(1)
ಹೌದು ಕಣೋ ಮಂಜು
ನಾವು ಹುಡುಗರೇ ಹೀಗೆ.......
ಏನೇನೋ ವಟಗುಟ್ಟಲು ಹೋಗಿ
ಹೇಳಬೇಕಾದ್ದನ್ನೆಲ್ಲ ನೇರವಾಗಿ ಹೇಳಿ
ಏನೇನೆಲ್ಲಾ ಅನುಭವಿಸಿ ಸಾಯುತ್ತೇವೆ
ಮೈ ಜುಮ್ಮೆನ್ನಿಸುವ ಆಲೋಚನೆಗಳನೆಲ್ಲಾ
ನಮ್ಮೊಳಗೆ ಹಿಡಿದಿಟ್ಟುಕೊಳ್ಳಲಾರದೆ
ಹಾಳೆಯ ಮೇಲೆ ಬರೆದು ರೆಡ್ಹ್ಯಾಂಡಾಗಿ ಸಿಕ್ಕಿಬೀಳುತ್ತೇವೆ
ಆಗಾಗ ಗುಲಾಬಿಯೊಂದನ್ನು ಹಿಡಿದು
ಹುಡುಗಿಯರ ಹಿಂದೆನೇ ಸುತ್ತಿ ಸುತ್ತಿ ಉಗಿಸಿಕೊಳ್ಳುತ್ತೇವೆ
ಇಲ್ಲವೇ ಒಮ್ಮೊಮ್ಮೆ ಸಿನೆಮಿಕ್ಕಾಗಿ
ರೋಡಲ್ಲಿಯೇ ‘ಐ ಲವ್ ಯು’ ಎಂದು ಕಿರುಚಿ ಹೇಳಿ
ಅವರನ್ನೂ ಪೇಚಿಗೆ ಸಿಲುಕಿಸಿ ನಾವೂ ಪೇಚಿಗೆ ಸಿಲಕುತ್ತೇವೆ
ಇನ್ನೂ ಏನೇನೊ ಬೇರೆ ದಾರಿ ಹುಡುಕಿ
ಹುಡುಗಿಯರನ್ನು ಒಲಿಸಿಕೊಳ್ಳಲು ಹೆಣಗುತ್ತೇವೆ
ಅದನ್ನು ಅರ್ಥ ಮಾಡಿಕೊಳ್ಳಲಾರದೆ
ಹುಡುಗಿಯರು ಕೈ ತಪ್ಪಿದಾಗ ನಿರಾಶರಾಗಿ
ಸ್ವಲ್ಪ ದಿವಸ ಗಡ್ದ ಬಿಡುತ್ತೇವೆ ಗುಂಡು ಹಾಕುತ್ತೇವೆ
ಆದರೆ ಮತ್ತೊಬ್ಬ ದೇವದಾಸನಾಗದಂತೆ ಎಚ್ಚರವಹಿಸುತ್ತೇವೆ
ಮುಂದೆ ಅಪ್ಪ ಅಮ್ಮ ಹುಡುಕಿದ ಹುಡುಗಿಯನ್ನೇ ಮದುವೆಯಾಗಿ
ಹೊಸ ಬದುಕಿಗೆ ಕಾಲಿಡುತ್ತೇವೆ
ಆಗಾಗ ಹೆಂಡತಿಯಲ್ಲಿ ಅವಳಿಗೆ ಗೊತ್ತಾಗದಂತೆ
‘ಅವಳನ್ನು’ ಹುಡುಕುತ್ತೇವೆ
ಆದರೆ ಅವಳ ಕೈಲಿ ಸಲೀಸಾಗಿ ಸಿಕ್ಕಿಬಿದ್ದು ಛೀ, ಥೂ ಅನಿಸಿಕೊಳ್ಳುತ್ತೇವೆ
ಅಷ್ಟರಲ್ಲಿ ಬಚ್ಚಿಟ್ಟ ಭಾವನೆಗಳನೆಲ್ಲಾ ಬಿಚ್ಚಿಟ್ಟು
ಹೆಂಡತಿಯ ಮುಂದೆ ಬಟಾಬಯಲಾಗಿಬಿಟ್ಟಿರುತ್ತೇವೆ
ಮುಂದಿನ ಬದುಕಲ್ಲಿ ಮಜವೇ ಇರುವದಿಲ್ಲ ಮಂಜು.......
(2)
ನಾಲ್ಕು ವರ್ಷಗಳಲ್ಲಿ ವಿಪರೀತ ದಪ್ಪಗಾಗಿ
ಎರಡೇ ಎರಡು ಮಕ್ಕಳ ತಂದೆಯಾಗಿ
ಏದುಸಿರುಬಿಡುತ್ತಾ ಮಕ್ಕಳಿಗೆ ಐಸ್ ಕ್ರೀಂ ಕೊಡಿಸುವಾಗ
‘ಅವಳು’ ಸಿಗುತ್ತಾಳೆ
ಕೂಲಾಗಿ ನಗುನಗುತ್ತಾ ಒಂದು ಹಾಯ್ ಹೇಳುತ್ತೇವೆ
ಆದರವಳು ‘ನೀನು ನನ್ನವನಾಗಿದ್ದರೆ ಎಷ್ಟು ಚನ್ನಾಗಿರುತ್ತಿತ್ತಲ್ವ?’
ಎಂದು ಕಣ್ಣಲ್ಲಿಯೇ ಹೇಳುತ್ತಾಳೆ
ನಾವು ಮಾತ್ರ ಅಸಹಾಯಕ ನಗೆ ನಗುತ್ತಾ
ಅವಳ ಗಂಡ ಮಕ್ಕಳ ಯೋಗಕ್ಷೇಮ ವಿಚಾರಿಸುವದೇ ಇಲ್ಲ
ಯಾಕೆಂದರೆ ಅವನದೂ ಅದೇ ಕಥೆಯಲ್ಲವೆ?
ಅದು ನಮಗೆ ಗೊತ್ತಿದ್ದದ್ದೇ ಅಲ್ಲವೇ?
ನಾವು ಹುಡುಗರೇ ಹೀಗೆ..........
