ನಾನು ಬಾಲ್ಯದಲ್ಲಿರಬೇಕಾದರೆ ಹೊಸವರ್ಷವೆಂದರೆ ಕೇವಲ ಗಡಿಯಾರದ ಮುಳ್ಳು ಸರಿಯುವದಷ್ಟೆ ಎಂದುಕೊಂಡಿದ್ದೆ. ನಾನು ಮಾತ್ರವಲ್ಲ ನನ್ನ ಓರಗೆಯವರು ಹಾಗೂ ದೊಡ್ಡವರೂ ಅದನ್ನೇ ಅಂದುಕೊಂಡಿದ್ದರು. ಏಕೆಂದರೆ ನಾನು ಬೆಳೆದಿದ್ದು ಒಂದು ಚಿಕ್ಕ ಹಳ್ಳಿ ಕಲಕೋಟಿಯಲ್ಲಿ. ಹೀಗಾಗಿ ಅಲ್ಲಿ ಹೊಸವರ್ಷವನ್ನು ಸ್ವಾಗತಿಸುವ ಸಡಗರ, ಸಂಭ್ರಮಗಳ ‘ನಾಗರಿಕತೆ’ ಆ ಊರಿಗೆ ಇನ್ನೂ ಕಾಲಿಟ್ಟಿರಲಿಲ್ಲ. ಹೀಗಾಗಿ ಹೊಸವರ್ಷದ ದಿನವೂ ಸಹ ಎಲ್ಲ ದಿನಗಳಂತೆ ಯಾವುದೇ ವಿಶೇಷವಿಲ್ಲದೆ ಕಳೆದು ಹೋಗುತ್ತಿತ್ತು. ಮುಂದೆ ನಾನು ಗದಗ್ಗೆು ಬಂದೆ. ಅದು ಆಗಿನ್ನೂ ತಾಲೂಕ ಕೇಂದ್ರವಾಗಿತ್ತು. ಅಲ್ಲಿ ಕೂಡ ಹೊಸವರ್ಷದ ದಿನದಂದು ಹೇಳಿಕೊಳ್ಳುವಂಥ ಆಚರಣೆಗಳು ನಡೆಯದಿದ್ದರೂ atleast ಪರಸ್ಪರ ಶುಭಾಷಯಗಳನ್ನು ಹೇಳುವ ಪದ್ದತಿಯಿತ್ತು. ಮುಂದೆ ಪಿ.ಯು.ಸಿಗೆ ಧಾರವಾಡಕ್ಕೆ ಬಂದಾಗಲೂ ನಾನು ಯಾವುದೇ ತರದ ಆಚರಣೆಗಳನ್ನು ಮಾಡಲಿಲ್ಲ. ಬಹುಶಃ ಅದಕ್ಕೆ ಹೇಳಿಕೊಳ್ಳುವಂಥ ಆತ್ಮೀಯ ಸ್ನೇಹಿತರ ಕೊರತೆ ಇದ್ದಿರಬಹುದು.
ಧಾರವಾಡದಿಂದ ನಾನು ಡಿಗ್ರಿ ಮಾಡಲು ಮಂಡ್ಯಕ್ಕೆ ಬಂದಾಗ ಅಲ್ಲಿ ಒಂದು ಸ್ನೇಹಿತರ ಗುಂಪಿಗೆ ಸೇರ್ಪಡೆಯಾದೆ. ಆ ಗುಂಪಿನವರಲ್ಲಿಯೇ ಇಬ್ಬರಾದ ಮಂಜು ಮತ್ತು ರಾಘು ಇಂದಿಗೂ ಕೂಡ ಜೀವದ ಗೆಳೆಯರಾಗಿ ಮುಂದುವರಿಯುತ್ತಿದ್ದಾರೆ. ಅವರೊಂದಿಗೆ ಒಂದು ವರ್ಷ ಸೇರಿ ಆಚರಿಸಿದ್ದೆ. ನನಗೆ ಅದು ಮೊಟ್ಟ ಮೊದಲ ಬಾರಿಗೆ ಒಂದು ಪಾರ್ಟಿಯೆಂದರೆ ಹೇಗಿರುತ್ತದೆ ಎನ್ನುವ ಅನುಭವವವನ್ನು ಕೊಟ್ಟಿದ್ದು ಬಿಟ್ಟರೆ ಹೇಳಿಕೊಳ್ಳುವಂಥ ಖುಶಿ ಕೊಟ್ಟಿರಲಿಲ್ಲ. ಡಿಗ್ರಿ ಮುಗಿದ ಮೇಲೆ ಬದುಕು ಹುಡುಕಿಕೊಂಡು ಬೆಂಗಳೂರಿಗೆ ಬಂದ ಹೊಸತರಲ್ಲಿ ನಾನು ಮತ್ತು ನನ್ನ ಆತ್ಮೀಯ ಸ್ನೇಹಿತ ಮಂಜು ಇಬ್ಬರೇ ಸೇರಿ ಆಚರಿಸಿದ್ದೆವು. ನಂತರ ಉದ್ಯೋಗದಲ್ಲಿ ಮುಂದುವರೆದು ಒಂದಷ್ಟು ದುಡ್ಡು ಕೈಯಲ್ಲಿ ಓಡಾಡತೊಡಗಿದಾಗ ಗೆಳೆಯರೆಲ್ಲ ಸೇರಿ ಬೇರೆ ಬೇರೆ ಕಡೆ ಹೋಗಿ ಪಾರ್ಟಿ ಮಾಡಿದ್ದಿದೆ. ಆದರೆ ನಾನು ಆ ಪಾರ್ಟಿಗಳಲ್ಲಿ ಪೂರ್ಣ ಮನಸ್ಸಿನಿಂದ ಭಾಗವಹಿಸುತ್ತಿರಲಿಲ್ಲ. ಏಕೆಂದರೆ ಹೊಸವರ್ಷ ನನಗೆ ಯಾವತ್ತೂ ವಿಶೇಷ ದಿನವಾಗಿ ಕಾಣಿಸಿಯೇ ಇಲ್ಲ. ಇದಕ್ಕೆ ಸರಿಯಾದ ಕಾರಣವೇನೆಂದು ಈವರೆಗೂ ತಿಳಿದಿಲ್ಲ. ಬರು ಬರುತ್ತಾ ನಾವು ಸ್ನೇಹಿತರು ಪಾರ್ಟಿ ಮಾಡುವದನ್ನು, ಗ್ರೀಟಿಂಗ್ಸ್ ಕಳಿಸುವದನ್ನೂ ನಿಲ್ಲಿಸಿಬಿಟ್ಟೆವು. ಹಾಗಂತ ನಮ್ಮ ನಡುವೆ ಇರುವ ಆತ್ಮೀಯತೆ ನಿಂತಿಲ್ಲ. ಅದು ದಿನದಿಂದ ದಿನಕ್ಕೆ ಬಲಗೊಳ್ಳುತ್ತಲೇ ಇದೆ. ಬಹುಶಃ ಹೊಸ ವರ್ಷವೆಂದರೆ ಕೇವಲ ಗಡಿಯಾರದ ಮುಳ್ಳು ಸರಿದು ಹೋಗುವದಷ್ಟೇ ಎನ್ನುವ ಸತ್ಯವನ್ನು ಕಂಡುಕೊಂಡೆವೆ? ಗೊತ್ತಿಲ್ಲ.
ಇದೇ ಭಾವವನ್ನು ಬಿಂಬಿಸುವ ಪ್ರತಿಭಾ ನಂದಕುಮಾರವರ ಒಂದು ಹಳೆಯ ಪದ್ಯ ‘ಹೊಸವರ್ಷ’ ಮೊನ್ನೆ ನನ್ನ ಹಳೆಯ ಡೈರಿಯಲ್ಲಿ ಸಿಕ್ಕಿತು. ಯಾಕೋ ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕೆನಿಸಿದ್ದರಿಂದ ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಇದು ನಿಮಗೆ ಇಷ್ಟವಾಗದಿರಬಹುದು.
ಹೊಸವರ್ಷ
ಹೊಸವರ್ಷ ಬರುತ್ತೆ ಹೊಸವರ್ಷ ಬರುತ್ತೆ
ಅಂತ ಬೆಳಗ್ಗಿನಿಂದ ನನ್ನ ನಾಲ್ಕು ವರ್ಷದ ಮಗಳು
ಹುಮ್ಮಸ್ಸಿನಿಂದ ಕಾದಳು.
ನೋಡೋಕೆ ಹೇಗಿರುತ್ತಮ್ಮ
ನೀನು ನೋಡಿದ್ದೀಯಾಮ್ಮಾ
ಮಕ್ಕಲನ್ನು ಹೆದರಿಸುತ್ತಾಮ್ಮ
ಬಚ್ಚಿಟ್ಟುಕೊಳ್ಳಲೇನಮ್ಮ
ಎಂದು ಆತಂಕದಲಿ ಚಡಪಡಿಸಿದಳು.
