Father
ಅಪ್ಪ
ಅಜ್ಜ ನೆಗೆದು ಬೀಳುವ ಮೊದಲೇ
ಅವ್ವನ್ನು ಮದುವೆಯಾಗಿ
ಇದ್ದ ಹೊಲ ಗದ್ದೆಗಳಲ್ಲಿ
ಮೈ ಕೈ ಕೆಸರು ಮಾಡಿಕೊಳ್ಳದೆ
ಅವ್ವ ಮಾಡಿಕೊಟ್ಟ ಬಿಸಿ ಬಿಸಿ ರೊಟ್ಟಿಯನ್ನು
ಗಡದ್ದಾಗಿ ತಿಂದು ತೇಗಿ
ಎಲ್ಲ ಭಾರವನ್ನು ಅವಳ ತಲೆ ಮೇಲೆ ಹಾಕಿ
ತಾನು ಮಾತ್ರ ಇಸ್ಪೀಟಾಡುತ್ತ
ಹೆಸರಿಗೆ ಮಾತ್ರ ಮನೆ ಯಜಮಾನನಾದ.
ದುಡಿಯಲು ಗೊತ್ತಿರದ ಷಂಡ
ಮೂರು ಮಕ್ಕಳನ್ನು ಹೆತ್ತು ಗಂಡಸೆನಿಸಿಕೊಂಡ.
ಹುಟ್ಟಿಸಿದ ಮಕ್ಕಳನ್ನೂ ಸಾಕಲಾಗದೆ
ಅವರಿವರ(ಬಂಧುಗಳ) ಮನೆಯಲ್ಲಿ ಬಿಟ್ಟು
ತಾನು ಮಾತ್ರ ತನ್ನದೇ ಗೂಡಿನಲ್ಲಿ
ಹಚ್ಚಗೆ ತಿಂದು ಬೆಚ್ಚಗೆ ಮಲಗಿ
ಅವ್ವನ ಪ್ರೀತಿಯನ್ನೂ ನಮ್ಮಿಂದ ಕಸಿದುಕೊಂಡು
ಅವಳನ್ನೂ ತನ್ನ ಜೊತೆಯಲ್ಲಿ ನಮ್ಮ ತಿರಸ್ಕಾರಕ್ಕೆ ಗುರಿಮಾಡಿದ.
ಅಪ್ಪ ಏನೂ ಕಿಸಿಯದಿದ್ದರೂ
ಅವ್ವನ ಮೇಲೆ ಸದಾ ಇವನ ರುದ್ರನರ್ತನ
ಅವ್ವ ಇವನ ಆರ್ಭಟಕ್ಕೆ ಹೆದರಿ ಹಿಕ್ಕೆ ಹಾಕುತ್ತಾ
ಒಳಗೊಳಗೆ ಎಲ್ಲವನ್ನು ನುಂಗುತ್ತಾ ಬೇಯುತ್ತಾ
ಹೊಲದಲ್ಲೂ ದುಡಿದು ಮನೆಯಲ್ಲೂ ಮಾಡಿ
ಸದಾ ಇವನ ಸೇವೆಗೆ ನಿಂತಳು.
ಹೊತ್ಹೊತ್ತಿಗೆ ಚಾ ಕುಡಿದು
ಬುಸ್ಸ್ ಬುಸ್ಸ್ ಎಂದು ಚುಟ್ಟಾ ಸೇದಿ
ಗೊರಗೊರ ಕೆಮ್ಮಿ
ಮೈಯೆಲ್ಲ ಗೂರಿ ಬಂದವರ ತರ
ಪರಾ ಪರಾ ಕೆರೆದು
ಆಗೊಮ್ಮೆ ಈಗೊಮ್ಮೆ ಜಡ್ಡಿಗೆ ಬಿದ್ದು
ಸತ್ಹಾಂಗ ಮಾಡಿ
ಒಮ್ಮಿಂದೊಮ್ಮೆಲೆ ಮೇಲೆದ್ದು ಗುಟುರು
ಹಾಕುವ ಮುದಿ ಗೂಳಿ ಇವನು.
ಅವರಿವರ ಹಂಗಿನರಮನೆಗಳಲ್ಲಿ ಬೆಳೆಯುತ್ತಾ
ಮಕ್ಕಳೆಲ್ಲ ಕಷ್ಟಬಿದ್ದು ಓದಿ ಕೈಗೆ ಬಂದ ಮೇಲೆ
ಅರವತ್ತರ ಅರಳು ಮರಳೆಂಬಂತೆ
ಅಥವಾ ಕೆಟ್ಟ ಮೇಲೆ ಬುದ್ಧಿ ಬಂತೆಂಬಂತೆ
ಹೊಲಕ್ಕೆ ದುಡಿಯಲು ಹೋಗಿ "ಹೀರೋ" ಆಗಲೆತ್ನಿಸಿದ್ದೂ ಇದೆ.
ಅಲ್ಲಿ ದುಡಿದಿದ್ದೆಷ್ಟೋ
ಆ ಖರ್ಚು ಈ ಖರ್ಚೆಂದು
ಮಕ್ಕಳ ಹತ್ತಿರ ಕಾಸು ಪೀಕುತ್ತ
ಅsssಬ್ಬ ಎಂದು ಡೇಗು ಹೊಡೆದು
ಹೊಟ್ಟೆಯ ಮೇಲೆ ಕೈಯಾಡಿಸಿಕೊಳ್ಳುವದು ಮುಂದುವರಿದೇ ಇದೆ!