-ಉದಯ್ ಇಟಗಿ
ವಿ.ಸೂ: ಈ ಕವನವನ್ನು ಪ್ರತಿಭಾ ನಂದಕುಮಾರವರ “ನಾವು ಹುಡುಗಿಯರೇ ಹೀಗೆ” ಎನ್ನುವ ಕವನದ ಧಾಟಿಯಲ್ಲಿ ಹುಡುಗರು ಹೇಗಿರಬಹುದು ಎಂದು ಯೋಚಿಸಿ ಒಂದಷ್ಟು ತಮಾಷೆ ಒಂದಷ್ಟು ವಿಷಾದ ಭಾವದೊಂದಿಗೆ ಬರೆದಿರುವದು. ಹುಡುಗರಿಗೆ ಇಷ್ಟವಾಗಬಹುದು.
ಫಕ್ರುದ್ದೀನ್ ಅವರ ಕೆಲವು ಹೈಕುಗಳು

ಅಷ್ಟು ಸುಲಭವಾಗಿ ಬೆಳೆಯಲಾರದದು
ಎಲ್ಲರ ಮನೆಯಂಗಳದಲ್ಲಿ!
ಬಲಗಳಲ್ಲಿಯೇ ಅತ್ಯಂತ ಕೆಟ್ಟ ಬಲ ಹಣ ಬಲ
ಅವಕಾಶಕ್ಕೆ ತಕ್ಕಂತೆ ಅದು ಎಲ್ಲರನ್ನೂ
ಕೊಂಡುಕೊಂಡುಬಿಡಬಲ್ಲದು ದೇವರನ್ನೂ ಸಹ!
ಲಜ್ಜೆ ಪ್ರೀತಿಯ ಮೊದಲ ಕುರುಹು
ಹಳೆಯ ಮಧುವಿನಷ್ಟೆ ಮಧುರ
ಆದರದು ವಿರಳವಾಗಿದೆ ಇಂದಿನ ಪ್ರೀತಿಗಳಲ್ಲಿ!
ಭೂಮಿ ಮತ್ತು ಸ್ವರ್ಗಗಳೆರಡರಲ್ಲೂ ಸಿಗುವ
ಜೀವನದ ಒಂದೇ ಒಂದು ಪರಮ ಸುಖ
ರತಿ ಸುಖ!
ನಿನಗರಿವಿಲ್ಲದಂತೆ ನಿನ್ನ ಕಂಗಳ
ಕಾಂತಿಯ ಹೊಂಬೆಳಕೊಂದು ಹುಟ್ಟುಹಾಕಿದೆ
ನನ್ನೊಳಗೆ ನಿಷ್ಕಾಮ ಪ್ರೇಮವೊಂದನ್ನು!
ಮನಸೊಂದು ಹೊಳೆಯುವ ವಜ್ರ
ಹಾಯ್ದು ಹೋದರದರೊಳಗೆ ಪಚ್ಚೆಬೆಳಕೊಂದು
ಮೂಡುವದಲ್ಲಿ ಕಾಮನಬಿಲ್ಲಿನ ಚಿತ್ತಾರ!
ಮೂಲ ಇಂಗ್ಲೀಷ್: ಡಾ. ಮೊಹಮ್ದ್ ಫಕ್ರುದ್ದೀನ್
ಕನ್ನಡಕ್ಕೆ: ಉದಯ್ ಇಟಗಿ
ಚಿತ್ರ ಕೃಪೆ: http://www.avadhi.wordpress.com/
ಅವಕಾಶಕ್ಕೆ ತಕ್ಕಂತೆ ಅದು ಎಲ್ಲರನ್ನೂ
ಕೊಂಡುಕೊಂಡುಬಿಡಬಲ್ಲದು ದೇವರನ್ನೂ ಸಹ!
ಲಜ್ಜೆ ಪ್ರೀತಿಯ ಮೊದಲ ಕುರುಹು
ಹಳೆಯ ಮಧುವಿನಷ್ಟೆ ಮಧುರ
ಆದರದು ವಿರಳವಾಗಿದೆ ಇಂದಿನ ಪ್ರೀತಿಗಳಲ್ಲಿ!
ಭೂಮಿ ಮತ್ತು ಸ್ವರ್ಗಗಳೆರಡರಲ್ಲೂ ಸಿಗುವ
ಜೀವನದ ಒಂದೇ ಒಂದು ಪರಮ ಸುಖ
ರತಿ ಸುಖ!
ನಿನಗರಿವಿಲ್ಲದಂತೆ ನಿನ್ನ ಕಂಗಳ
ಕಾಂತಿಯ ಹೊಂಬೆಳಕೊಂದು ಹುಟ್ಟುಹಾಕಿದೆ
ನನ್ನೊಳಗೆ ನಿಷ್ಕಾಮ ಪ್ರೇಮವೊಂದನ್ನು!
ಮನಸೊಂದು ಹೊಳೆಯುವ ವಜ್ರ
ಹಾಯ್ದು ಹೋದರದರೊಳಗೆ ಪಚ್ಚೆಬೆಳಕೊಂದು
ಮೂಡುವದಲ್ಲಿ ಕಾಮನಬಿಲ್ಲಿನ ಚಿತ್ತಾರ!
ಮೂಲ ಇಂಗ್ಲೀಷ್: ಡಾ. ಮೊಹಮ್ದ್ ಫಕ್ರುದ್ದೀನ್
ಕನ್ನಡಕ್ಕೆ: ಉದಯ್ ಇಟಗಿ
ಚಿತ್ರ ಕೃಪೆ: http://www.avadhi.wordpress.com/
ಓ ಗುಲಾಬಿಯೇ, ನೀನೆಷ್ಟು ಚೆಂದ ಸಾಕವ್ವ, ಪರವ್ವರ ಮುಂದೆ?