ರಾತ್ರಿ ಹನ್ನೆರಡಕ್ಕೆ ಬರುತ್ತೇ-
ಸುಮ್ನೆ ಇರು ಗಲಾಟೆ ಮಾಡ್ದೆ
ಊಟ ತಿಂಡಿ ಹಾಲು ಮುಗಿಸಿಬಿಡು ತೆಪ್ಗೆ
ಎಂದು ನಾನೂ ಸಂದರ್ಭ ಉಪಯೋಗಿಸಿಕೊಂಡೆ.
ವರ್ಷದ ಕೊನೆಯ ದಿನವಿಡೀ ಹಾರಾಡಿ
ಕೊನೆಗೆ ರಾತ್ರಿ ಟೀವಿಯ ಮುಂದೆ ಕೂತೆವು
ಆಕಳಿಸಿ ತೂಕಡಿಸಿ ಕಣ್ಣು ಮಿಟುಕಿಸುತ್ತ
ಪಿಳಪಿಳನೆ ಟೀವಿಯಲ್ಲಿ ಕಣ್ಣುನೆಟ್ಟು
ಹೊಸವಷಕ್ಕೆ ಕಾದೆವು
ನಿದ್ದೆ ತಡೆಯದ ಮಗಳು ಪವಡಿಸಿದಳು.
ಏನೇನೋ ಕಾಯಕ್ರಮಗಳ ನಂತರ
ನಡುರಾತ್ರಿ ಸರಿಯಾಗಿ
ಟೀವಿಯಲ್ಲೆಲ್ಲ ಗದ್ದಲ
ಹೊರಗೆ ಪಟಾಕಿ ಸಿಡಿಮದ್ದು
ಹೋಯೆಂದೆವು ನಾವೆಲ್ಲ
ಎಚ್ಚೆತ್ತ ಮಗಳು ಏನಮ್ಮ ಏನಮ್ಮ ಅಂದಳು.
ನೋಡು ಹನ್ನೆರಡಾಯಿತು
ಹಳೆವರ್ಷ ಸರಿದುಹೋಯಿತು
ಹೊಸವರ್ಸ ಕಾಲಿಟ್ಟಿತು ಎಂದೆ.
ಟೀವಿ ಪರದೆಯಲ್ಲಿ ನೋಡಿ
ಹೊಸವರ್ಷ ಅಂದರೆ ಗಡಿಯಾರ ಏನಮ್ಮ
ಅದು ಯಾವಾಗ್ಲೂ ಓಡುತ್ತಿರತ್ತಾಲ್ಲಾಮ್ಮಾ
ಎಂದು ಪೆಚ್ಚಾಗಿ ಪುನಃ ನಿದ್ದೆ ಹೋದಳು
ಮಾರನೆಯ ದಿನ
ಹೊಸವರ್ಷ ಅಂದರೆ ಏನಿಲ್ಲ ತಾತಾ
ಗಡಿಯಾರದ ಮುಳ್ಳು ತಿರುಗೋದು ಅಷ್ಟೇ
ಎಂದು ತಾತನಿಗೆ ಬೋಧಿಸುತ್ತಿದ್ದಳು.
ಅಷ್ಟೇಮ್ಮಾ ಅಷ್ಟೆ ಎಂದರು ಅವರು
ಬೊಚ್ಚು ಬಾಯಗಲಿಸಿ.
-ಪ್ರತಿಭಾ ನಂದಕುಮಾರ್
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಪಕ್ಕ ಸಾಹಸಪ್ರಧಾನ ಸಿನಿಮಾ3 ವಾರಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …2 ತಿಂಗಳುಗಳ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ8 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!1 ವರ್ಷದ ಹಿಂದೆ
-
Pic by Hengki Lee3 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
ಕೆಲವು ಹಾಯ್ಕುಗಳು...ಒಂದು ಕವನ5 ವರ್ಷಗಳ ಹಿಂದೆ
-
ಅಳಿವು ಉಳಿವಿನ ನಡುವೆ...5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?6 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!6 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್6 ವರ್ಷಗಳ ಹಿಂದೆ
-
ಹೊಸದೊಂದು ಜಾವಳಿ7 ವರ್ಷಗಳ ಹಿಂದೆ
-
ಮಾಯೆ7 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ7 ವರ್ಷಗಳ ಹಿಂದೆ
-
ಅನುಸಂಧಾನ-೩7 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ9 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್9 ವರ್ಷಗಳ ಹಿಂದೆ
-
ಕತ್ತಲೆ.................9 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..9 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ9 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ9 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...10 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ10 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?11 ವರ್ಷಗಳ ಹಿಂದೆ
-
ತೀರ....11 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ11 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?11 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)12 ವರ್ಷಗಳ ಹಿಂದೆ
-
(ಮಹಿಳಾ)ವಾದ:12 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್13 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು14 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧14 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು15 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು15 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?15 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...17 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಏಕೋ ಏನೋ ಅಲ್ಲಿ ಒಂದಷ್ಟು ಒಳದನಿಗಳು ಮಾರ್ದನಿಸಲೇ ಇಲ್ಲ!