ಇದೀಗ ಯಾರಾದರು
"ಎಲ್ಲಿ ನಿನ್ನ ಮಕ್ಕಳು?"ಎಂದು ಕೇಳಿದರೆ
ಮೈ ಕುಣಿಸಿ ಎದೆಯುಬ್ಬಿಸಿ
"ಇವರೇ" ಎಂದು ನಮ್ಮೆಡೆಗೆ ತೋರಿಸುತ್ತಾನೆ.
ನಾವೂ ಅಷ್ಟೇ ಯಾರಾದರು ನಮ್ಮನ್ನು
"ಯಾರು ನೀವು?" ಎಂದು ಕೇಳಿದರೆ
"ಮಲ್ಲೇಶಪ್ಪನ ಮಕ್ಕಳು" ಎಂದು ಹೇಳುತ್ತೇವೆ!
ಇದೀಗ ಅಪ್ಪನೂ ಇಲ್ಲ
ಅವನ ನೆನಪುಗಳಂತೂ ಮೊದಲೇ ಇಲ್ಲ!
ಆದರೂ “ನಾವು ಮಲ್ಲೇಶಪ್ಪನ ಮಕ್ಕಳು”
ಎಂದು ಗುರುತಿಸಲ್ಪಡುವದು ಮುಂದುವರಿದೇ ಇದೆ.
-ಉದಯ ಇಟಗಿ
Father
Even before grandfather passed away,
He married our mother—
Never once touching the soil of the fields,
Never once dirtying his hands with toil.
He gulped down hot rotis she made,
Wiped his mouth, belched in ease,
Laid every burden on her head,
While he played cards in idle pride—
A “head of the house” only in name.
A man who never learned to work
Yet fathered three children—
And called himself a man.
Unable even to raise the children he bore,
He left them with relatives,
While he lived comfortably in his own den,
Eating well, sleeping warm,
Snatching mother’s love from us too,
And dragging her with him
Into the cold of our neglect.
Though father gave nothing,
He would always unleash his wrath on mother.
Terrified by his tantrums,
She would silently swallow her pain,
Boiling within.
She toiled both in the fields and at home,
Always at his service.
Sipping tea on time,
A hiss, a smoke, a hacking cough—
His body riddled with blisters,
He grumbled, groaned, collapsed in spells,
Staged sickness to seek sympathy,
Only to rise,
Burp,
And resume his lazy throne.
We children grew up
In the homes of others—relatives—
Enduring hardship, studying hard,
Making something of ourselves.
And like a thorny bush flowering in its sixties,
Or a sinner suddenly finding wisdom,
He once tried to become a “hero”
By working in the fields.
Who knows how much he really worked—
Yet always demanding money from us,
For this and that expense,
Letting out long sighs,
Rubbing his stomach for sympathy—
All that never changed.
Now, if someone asks him,
“Where are your children?”
He puffs up proudly,
Points at us and says, “These are mine.”
And we, if asked, “Who are you?”
Simply say,
“We are Malleshappa’s children.”
Now Father is no more.
His memories?
They never really were.
And still we continue to be identified
As “Malleshappa’s children.”
Kannada Original: Uday Itagi
English Translation: Uday Itagi
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
-
-
"ಮಾದೇವ"ನ ಯಶಸ್ವಿ ಪ್ರದರ್ಶನ...4 ವಾರಗಳ ಹಿಂದೆ
-
ತರಚೀ ಪುಷ್ಪೋಪಾಖ್ಯಾನ5 ವಾರಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …7 ತಿಂಗಳುಗಳ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
Pic by Hengki Lee4 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?7 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!7 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್7 ವರ್ಷಗಳ ಹಿಂದೆ
-
ಮಾಯೆ8 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ8 ವರ್ಷಗಳ ಹಿಂದೆ
-
ಅನುಸಂಧಾನ-೩8 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..10 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ10 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ10 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...11 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ11 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....12 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ12 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?12 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)13 ವರ್ಷಗಳ ಹಿಂದೆ
-
(ಮಹಿಳಾ)ವಾದ:13 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್14 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು15 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧15 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ15 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು16 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?16 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- One should not be afraid to speak in favour of humanity (A conversation with renowned revolutionary Nepali language poet Mr. Manoj Bogati)
- Father
- ನಾವು ಯಾರ್ಯಾರು ಭೃಷ್ಟಾಚಾರ ಮಾಡಿದ್ದೇವೋ ಅವರೆಲ್ಲಾ ಸ್ವಇಚ್ಛೆಯಿಂದ ವಿಷ ತಗೊಂಡು ಸತ್ತುಹೋಗಿಬಿಡೋಣ.......
- Whore!
- ಗಡಾಫಿ ಮಾಡಿದ ಒಂದಿಷ್ಟು ತಪ್ಪುಗಳು-ಕೊನೆಯ ಭಾಗ
- ವಿನೂತನ ಶೈಲಿಯ ಉದಯ ಇಟಗಿ ಅವರ ನಾಟಕ- ಶೇಕ್ಸ್ ಪಿಯರನ ಶ್ರೀಮತಿ
- ಓರಿಯಾ ಕವಿ ಸುಶೀರ್ ಕುಮಾರ್ ಸ್ವೇನ್ ಕವನಗಳು
- ಓರಿಯಾ ಕವಿ ಪ್ರಬಿನಾ ಕಬಿ ಕವನಗಳು
- We construct
- Awareness
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
0 ಕಾಮೆಂಟ್(ಗಳು):
ಕಾಮೆಂಟ್ ಪೋಸ್ಟ್ ಮಾಡಿ