ವೈದೇಹಿಯವರು ಕನ್ನಡದ ಕರಾವಳಿ ಭಾಗದ ಸೂಕ್ಷ್ಮ ಮನಸ್ಸಿನ ಕತೆಗಾರ್ತಿ. ನಾನು ಅವರ ‘ಅಕ್ಕು’, ‘ಅಮ್ಮಚ್ಚಿ ನೆನೆಪು’ ‘ಶಾಕುಂತಳೆಯೊಡನೆ ಒಂದು ಅಪರಾಹ್ನ’ ಇನ್ನೂ ಮುಂತಾದ ಕತೆಗಳನ್ನು ಓದಿದ್ದೇನೆ. ಆದರೆ ಈ ಕತೆಯನ್ನು ಇನ್ನೂ ಓದಲಾಗಿಲ್ಲ. ಸಾಮಾನ್ಯವಾಗಿ ಸ್ತ್ರೀ ಸಂವೇದನೆಗಳ ಸುತ್ತ ಗಿರಕಿ ಹೊಡೆಯುವ ವೈದೇಹಿಯವರ ‘ಗುಲಾಬಿ’ಯ ಈ ಕತೆಯೂ ಇದಕ್ಕೆ ಹೊರತಾಗಿಲ್ಲ. ಆದರೆ ವೈದೇಹಿಯವರ ಕತೆಗೂ ಗಿರೀಶ್ ಅವರ ಕತೆಗೂ ಎಷ್ಟು ಸಾಮ್ಯವಿದೆಯೆಂಬುದು ನನಗೆ ಗೊತ್ತಿಲ್ಲ. ಹೀಗಾಗಿ ಚಲನಚಿತ್ರದಲ್ಲಿ ಮೂಡಿರುವ ಗುಲಾಬಿಯ ಕತೆಯನ್ನು ನಿಮ್ಮ ಮುಂದಿಡುತ್ತಾ ಸಾಕವ್ವ ಮತ್ತು ಪರವ್ವರ ಮುಂದೆ ಗುಲಾಬಿ ನನಗೇಕೆ ಅಷ್ಟಾಗಿ ಕಾಡಲಿಲ್ಲ ಎಂಬುದನ್ನು ಹೇಳುತ್ತೇನೆ.
‘ಉಮಾಶ್ರಿ ಎಂದರೆ ಸಾಕವ್ವ, ಸಾಕವ್ವ ಎಂದರೆ ಉಮಾಶ್ರಿ ಎನ್ನುವಷ್ಟರಮಟ್ಟಿಗೆ ಆ ಪಾತ್ರದೊಂದಿಗೆ ನನ್ನನ್ನು ನಾನು ಗುರುತಿಸಿಕೊಂಡಿದ್ದೇನೆ’ ಎಂದು ಸ್ವತಃ ಉಮಾಶ್ರಿಯವರೆ ಹೇಳುತ್ತಾರೆ. ಹೌದು, ಅವರ ಮಾತು ನಿಜ! ಎಂಬತ್ತರ ದಶಕದ ಆದಿಭಾಗದಲ್ಲಿ ಬಂದ ‘ಒಡಲಾಳ’ದ ಸಾಕವ್ವ ಉಮಾಶ್ರಿಯವರಿಗೆ ಕನ್ನಡ ರಂಗಭೂಮಿಯಲ್ಲೊಂದು ವಿಶಿಷ್ಟ ಸ್ಥಾನವೊಂದನ್ನು ಕಲ್ಪಿಸಿಕೊಟ್ಟಿತು. ಉಮಾಶ್ರೀ ಅವರೇ ಹೇಳುವಂತೆ, “ಅದು ಜೀವಮಾನದ ಶ್ರೇಷ್ಟ ಪಾತ್ರ ಮತ್ತು ಯಾವುದೇ ಕಲಾವಿದೆಗೆ ಎದುರಾಗುವ ದೊಡ್ಡ ಸವಾಲು”. “ಇವತ್ತು ನಾಟಕ ರಂಗದಲ್ಲಿ ‘ಆಸ್ಕರ್’ ಪ್ರಶಸ್ತಿ ಅಂತ ಏನಾದರು ಇದ್ದಿದ್ದರೆ ಅದು ಖಂಡಿತವಾಗಿ ಸಾಕವ್ವಳ ಅಭಿನಯದ ಉಮಾಶ್ರಿಯವರಿಗೆ ಸಲ್ಲುತ್ತಿತ್ತು” ಎಂದು ಬಹಳಷ್ಟು ಜನ ಇಂದಿಗೂ ಮಾತಾಡಿಕೊಳ್ಳುತ್ತಾರೆ. ಅಂಥ ಗಟ್ಟಿತನದ ಪಾತ್ರವದು. ನಾನು ಈ ನಾಟಕವನ್ನು ಈಗ್ಗೆ ನಾಲ್ಕು ವರ್ಷಗಳ ಹಿಂದೆ ರಂಗಶಂಕರದಲ್ಲಿ ನೋಡಿದಾಗ ಹಿಂದೆ ಸಾಕವ್ವಳ ಅಭಿನಯದ ಬಗ್ಗೆ ಅಲ್ಲಲ್ಲಿ ಓದಿ ಕಲ್ಪಿಸಿಕೊಂಡ ಉಮಾಶ್ರಿ ಇಲ್ಲಿಯೂ ಸಹ ಏನೂ ಬದಲಾಗದೆ ಕಾಣಿಸಿಕೊಂಡಾಗ ನಿಜಕ್ಕೂ ಅಚ್ಚರಿಯೆನಿಸಿತ್ತು. ದೇವನೂರರ ಸಾಕವ್ವಳಿಗೆ ಜೀವ ತುಂಬಿ ರಂಗದ ಮೇಲೆ ತರುವದು ನಿಜಕ್ಕೂ ಅದು ಯಾವುದೇ ಕಲಾವಿದೆಗೆ ಎದುರಾಗುವ ಒಂದು ದೊಡ್ಡ ಸವಾಲು. ಅದನ್ನು ಉಮಾಶ್ರಿಯವರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದರು. ನಾಟಕದಲ್ಲಿ ಸಾಕವ್ವ ತನ್ಮೂಲಕ ಇಡಿ ದಲಿತ ಲೋಕವನ್ನೇ ಬಿಚ್ಚಿಡುತ್ತಾ ತನ್ನ ಒಡಲಾಳದ ಸಂಕಟ, ತಲ್ಲಣಗಳನ್ನು ನಮ್ಮ ಮುಂದೆ ಹರಡುತ್ತಲೆ ನಮ್ಮನ್ನು ಅವಳ ತೆಕ್ಕೆಗೆ ತೆಗೆದುಕೊಳ್ಳುತ್ತಾಳೆ. ಅವಳು ಓರ್ವ ಮುಗ್ಧ ಹಾಗೂ ಗಟ್ಟಿತನದ ಮಹಿಳೆ. ಸ್ವಾವಲಂಬಿಯಾಗಿ ಬದುಕಲಿಚ್ಛಿಸುವವಳು. ಆಕೆ ಅಬಲೆಯಲ್ಲ. ಬಡತನದ ದಾರಿದ್ರ್ಯದ ನಡುವೆಯೂ ಸಂಸಾರವನ್ನು ಸರಿದೂಗಿಸಬೇಕೆಂಬ ಹಂಬಲ ಅವಳಲ್ಲಿದೆ. ಈ ಕಾರಣಕ್ಕೆ ಸಾಕವ್ವನ ಕಿರುಚಾಟ, ತಳಮಳ. ಸಂಕಟಗಳು ಮತ್ತು ಅಲ್ಲಿರುವ ಎಲ್ಲಾ ಗಂಡು ಪಾತ್ರಗಳಿಗಿಂತ ಗಟ್ಟಿ ನಿಲುವನ್ನುಳ್ಳ ಅವಳ ಮನಸ್ಸು ನಮ್ಮನ್ನು ತಾಗಿಬಿಡುವದರ ಮೂಲಕ ಸಾಕವ್ವ ನಮ್ಮ ನೆನಪಿನಲ್ಲಿ ಅಚ್ಚಳಿಯದೆ ಉಳಿದುಬಿಡುತ್ತಾಳೆ.