- ಪ್ರವೇಶನ.......
- ನಿನ್ನ ಪ್ರೀತಿಸುವದೇ ಒಂದು ಹಿಂಸೆ!
- ಉರಿದು ಬಿದ್ದ ಉಲ್ಕೆ-ಕಮಲಾ ದಾಸ್
- ಮರ ಕತ್ತರಿಸುವದು
- ನಾವು ಹುಡುಗರೇ ಹೀಗೆ........
- ಅವ್ವಂದಿರ ವಿಶೇಷ ದಿನಕ್ಕಾಗಿ ಅವ್ವನ ಮೇಲೆ ಒಂದಿಷ್ಟು ಪದ್ಯಗಳು
- ಹೆಣ್ಣು ಸದಾ ಸಂದಿಗ್ಧ, ಗೊಂದಲಗಳಲ್ಲಿಯೇ ತನ್ನ ಸಾಕಷ್ಟು ಸಮಯ ಕಳೆದು ಬಿಡುತ್ತಾಳೆ!
- ನಾನೂ ಹಾಫ್ ಸೆಂಚ್ಯುರಿ ಬಾರಿಸಿಬಿಟ್ಟೆ!
- ದಿ ಲೇಟ್ ಮಿಸ್ಟರ್ ಶೇಕ್ಷಪೀಯರ್ (ಭಾಗ-1)
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
5 ಕಾಮೆಂಟ್(ಗಳು):
ಉದಯ್, ನಿಮ್ಮ ಬ್ಲಾಗಿನ ಹೊಸ ಬಣ್ಣ, ವಿನ್ಯಾಸ, ಚೆನ್ನಾಗಿದೆ. ಪ್ರತಿಭಾ ಕವನ ಪ್ರಕಟಿಸುವ ಮೂಲಕ ಹೊಸ ವರ್ಷಾಚರಣೆಯ ನಿಮ್ಮ ಅನುಭವ ಹ೦ಚಿಕೊ೦ಡಿದ್ದೀರಿ. ನಿಮಗೂ ಹೊಸ ವರುಷದ ಶುಭಾಶಯಗಳು.
ಉದಯ್ ಸರ್,
ಹೊಸ ವಿನ್ಯಾಸದೊಂದಿಗೆ ಹೊಸ ವರುಷ ಬರ ಮಾಡಿಕೊಂಡಿದ್ದೀರಾ..... ತುಂಬಾ ಚೆನ್ನಾಗಿದೆ ವಿನ್ಯಾಸ............ ಪ್ರತಿಭಾ ಮೇಡಂ ಈ ಕವನ ಓದಿರಲಿಲ್ಲ..... ಧನ್ಯವಾದ ಓದಿಸಿದ್ದಕ್ಕೆ...... ಹೊಸ ವರ್ಷದ ಶುಭಾಶಯಗಳುನಿಮಗೆ............
ಉದಯ,
ಹೊಸ ವರ್ಷದ ಶುಭಾಶಯಗಳು.
ಹೊಸ ವರ್ಷಕ್ಕೆ ಅರ್ಥಪೂರ್ಣವಾದ ಕವನವನ್ನು ಉದ್ಧರಿಸಿದ್ದೀರಿ.
ಉದಯ ಸರ್,
ಹೊಸ ವರ್ಷದ ಸಂದರ್ಭದಲ್ಲಿ ನಿಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದೀರಿ..ಅದಕ್ಕೆ ಪ್ರತಿಭಾ ನಂದಕುಮಾರ್ ಕವನವೂ ಚೆನ್ನಾಗಿದೆ.
ನಿಮಗೆ ಹೊಸ ವರ್ಷದ ಶುಭಾಶಯಗಳು.
ನಿಮಗೂ ಹೊಸ ವರುಷದ ಶುಭಾಶಯಗಳು.
ಕಾಮೆಂಟ್ ಪೋಸ್ಟ್ ಮಾಡಿ