ್ಟು ಸಹಾಯವಾಗಲೇಬೇಕಿದೆ ಎಂದು ನಮ್ಮ ಬ್ಲಾಗರ್ಸ್ ತಾಣದ ಸದಸ್ಯರಾದ ಮನಸ್ಸು, ಜಯಲಕ್ಷ್ಮಿ ಪಾಟೀಲ್, ದಿನಕರ, ಮುಂತಾದವರು ನನ್ನ ಬ್ಲಾಗಲ್ಲಿ ಪ್ರತಿಕ್ರಿಯಿಸುವದರ ಮೂಲಕ ನಮ್ಮ ಸಂಘದ ಅಧ್ಯಕ್ಷರಾದ ಜಿ. ಮೋಹನ್ ಅವರನ್ನು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಯೋಚಿಸುತ್ತಾರೆಂದು ಆಶಿಸುತ್ತಾ ಈ ಚರ್ಚೆಗೆ ತೆರೆ ಎಳೆಯುತ್ತಿದ್ದೇನೆ.
-ಉದಯ್ ಇಟಗಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
132,778
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಪಕ್ಕ ಸಾಹಸಪ್ರಧಾನ ಸಿನಿಮಾ3 ವಾರಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …2 ತಿಂಗಳುಗಳ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ8 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!1 ವರ್ಷದ ಹಿಂದೆ
-
Pic by Hengki Lee3 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
ಕೆಲವು ಹಾಯ್ಕುಗಳು...ಒಂದು ಕವನ5 ವರ್ಷಗಳ ಹಿಂದೆ
-
ಅಳಿವು ಉಳಿವಿನ ನಡುವೆ...5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?6 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!6 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್6 ವರ್ಷಗಳ ಹಿಂದೆ
-
ಹೊಸದೊಂದು ಜಾವಳಿ7 ವರ್ಷಗಳ ಹಿಂದೆ
-
ಮಾಯೆ7 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ7 ವರ್ಷಗಳ ಹಿಂದೆ
-
ಅನುಸಂಧಾನ-೩7 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ9 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್9 ವರ್ಷಗಳ ಹಿಂದೆ
-
ಕತ್ತಲೆ.................9 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..9 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ9 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ9 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...10 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ10 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?11 ವರ್ಷಗಳ ಹಿಂದೆ
-
ತೀರ....11 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ11 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?11 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)12 ವರ್ಷಗಳ ಹಿಂದೆ
-
(ಮಹಿಳಾ)ವಾದ:12 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್13 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು14 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧14 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು15 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು15 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?15 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...17 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಏಕೋ ಏನೋ ಅಲ್ಲಿ ಒಂದಷ್ಟು ಒಳದನಿಗಳು ಮಾರ್ದನಿಸಲೇ ಇಲ್ಲ!
- ಪ್ರವೇಶನ.......
- ಉರಿದು ಬಿದ್ದ ಉಲ್ಕೆ-ಕಮಲಾ ದಾಸ್
- ನಿನ್ನ ಪ್ರೀತಿಸುವದೇ ಒಂದು ಹಿಂಸೆ!
- ನಾವು ಹುಡುಗರೇ ಹೀಗೆ........
- ಮರ ಕತ್ತರಿಸುವದು
- ಅವ್ವಂದಿರ ವಿಶೇಷ ದಿನಕ್ಕಾಗಿ ಅವ್ವನ ಮೇಲೆ ಒಂದಿಷ್ಟು ಪದ್ಯಗಳು
- ಹೆಣ್ಣು ಸದಾ ಸಂದಿಗ್ಧ, ಗೊಂದಲಗಳಲ್ಲಿಯೇ ತನ್ನ ಸಾಕಷ್ಟು ಸಮಯ ಕಳೆದು ಬಿಡುತ್ತಾಳೆ!
- ನಾನೂ ಹಾಫ್ ಸೆಂಚ್ಯುರಿ ಬಾರಿಸಿಬಿಟ್ಟೆ!
- ಸತ್ತವರ ಹಾದಿ
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
3 ಕಾಮೆಂಟ್(ಗಳು):
ಉತ್ತಮ ವಿಚಾರ ಸರ್...
ಎಲ್ಲರೂ ಸೇರಿ ಹನಿ ಹನಿಯಾದರೂ ಸೇರಿಸಿ ಕೊಡೋಣ.....
ದಿನಕರ್,
ನಿಮ್ಮ ಸಹಮತಕ್ಕೆ ವಂದನೆಗಳು.
ಉದಯ್ ಸಾರ್,
ನೀವು ಹೇಳಿದ್ದು ಖರೆ... ನಾವೂ ಸಹಾಯ ಮಾಡೋಣ...ಆದರೆ...
ಈಗಾಗಲೇ ಹೆಚ್ಚಿನ ಮಂದಿ ನೆರೆ ಸಂತ್ರಸ್ತರಿಗೆ ಉದಾರ ದೇಣಿಗೆ ನೀಡಿದ್ದಾರೆ.. ಈಗ ಮತ್ತೊಮ್ಮೆ ಕೇಳಿದರೆ ಬಹುಶ ಕೆಲವರಿಗೆ ಕಹಿಯಾಗಬಹುದು... ಹಾಗಂತ ನಾವು ದುಡ್ಡು ಕೊಟ್ಟ ಕೂಡಲೇ ನಮ್ಮ ಜವಾಬ್ದಾರಿ ಮುಗಿಯಿತು , ನಾನು ಸಹಾಯ ಮಾಡಿದೆ ಅಂತ ಬೀಗುವುದರಲ್ಲಿ ಹುರುಳಿಲ್ಲ... ಹಾಗಾದರೆ ನಾವೇನು ಮಾಡಬಹುದು..?? ಈಗಾಗಲೇ ಕೇಂದ್ರ ಸರಕಾರ ೧೦೦೦ ಕೋಟಿ, ರಾಜ್ಯ ಸರಕಾರ ಹತ್ತಿರ ಹತ್ತಿರ ೫೦೦ ಕೋಟಿ , ಹೀಗೆ ಬೇರೆ ಬೇರೆ ಕಡೆಯಿಂದ ಕಡಿಮೆಯೆಂದರೂ ೨೦೦೦ ಕೋಟಿಯಷ್ಟು ದುಡ್ಡು ನೆರೆ ಸಂತ್ರಸ್ತರಿಗೆ ಒಟ್ಟಾಗಿದೆ ... ಈ ಎಲ್ಲಾ ದುಡ್ಡು ಅವರಿಗೆ ಸೇರುತ್ತದೆಯೇ??? ಇದರಲ್ಲಿ ಅಧಿಕಾರಿಗಳು ತಿನ್ನುವ ಪಾಲೆಷ್ಟು? ಲಂಚ ಎಷ್ಟು ಕೊಡಬೇಕು??
ಹಾಗಂತ ಆಲೋಚಿಸಿದವನೇ ಮೊನ್ನೆಯಷ್ಟೇ ಭಾರಿ ಮಳೆಯಿಂದ ಕಂಗಾಲಾದ ಮಂಗಳೂರಿನ ಒಂದು ಗ್ರಾಮದತ್ತ ಸಾಗಿದ್ದೆ.. ನೆರೆ ಪರಿಹಾರಕ್ಕಾಗಿ ಜನರು ಅರ್ಜಿ ಸಲ್ಲಿಸಬೇಕಾಗಿದೆ.. ಆದರೆ ಅರ್ಜಿ ಪಡೆಯುವುದಕ್ಕೂ ಲಂಚ ಕೇಳುವ, ಸಿಗುವ ಪರಿಹಾರದಲ್ಲಿ ಇಂತಿಷ್ಟು ತಮಗೆ ಕೊಡಿ ಅಂತ ಬೇಡುವ ಹಡಬೆ ಅಧಿಕಾರಿಗಳನ್ನು ಕಣ್ಣಾರೆ ಕಂಡು ಸಂಕಟ ಪಟ್ಟೆ.. ಅಂಥ ಇಬ್ಬರು ಅಧಿಕಾರಿಗಳನ್ನು ನಟ್ಟ ನಡು ರಸ್ತೆಯಲ್ಲಿ ಬೆತ್ತಲೆ ನಿಲ್ಲಿಸುವವರೆಗೂ ನನ್ನ ಸಿಟ್ಟು ಕಮ್ಮಿಯಾಗಿರಲಿಲ್ಲ....
ಇದಿಷ್ಟೂ ಯಾಕೆ ಹೇಳಿದೆ ಅಂದರೆ, ಕೇವಲ ದುಡ್ಡು ಕೊಡುವುದರಲ್ಲಿ ಅದೇನೂ ದೊಡ್ದಸ್ಥಿಕೆಯಿಲ್ಲ, ಬದಲಿಗೆ ರೈತರಿಗೆ, ನೆರೆಯಿಂದ ತೊಂದರೆಗೊಳಗಾದವರಿಗೆ ಅವರ ಪರಿಹಾರ ಸರಿಯಾಗಿ ಸಿಗುವಂತೆ ಮಾಡುವುದು ಹೇಗೆ ?? ಸರಕಾರೀ ಹೆಗ್ಗಣಗಳನ್ನು ಕಟ್ಟಿ ಹಾಕಿ ಸಾಮಾನ್ಯನಿಗೆ ನ್ಯಾಯ ದೊರಕಿಸೋದು ಹೇಗೆ? ಅನ್ನೋದು ಸಹ ಅಷ್ಟೆ ಮುಕ್ಖ್ಯವಾದದ್ದು.. ನಾವು ಸ್ವಲ್ಪ ಅದರ ಬಗ್ಗೆಯೂ ಯೋಚಿಸಬೇಕು ಅಲ್ಲವೇ...?
ಅಂದ ಹಾಗೆ ಬ್ಲಾಗ್ ಗೆಳೆಯರವತಿಯಿಂದ ಪರಿಹಾರ ನೀಡಲು ನಾನು ಸಿದ್ಧ.. ಎಲ್ಲರಿಗೂ ಒಳ್ಳೆಯದಾಗಲಿ...
ಕಾಮೆಂಟ್ ಪೋಸ್ಟ್ ಮಾಡಿ