ಉತ್ತರ ಕರ್ನಾಟಕದ ಜಾನಪದ ಕತೆಯೊಂದರ ಆಧಾರಿತ ’ಸಂಗ್ಯಾ ಬಾಳ್ಯಾ’ ಚಲನಚಿತ್ರದಲ್ಲಿನ ಪರವ್ವಳ ಪಾತ್ರ ವಿಶೇಷವಾಗಿ ನಮ್ಮ ಗಮನ ಸೆಳೆಯುತ್ತದೆ. ಆ ಚಿತ್ರವು ಅವರಿಗೆ ಪನೋರಮಾ ಶ್ರೇಷ್ಟ ಪೋಷಕ ನಟಿ ಪ್ರಶಸ್ತಿಯನ್ನು ತಂದುಕೊಟ್ಟಿತು. ಉತ್ತರ ಕರ್ನಾಟಕದ ಹೆಂಗಸೊಬ್ಬಳ ಬಾಡಿ ಲಾಂಗ್ವೇಜ್ ಹಾಗೂ ಡೈಲಾಗ್ ಡೆಲಿವರಿಯನ್ನೆಲ್ಲಾ ಚನ್ನಾಗಿ ಸ್ಟಡಿ ಮಾಡಿ ಕರಗತ ಮಾಡಿಕೊಂಡು ಅಭಿನಯಿಸುವದರ ಮೂಲಕ ಆ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಅದು ಉಮಾಶ್ರೀಯ ವಿಶೇಷತೆ. ಸಂಗ್ಯಾನ ಅತ್ತೆ ಪಾರವ್ವ. ಅತ್ತೆ-ಅಳಿಯರದು ಅವಿನಾಭಾವ ಸಂಬಂಧ. ಅವನು ಏನು ಕೇಳಿದರೂ ಅದನ್ನು ನಡೆಸಿಕೊಡುವಂಥವಳು. ಸಂಗ್ಯಾ ಒಂದು ಸಾರಿ ಜಾತ್ರೆಯಲ್ಲಿ ಆ ಊರಿನ ಭಾರಿ ಶ್ರೀಮಂತ ಶೆಟ್ಟರ ರೂಪವಂತ ಹೆಂಡತಿಯನ್ನು ನೋಡಿ ಮೋಹಕ್ಕೊಳಗಾಗುತ್ತಾನೆ ಮತ್ತು ಅವಳೊಂದಿಗೆ ಒಂದು ರಾತ್ರಿಯನ್ನು ಕಳೆಯಬೇಕೆಂದುಕೊಳ್ಳುತ್ತಾನೆ. ಆಗ ಅದೇ ಜಾತ್ರೆಯಲ್ಲಿ ಅವಳಿಗೆ ಗೊತ್ತಿರಲಾರದೆ ಅವಳ ಚಿನ್ನದ ಸರಿಗೆಯನ್ನು ಕದಿಯುತ್ತಾನೆ. ಇದೇ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತನ್ನ ಅತ್ತೆ ಪರವ್ವಳ ಸಹಾಯ ತೆಗೆದುಕೊಳ್ಳುತ್ತಾನೆ. ಅವಳು ಮೊದಲು ಹಿಂದೆ ಮುಂದೆ ನೋಡಿದರೂ ಕೊನೆಗೆ ಹೇಗೋ ಅವಳ ಒಡತಿಯ ಮನವೊಲಿಸುತ್ತಾಳೆ. ಮುಂದೆ ಸಂಗ್ಯಾ ಮತ್ತು ಅವಳ ಒಡತಿ ಗಂಗಾಳ ಹಾದರ ಬಯಲಾಗಿ ಅವಳೂ ಅದರಲ್ಲಿ ಭಾಗಿಯಾಗಿದ್ದರಿಂದ ಹೆದರಿ ಊರು ಬಿಡುವ ಪ್ರಸಂಗ ಬರುತ್ತದೆ. ಅದೇ ಸಂದರ್ಭದಲ್ಲಿ ಅವಳ ಅಳಿಯ ಸಂಗ್ಯಾನಿಗೆ ಜೀವ ಬೆದರಿಕೆಯಿರುವದು ಗೊತ್ತಾಗಿ ತತ್ತರಿಸುತ್ತಾಳೆ. ತನ್ನ ಜೀವ ಉಳಿಸಿಕೊಳ್ಳಲು ಅವನನ್ನು ಊರು ಬಿಟ್ಟು ಹೋಗೆಂದು ಪರಿ ಪರಿಯಾಗಿ ಕೇಳಿಕೊಳ್ಳುತ್ತಾಳೆ. ಆದರೆ ಹಟವಾದಿ ಸಂಗ್ಯಾ ಅವಳ ಮಾತನ್ನು ಕೇಳುವದಿಲ್ಲ. ಕೊನೆಯ ಪ್ರಯತ್ನವೆಂಬಂತೆ ಈಗಾಗಲೇ ಕೆಟ್ಟು ತವರು ಮನೆ ಸೇರಿರುವ ಅವಳ ಒಡತಿ ಗಂಗಿ ಹತ್ತಿರ ಹೋಗಿ “ಸಂಗ್ಯಾನಿಗೆ ನೀನಾದರು ಊರು ಬಿಟ್ಟು ಹೋಗಲು ಹೇಳು” ಎಂದು ಬೇಡಿಕೊಳ್ಳುತ್ತಾಳೆ. ಅದಕ್ಕೆ ಅವಳ ಒಡತಿ ಆಯ್ತು ಎನ್ನುತ್ತಾಳೆ. ಪರವ್ವ ಅಷ್ಟಕ್ಕೆ ಸಮಾಧಾನಪಟ್ಟುಕೊಂಡು ಹೋಗುತ್ತಾಳೆ. ಮುಂದೆ ತಾನು ಮಾಡಿದ್ದರ ತಪ್ಪಿನ ಅರಿವಾಗಿ ಪರವ್ವ ಊರು ಬಿಟ್ಟು ಹೋಗುತ್ತಾಳೆ. ಇಲ್ಲಿ ಪರವ್ವ ಗಟ್ಟಿ ಹೆಂಗಸಾಗಿದ್ದರೂ ಅಳಿಯನ ಆಸೆಗೆ ಕಟ್ಟುಬಿದ್ದು ತನ್ನ ಒಡತಿಯ ಮನಸ್ಸನ್ನು ಬದಲಾಯಿಸುವದರ ಮೂಲಕ ತನಗಷ್ಟೆ ಅಲ್ಲದೆ ತನ್ನ ಅಳಿಯ ಮತ್ತು ತನ್ನ ಒಡತಿಗೂ ಸಹ ದುರಂತವನ್ನು ತಂದಿಡುತ್ತಾಳೆ. ಅವಳು ಮಾಡಿದ ಇಂಥ ತಪ್ಪಿನಿಂದ ಮೊದಮೊದಲು ಪ್ರೇಕ್ಷಕರ ನಿರಾಕರಣೆಗೆ ಗುರಿಯಾದರೂ ಕೊನೆಯಲ್ಲಿ ಅವಳು ಪಶ್ಛಾತಾಪ ಪಡುವ ರೀತಿಗೆ ಹಾಗೂ ಸಂಗ್ಯಾನನ್ನು ಉಳಿಸಿಕೊಳ್ಳುವಲ್ಲಿನ ಅವಳ ಮಾತೃತ್ವ ನಮ್ಮನ್ನು ಕಾಡಿಬಿಡುತ್ತದೆ.
ಗುಲಾಬಿ ಒಬ್ಬ ಸೂಲಗಿತ್ತಿ. ತಾನಿರುವ ಊರಿನ ಹೆಂಗಸರ ಹೆರಿಗೆಯನ್ನು ಮಾಡಿಸುವದರಿಂದ ಅವಳು ಆ ಊರಿನವರಿಗೆಲ್ಲಾ ಬೇಕಾಗಿದ್ದಾಳೆ. ಆದರೆ ಅವಳ ಗಂಡನಿಗೆ ಮಾತ್ರ ಬೇಡವಾಗಿದ್ದಾಳೆ. ಅವಳ ಗಂಡ ಅವಳಿಗೆ ತಲಾಖ್ ಕೊಡದೆ ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ. ಗುಲಾಬಿಗೆ ಮಕ್ಕಳಿಲ್ಲ. ಆದರೆ ಅವಳ ಸವತಿಗೆ ಒಂದು ಮಗುವಿದೆ. ಗುಲಾಬಿಗೆ ಹೇಗಾದರೂ ಆ ಮಗುವಿನ ಪ್ರೀತಿ ಸಂಪಾದಿಸಬೇಕೆಂಬ ಬಯಕೆ. ಆದರೆ ಅದು ಸವತಿ ಮತ್ಸರದಿಂದಾಗಿ ಆಗುತ್ತಿಲ್ಲ. ಹೀಗಾಗಿ ಅವಳು ಹತ್ತಿರದ ಊರಲ್ಲಿ ಇರುವ ಚಿತ್ರಮಂದಿರದಲ್ಲಿ ಸಿನಿಮಾ ನೋಡುತ್ತಾ ತನ್ನ ಹೊಸ ಕನಸುಗಳನ್ನು ಹೆಣೆಯುತ್ತಾಳೆ. ಈ ಮಧ್ಯೆ ಯಾವುದೋ ಶ್ರೀಮಂತರ ಮನೆಯಲ್ಲಿ ಸೂಲಗಿತ್ತಿಯ ಕೆಲಸ ಮಾಡಿದ್ದಕ್ಕೆ ಅವಳಿಗೆ ಊಡುಗೊರೆಯಾಗಿ ಬಣ್ಣದ ಟೆಲಿವಿಷನ್ ಸಿಗುತ್ತದೆ. ಅಲ್ಲಿಂದ ಗುಲಾಬಿಯ ಬದುಕು ಅನೇಕ ಕನಸುಗಳನ್ನ ಕಟ್ಟಿಕೊಳ್ಳುತ್ತಾ ಸಾಗುತ್ತದೆ. ಅವಳ ಮನೆಯಲ್ಲಿರುವ ಟೆಲಿವಿಷನ್ ಮತ್ತು ಧಾರಾವಾಹಿಗಳನ್ನು ನೋಡಲು ಬರುವ ಆಸುಪಾಸಿನವರಿಂದಾಗಿ ಅವಳ ಮನೆಯೇ ಅವಳದ್ದಲ್ಲ ಎನ್ನುವಂತೆ ಅಲ್ಲಿ ಹೆಂಗಸರು ಸೇರುತ್ತಾರೆ. ಟಿವಿ ನೋಡುತ್ತಾ ಅವರೆಲ್ಲ ಕಣ್ಣೀರು ಹಾಕುತ್ತಾರೆ. ನಗುತ್ತಾರೆ. ತಮ್ಮ ನಿತ್ಯ ಕಾಯಕದ ನಡುವೆಯೂ ತಾವು ನೋಡಿದ ಸೀರಿಯಲ್ ಕುರಿತು ಮಾತಾಡುತ್ತಾರೆ. ಸೀರಿಯಲ್ಲಿನ ಕತೆಯನ್ನ ತಮ್ಮ ಜೀವನಕ್ಕೆ ಆರೋಪಿಸಿಕೊಂಡು ಬದುಕಲು ಪ್ರಯತ್ನಿಸುತ್ತಾರೆ. ಅದೇ ಊರಿನ ಮೀನುಗಾರರಿಗೆ ಯಂತ್ರ ಚಾಲಿತ ದೋಣಿಗಳಿಂದ ಇರುವ ಸಂಕಷ್ಟಗಳನ್ನು ಮರೆಸಲು ಸಹ ಟೆಲಿವಿಷನ್ ಕಾರಣವಾಗುತ್ತದೆ. ಇದೇ ಸಮಯದಲ್ಲಿ ಎಲ್ಲೋ ನಡೆವ ಯುದ್ಧ ಊರಿನವರಲ್ಲಿ ದೇಶ ಪ್ರೇಮ ಮೂಡಿಸುತ್ತದೆ. ಈ ಸಮಯದಲ್ಲಿ ಹುಟ್ಟುವ ಕೋಮು ಗಲಭೆಗಳಿಂದ ಆ ಊರಿನಲ್ಲಿದ್ದ ಮುಸಲ್ಮಾನರೆಲ್ಲಾ ಮನೆ ಖಾಲಿ ಮಾಡಿಕೊಂಡು ಹೋಗುತ್ತಾರೆ. ಅಲ್ಲೇ ಉಳಿಯುವ ಗುಲಾಬಿಯನ್ನ ಮತೀಯವಾದಿಗಳು ಮನೆಯಿಂದ ಆಚೆಗೆ ಹಾಕುತ್ತಾರೆ. ಇಲ್ಲಿ ಚಿತ್ರದುದ್ದಕ್ಕೂ ಅಲ್ಲಲ್ಲಿ ತಣ್ಣನೆಯ ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಾ ಬರುವ ಗುಲಾಬಿ ಕೊನೆಯಲ್ಲಿ ಅವಳನ್ನು ಮನೆಯಿಂದ ಹೊರಹಾಕಿ ದೋಣಿಯಲ್ಲಿ ಕೂಡಿಸುವಾಗ ಯಾವುದೇ ಪ್ರತಿಭಟನೆಯನ್ನು ಮಾಡದೆ ಸೋಲೊಪ್ಪಿಕೊಂಡುಬಿಡುತ್ತಾಳೆ. ಇದು ಅವಳು ಬದುಕಿದ ಕ್ರಮಕ್ಕೆ ವಿರುದ್ಧವಾಗಿ ನಿಲ್ಲುತ್ತದೆ. ಒಂದು ಪಾತ್ರವನ್ನು ಚಿತ್ರದುದ್ದಕ್ಕೂ ಸಮರ್ಥವಾಗಿ ಹಿಡಿದು, ಒಂದು ದನಿಯನ್ನು ಹೊರಡಿಸಿ, ಅದು ಗಿರಿಗೆ ಮುಟ್ಟಬಹುದು ಎನ್ನುವಂಥ ವಿಶ್ವಾಸವನ್ನು ಮೂಡಿಸುವ ಸಂದರ್ಭದಲ್ಲಿ ಆ ದನಿಯನ್ನು ಕ್ಷೀಣಗೊಳಿಸುವ ಅಥವಾ ಹಾಗೆ ಕಾಣಿಸುವಂತೆ ಬಿಂಬಿಸುವ ಪ್ರಯತ್ನ ಗುಲಾಬಿ ಪಾತ್ರವನ್ನು ಸಪ್ಪೆ ಸಪ್ಪೆಯನ್ನಾಗಿ ಮಾಡುತ್ತದೆ.
ಗುಲಾಬಿ ಒಬ್ಬ ಸೂಲಗಿತ್ತಿ. ತಾನಿರುವ ಊರಿನ ಹೆಂಗಸರ ಹೆರಿಗೆಯನ್ನು ಮಾಡಿಸುವದರಿಂದ ಅವಳು ಆ ಊರಿನವರಿಗೆಲ್ಲಾ ಬೇಕಾಗಿದ್ದಾಳೆ. ಆದರೆ ಅವಳ ಗಂಡನಿಗೆ ಮಾತ್ರ ಬೇಡವಾಗಿದ್ದಾಳೆ. ಅವಳ ಗಂಡ ಅವಳಿಗೆ ತಲಾಖ್ ಕೊಡದೆ ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ. ಗುಲಾಬಿಗೆ ಮಕ್ಕಳಿಲ್ಲ. ಆದರೆ ಅವಳ ಸವತಿಗೆ ಒಂದು ಮಗುವಿದೆ. ಗುಲಾಬಿಗೆ ಹೇಗಾದರೂ ಆ ಮಗುವಿನ ಪ್ರೀತಿ ಸಂಪಾದಿಸಬೇಕೆಂಬ ಬಯಕೆ. ಆದರೆ ಅದು ಸವತಿ ಮತ್ಸರದಿಂದಾಗಿ ಆಗುತ್ತಿಲ್ಲ. ಹೀಗಾಗಿ ಅವಳು ಹತ್ತಿರದ ಊರಲ್ಲಿ ಇರುವ ಚಿತ್ರಮಂದಿರದಲ್ಲಿ ಸಿನಿಮಾ ನೋಡುತ್ತಾ ತನ್ನ ಹೊಸ ಕನಸುಗಳನ್ನು ಹೆಣೆಯುತ್ತಾಳೆ. ಈ ಮಧ್ಯೆ ಯಾವುದೋ ಶ್ರೀಮಂತರ ಮನೆಯಲ್ಲಿ ಸೂಲಗಿತ್ತಿಯ ಕೆಲಸ ಮಾಡಿದ್ದಕ್ಕೆ ಅವಳಿಗೆ ಊಡುಗೊರೆಯಾಗಿ ಬಣ್ಣದ ಟೆಲಿವಿಷನ್ ಸಿಗುತ್ತದೆ. ಅಲ್ಲಿಂದ ಗುಲಾಬಿಯ ಬದುಕು ಅನೇಕ ಕನಸುಗಳನ್ನ ಕಟ್ಟಿಕೊಳ್ಳುತ್ತಾ ಸಾಗುತ್ತದೆ. ಅವಳ ಮನೆಯಲ್ಲಿರುವ ಟೆಲಿವಿಷನ್ ಮತ್ತು ಧಾರಾವಾಹಿಗಳನ್ನು ನೋಡಲು ಬರುವ ಆಸುಪಾಸಿನವರಿಂದಾಗಿ ಅವಳ ಮನೆಯೇ ಅವಳದ್ದಲ್ಲ ಎನ್ನುವಂತೆ ಅಲ್ಲಿ ಹೆಂಗಸರು ಸೇರುತ್ತಾರೆ. ಟಿವಿ ನೋಡುತ್ತಾ ಅವರೆಲ್ಲ ಕಣ್ಣೀರು ಹಾಕುತ್ತಾರೆ. ನಗುತ್ತಾರೆ. ತಮ್ಮ ನಿತ್ಯ ಕಾಯಕದ ನಡುವೆಯೂ ತಾವು ನೋಡಿದ ಸೀರಿಯಲ್ ಕುರಿತು ಮಾತಾಡುತ್ತಾರೆ. ಸೀರಿಯಲ್ಲಿನ ಕತೆಯನ್ನ ತಮ್ಮ ಜೀವನಕ್ಕೆ ಆರೋಪಿಸಿಕೊಂಡು ಬದುಕಲು ಪ್ರಯತ್ನಿಸುತ್ತಾರೆ. ಅದೇ ಊರಿನ ಮೀನುಗಾರರಿಗೆ ಯಂತ್ರ ಚಾಲಿತ ದೋಣಿಗಳಿಂದ ಇರುವ ಸಂಕಷ್ಟಗಳನ್ನು ಮರೆಸಲು ಸಹ ಟೆಲಿವಿಷನ್ ಕಾರಣವಾಗುತ್ತದೆ. ಇದೇ ಸಮಯದಲ್ಲಿ ಎಲ್ಲೋ ನಡೆವ ಯುದ್ಧ ಊರಿನವರಲ್ಲಿ ದೇಶ ಪ್ರೇಮ ಮೂಡಿಸುತ್ತದೆ. ಈ ಸಮಯದಲ್ಲಿ ಹುಟ್ಟುವ ಕೋಮು ಗಲಭೆಗಳಿಂದ ಆ ಊರಿನಲ್ಲಿದ್ದ ಮುಸಲ್ಮಾನರೆಲ್ಲಾ ಮನೆ ಖಾಲಿ ಮಾಡಿಕೊಂಡು ಹೋಗುತ್ತಾರೆ. ಅಲ್ಲೇ ಉಳಿಯುವ ಗುಲಾಬಿಯನ್ನ ಮತೀಯವಾದಿಗಳು ಮನೆಯಿಂದ ಆಚೆಗೆ ಹಾಕುತ್ತಾರೆ. ಇಲ್ಲಿ ಚಿತ್ರದುದ್ದಕ್ಕೂ ಅಲ್ಲಲ್ಲಿ ತಣ್ಣನೆಯ ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಾ ಬರುವ ಗುಲಾಬಿ ಕೊನೆಯಲ್ಲಿ ಅವಳನ್ನು ಮನೆಯಿಂದ ಹೊರಹಾಕಿ ದೋಣಿಯಲ್ಲಿ ಕೂಡಿಸುವಾಗ ಯಾವುದೇ ಪ್ರತಿಭಟನೆಯನ್ನು ಮಾಡದೆ ಸೋಲೊಪ್ಪಿಕೊಂಡುಬಿಡುತ್ತಾಳೆ. ಇದು ಅವಳು ಬದುಕಿದ ಕ್ರಮಕ್ಕೆ ವಿರುದ್ಧವಾಗಿ ನಿಲ್ಲುತ್ತದೆ. ಒಂದು ಪಾತ್ರವನ್ನು ಚಿತ್ರದುದ್ದಕ್ಕೂ ಸಮರ್ಥವಾಗಿ ಹಿಡಿದು, ಒಂದು ದನಿಯನ್ನು ಹೊರಡಿಸಿ, ಅದು ಗಿರಿಗೆ ಮುಟ್ಟಬಹುದು ಎನ್ನುವಂಥ ವಿಶ್ವಾಸವನ್ನು ಮೂಡಿಸುವ ಸಂದರ್ಭದಲ್ಲಿ ಆ ದನಿಯನ್ನು ಕ್ಷೀಣಗೊಳಿಸುವ ಅಥವಾ ಹಾಗೆ ಕಾಣಿಸುವಂತೆ ಬಿಂಬಿಸುವ ಪ್ರಯತ್ನ ಗುಲಾಬಿ ಪಾತ್ರವನ್ನು ಸಪ್ಪೆ ಸಪ್ಪೆಯನ್ನಾಗಿ ಮಾಡುತ್ತದೆ.
ಗುಲಾಬಿ ಪ್ರತಿಭಟಿಸುತ್ತಲೇ ಸೋಲನ್ನೊಪ್ಪಿಕೊಳ್ಳುವದರಿಂದ ನಮ್ಮಲ್ಲಿ ನಿರಾಸೆ ಮೂಡಿಸುತ್ತಾಳೆ. ಸಾಕವ್ವ ಬಡತನದ ಮಧ್ಯೆಯೂ ಬದುಕನ್ನು ಕಟ್ಟಿಕೊಳ್ಳಬೇಕೆನ್ನುವ ಹಂಬಲದಿಂದ ನಮ್ಮನ್ನು ಬೆರಗುಗೊಳಿಸುತ್ತಾಳೆ. ಪರವ್ವ ತಾನು ಮಾಡಿರುವ ಹೇಯ ಕೆಲಸಕ್ಕೆ ಪಶ್ಚಾತಾಪ ಪಡುತ್ತಲೇ ತನ್ನ ಕಣ್ಣಿರಿನಲ್ಲಿ ನಮ್ಮನ್ನು ತೊಯ್ಯಿಸಿಬಿಡುತ್ತಾಳೆ. ಈ ಕಾರಣದಿಂದ ಗುಲಾಬಿ ಸಾಕವ್ವ, ಪರವ್ವರಂತೆ ಮನದಲ್ಲಿ ನಿಲ್ಲುವದೇ ಇಲ್ಲ.
-ಉದಯ ಇಟಗಿ
ಕೃಪೆ: ಬಿ. ಸುರೇಶ್ ಅವರ ಬ್ಲಾಗ್ http://bsuresha.wordpress.com/
-ಉದಯ ಇಟಗಿ
ಕೃಪೆ: ಬಿ. ಸುರೇಶ್ ಅವರ ಬ್ಲಾಗ್ http://bsuresha.wordpress.com/
ಹೆಣ್ಣು ಸದಾ ಸಂದಿಗ್ಧ, ಗೊಂದಲಗಳಲ್ಲಿಯೇ ತನ್ನ ಸಾಕಷ್ಟು ಸಮಯ ಕಳೆದು ಬಿಡುತ್ತಾಳೆ!

-ಉದಯ ಇಟಗಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
-
-
-
ನಿನ್ನೆದೆಯ ತಂತಿಯ3 ತಿಂಗಳುಗಳ ಹಿಂದೆ
-
ಮೈಸೂರು- ಚೆನ್ನೈ ನಡುವೆ ಪ್ರತಿಷ್ಠಿತ ವಂದೇ ಭಾರತ್ ರೈಲು ಸಂಚಾರ5 ತಿಂಗಳುಗಳ ಹಿಂದೆ
-
ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕರ್’ರಿಗೊಂದು ನ್ಯಾಯವೇ?7 ತಿಂಗಳುಗಳ ಹಿಂದೆ
-
ಹಂಪೆಯಲ್ಲಿ ಜಾಂಬವಂತನ ದರ್ಶನ!8 ತಿಂಗಳುಗಳ ಹಿಂದೆ
-
ದೇವರು ಕಾಣೆಯಾಗಿದ್ದಾನೆ..!11 ತಿಂಗಳುಗಳ ಹಿಂದೆ
-
-
ಭಕ್ತಿ: ಭವಸಾಗರ ಪಾರು ಮಾಡುವ ನೌಕೆ1 ವರ್ಷದ ಹಿಂದೆ
-
-
Pic by Hengki Lee2 ವರ್ಷಗಳ ಹಿಂದೆ
-
ದಡ್ಡ - ಬುದ್ದಿವಂತ2 ವರ್ಷಗಳ ಹಿಂದೆ
-
-
ದೂರ ‘ತೀರದ ‘ ಯಾನ!!!2 ವರ್ಷಗಳ ಹಿಂದೆ
-
ಕನಕಧಾರಾ ಸ್ತೋತ್ರ2 ವರ್ಷಗಳ ಹಿಂದೆ
-
ಉಲ್ಲಾಳ್ದಿ3 ವರ್ಷಗಳ ಹಿಂದೆ
-
Resume3 ವರ್ಷಗಳ ಹಿಂದೆ
-
ಮೊದಲ ರಾತ್ರಿಯ ಅನುಭವ!3 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?3 ವರ್ಷಗಳ ಹಿಂದೆ
-
’ರಾಕ್ಷಸ ತಂಗಡಿ’ ನಾಟಕ ಹೇಳುವುದೇನನ್ನು?3 ವರ್ಷಗಳ ಹಿಂದೆ
-
ಮೈಸೂರಿನಲ್ಲಿ ನವೆಂಬರ್ 10 ರಂದು ಬಿಡುಗಡೆ3 ವರ್ಷಗಳ ಹಿಂದೆ
-
-
-
ಒಂದು ಮಡಚಿಟ್ಟ ಪುಟ : Draft Mail – 54 ವರ್ಷಗಳ ಹಿಂದೆ
-
ಹದಿನೆಂಟನೇ ಶಿಬಿರ ಮುಂದೂಡಿಕೆ4 ವರ್ಷಗಳ ಹಿಂದೆ
-
ರಾವಣನ (ಕು)ತರ್ಕ, ಸೀತೆಯ ಕೋಪ, ರಾವಣನ ಪ್ರತಿಜ್ಞೆ4 ವರ್ಷಗಳ ಹಿಂದೆ
-
-
ಸುಮ್ನೆ ತಮಾಷೆಗೆ -೮5 ವರ್ಷಗಳ ಹಿಂದೆ
-
-
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ5 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ5 ವರ್ಷಗಳ ಹಿಂದೆ
-
ಅನುಸಂಧಾನ-೪6 ವರ್ಷಗಳ ಹಿಂದೆ
-
-
-
ಮತ್ತೆ ಮತ್ತೆ ಬೇರಿನೆಡೆಗೆ ತುಡಿವ ಮನ7 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:7 ವರ್ಷಗಳ ಹಿಂದೆ
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ7 ವರ್ಷಗಳ ಹಿಂದೆ
-
ಕತ್ತಲೆ.................7 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..7 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ7 ವರ್ಷಗಳ ಹಿಂದೆ
-
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!8 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...8 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ8 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ9 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ9 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ9 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?10 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ10 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು10 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ10 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)10 ವರ್ಷಗಳ ಹಿಂದೆ
-
(ಮಹಿಳಾ)ವಾದ:10 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ11 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…11 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ11 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...11 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ11 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್11 ವರ್ಷಗಳ ಹಿಂದೆ
-
ಕಫನ್12 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …12 ವರ್ಷಗಳ ಹಿಂದೆ
-
ನನ್ನ ಜಡೆ12 ವರ್ಷಗಳ ಹಿಂದೆ
-
ಕೇಳಿ-೫12 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು12 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು12 ವರ್ಷಗಳ ಹಿಂದೆ
-
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದೊಳು...12 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧13 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ13 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ13 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು13 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು13 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?13 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !14 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...15 ವರ್ಷಗಳ ಹಿಂದೆ
-
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.