“ನೀವು ಇಂಗ್ಲೀಷ್ ಅಧ್ಯಾಪಕರು ಇಂಗ್ಲೀಷಿನಲ್ಲೇಕೆ ಬರೆಯುವದಿಲ್ಲ?” ಹೀಗೊಂದು ಪ್ರಶ್ನೆಯನ್ನು ನನ್ನ ಮಹಿಳಾ ಸಹೋದ್ಯೋಗಿಯೊಬ್ಬರು ನನ್ನ ಕೇಳಿದರು. ಆಕೆ ಈ ಪ್ರಶ್ನೆಯನ್ನು ನನ್ನನ್ನೂ ಸೇರಿಸಿ ಕನ್ನಡದಲ್ಲಿ ಬರೆಯುತ್ತಿರುವ/ಬರೆದ ಇಂಗ್ಲೀಷ್ ಅಧ್ಯಾಪಕರನ್ನು ಉದ್ದೇಶಿಸಿ ಕೇಳಿದ್ದರು. ಆಕೆ ಮೂಲತಃ ಆಂಧ್ರದವರು. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಇಂಗ್ಲೀಷ್ ವಿಭಾಗದಲ್ಲಿ ಹತ್ತು ವರ್ಷ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿ ಈಗ ನನ್ನೊಟ್ಟಿಗೆ ಲಿಬಿಯಾದ ಸೆಭಾ ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂಗ್ಲೀಷ್ ಸಾಹಿತ್ಯದ ಬಗ್ಗೆ ತುಂಬಾ ಓದಿಕೊಂಡಾಕೆ ಹಾಗೂ ಕೆಲಸದ ನಿಮಿತ್ತ ಹತ್ತು ವರ್ಷಗಳನ್ನು ಮೈಸೂರಿನಲ್ಲೇ ಕಳೆದಿದ್ದರಿಂದ ಕನ್ನಡವನ್ನು ಚನ್ನಾಗಿ ಮಾತನಾಡುತ್ತಿದ್ದರು. ಜೊತೆಗೆ ಕನ್ನಡಿಗರೊಂದಿಗಿನ ತಮ್ಮ ಒಡನಾಟ ಮತ್ತು ಆಸಕ್ತಿಯಿಂದಾಗಿ ಕನ್ನಡಸಾಹಿತ್ಯದ ಬಗ್ಗೆ ತುಸು ಹೆಚ್ಚೇ ತಿಳಿದುಕೊಂಡಿದ್ದರು. ಹಾಗೆ ತಿಳಿದುಕೊಳ್ಳಲು ಒಂದು ಕಾರಣವೂ ಇತ್ತು. ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ. ಎ. ಮೊದಲ ವರ್ಷಕ್ಕೆ ಪಠ್ಯವಾಗಿರುವ “Indian Writing in English” ಎಂಬ ಪತ್ರಿಕೆಗೆ ಕನ್ನಡದ ಖ್ಯಾತ ಲೇಖಕ ಯು.ಆರ್.ಅನ್ಂತಮೂರ್ತಿಯವರ ಇಂಗ್ಲೀಷಿಗೆ ಅನುವಾದಗೊಂಡಿರುವ ಪ್ರಸಿದ್ಧ ಕಾದಂಬರಿ ‘ಸಂಸ್ಕಾರ’ವನ್ನು ಬೋಧಿಸುತ್ತಿದ್ದರು. ಆ ನೆಪದಲ್ಲಿ ಆಧುನಿಕ ಕನ್ನಡ ಸಾಹಿತ್ಯದ ಅನೇಕ ಲೇಖಕರ ಬಗ್ಗೆ ಅಲ್ಪ ಸ್ವಲ್ಪ ತಿಳಿದುಕೊಂಡಿದ್ದರು ಹಾಗೂ ಕನ್ನಡದ ಬಹುತೇಕ ಲೇಖಕರು ಇಂಗ್ಲೀಷ್ ಅಧ್ಯಾಪಕರಾಗಿದ್ದಾರೆಂಬುದು ಆಕೆಗೆ ಚನ್ನಾಗಿ ಗೊತ್ತಿತ್ತು. ಅದೇ ಪ್ರಶ್ನೆಯನ್ನು ‘ಕನ್ನಡದ ಬಹುತೇಕ ಲೇಖಕರು ಇಂಗ್ಲೀಷ್ ಅಧ್ಯಾಪಕರಾಗಿದ್ದಾರಲ್ಲವೆ?’ ಎಂದು ಕೇಳಿದರು. ನಾನು ಹೌದೆಂದು ತಲೆಯಾಡಿಸಿ ಇಂಗ್ಲೀಷ್ ಅಧ್ಯಾಪಕರಾಗಿದ್ದುಕೊಂಡು ಕನ್ನಡದಲ್ಲಿ ಬರೆದವರು ಹಾಗೂ ಬರೆಯುತ್ತಿರುವವರ ದೊಡ್ಡ ಪಟ್ಟಿಯನ್ನೇ ಕೊಟ್ಟೆ. ಅದು ಬಿ. ಎಮ್. ಶ್ರೀ. ಯವರಿಂದ ಶುರುವಾಗಿ ವಿ. ಕೃ. ಗೋಕಾಕ್, ಪೋಲಂಕಿ ರಾಮಮೂರ್ತಿ, ಶಂಕರ್ ಮೊಕಾಶಿ ಪುಣೇಕರ್, ಕೀರ್ತಿನಾಥ ಕುರ್ತಕೋಟಿ, ಅನಂತಮೂರ್ತಿ, ಅಡಿಗ, ಚಂಪಾ, ಶಾಂತಿನಾಥ ದೇಸಾಯಿ, ಸುಮತೀಂದ್ರ ನಾಡಿಗ್, ಲಂಕೇಶ್, ಜಿ.ಎಸ್. ಆಮೂರು, ವೀಣಾ ಶಾಂತೇಶ್ವರ, ಸರೋಜಿನಿ ಶಿಂತ್ರಿ, ರಾಮಚಂದ್ರ ಶರ್ಮ, ಜಿ.ಕೆ. ಗೋವಿದರಾವ್, ಕೆ. ವಿ. ತಿರುಮಲೇಶ್, ಓ.ಎಲ್. ನಾಗಭೂಷಣ ಸ್ವಾಮಿ, ವೇಣುಗೋಪಾಲ ಸೊರಬ, ಚಿ. ನ. ಮಂಗಳ, ಜಿ. ರಾಮಕೃಷ್ಣ, ಡಾ. ಪ್ರಭುಶಂಕರ್, ಸಿ. ನಾಗಣ್ಣ, ಕೆ. ಎಸ್. ಭಗವಾನ್, ರಾಜೇಂದ್ರ ಚೆನ್ನಿ, ಮಾಲತಿ ಪಟ್ಟಣಶೆಟ್ಟಿ, ನಟರಾಜ್ ಹುಳಿಯಾರ್, ವನಮಾಲ ವಿಶ್ವನಾಥ್, ಕೆ.ಟಿ. ಗಟ್ಟಿ, ಕೃಷ್ಣಮೂರ್ತಿ ಚಂದರ್ ವರೆಗೂ ಮುಂದುವರೆದು, ಇತ್ತೀಚಿಗೆ ಬರೆಯುವ ಕನಕರಾಜು. ಬಿ. ಆರನಕಟ್ಟೆ, ಕಲಿಗಣನಾಥ ಗುಡದೂರು, ಎಚ್. ಆರ್. ರಮೇಶ್, ಸುಕನ್ಯಾ ಕನಾರಳ್ಳಿ ಯವರಲ್ಲಿ ಕೊನೆಗೊಳ್ಳುತ್ತದೆ; ಇನ್ನೂ ಸಾಕಷ್ಟು ಜನರಿದ್ದಾರೆ, ಆದರೆ ಇವರೆಲ್ಲ ಹೆಸರು ಮಾಡಿರುವದರಿಂದ ಅವರನ್ನಷ್ಟೇ ಹೆಸರಿಸಲಾಗಿದೆ ಎಂದು ಹೇಳಿದೆ. ಒಟ್ಟಾರೆಯಾಗಿ ಕನ್ನಡ ಸಾಹಿತ್ಯ ಶ್ರೀಮಂತಗೊಡಿದ್ದು ಹಾಗೂ ಹೊಸ ಆಯಾಮಗಳನ್ನು ಪಡೆದುಕೊಂಡಿದ್ದು ಈ ಎಲ್ಲ ಲೇಖಕರಿಂದ ಎಂದು ಹೇಳಿದರೆ ತಪ್ಪಾಗುವದಿಲ್ಲ ಎಂದೂ ಸೇರಿಸಿದೆ. ಆಕೆ ಮತ್ತೆ ಮುಂದುವರೆದು ಅವರೇಕೆ ‘ಇಂಗ್ಲೀಷಿನಲ್ಲಿ ಬರೆಯಲಿಲ್ಲ ಅಥವಾ ಬರೆಯುತ್ತಿಲ್ಲ?’ ಎಂದು ಕೇಳಿದರು. ನನಗೆ ಅವರ ಪ್ರಶ್ನೆ ತುಸು ವಿಚಿತ್ರವಾಗಿ ಕಂಡಿತು. ನಾನು ಅದು ಅವರವರ ಇಷ್ಟ ಎಂದೆ. “ಅಲ್ಲ, ಅವರು ನೇರವಾಗಿ ಇಂಗ್ಲೀಷಿನಲ್ಲಿಯೇ ಬರೆಯಬಹುದಿತ್ತಲ್ಲ?” ಎಂದು ಮತ್ತೆ ಕೇಳಿದರು. “ಏಕೆ? ಕನ್ನಡದಲ್ಲಿ ಬರೆಯುವದು ಅವಮಾನವೇನು?” ಎಂದು ನಾನು ಮರು ಪ್ರಶ್ನೆ ಹಾಕಿದೆ. “ಹಾಗಲ್ಲ, ಇಂಗ್ಲೀಷ್ ಅಧ್ಯಾಪಕರಾಗಿದ್ದುಕೊಂಡು ನೇರವಾಗಿ ಇಂಗ್ಲೀಷಿನಲ್ಲಿ ಬರೆದಿದ್ದರೆ ಚೆನ್ನಿತ್ತು. ಆಗವರು ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆಯುತ್ತಿದ್ದರು.” ಎಂದರು. ನಾನು “ಅದು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ ಇಂಗ್ಲೀಷ್ ಅವರ ಮಾತೃಭಾಷೆಯಲ್ಲ. ಮಾತೃಭಾಷೆಯಲ್ಲಿ ಬರೆದಿದ್ದು ಮಾತ್ರ ಯಶಸ್ವಿಯಾಗಬಲ್ಲದು” ಎಂದೆ. ಆಕೆ ಮತ್ತೊಂದು ಪ್ರಶ್ನೆಯನ್ನು ಮುಂದಿಟ್ಟರು. “ಹಾಗೆ ನೋಡಿದರೆ ಇಂಗ್ಲೀಷಿನಲ್ಲಿ ಬರೆಯುವ ಭಾರತೀಯ ಲೇಖಕರ್ಯಾರದು ಇಂಗ್ಲೀಷ್ ಯಾವತ್ತೂ ಮಾತೃಭಾಷೆಯಾಗಿರಲಿಲ್ಲ. ಆದರೂ ಅವರು ಇಂಗ್ಲೀಷಿನಲ್ಲಿಯೇ ಬರೆದು ಯಶಸ್ವಿಯಾಗಲಿಲ್ಲವೇನು? ಖ್ಯಾತಿಯನ್ನು ಪಡೆಯಲಿಲ್ಲವೇನು?” ಎಂದರು. ನಾನು ಒಂದು ಕ್ಷಣ ಸುಮ್ಮನಾದೆ. ಮತ್ತೆ ಅವರೇ ಮುಂದುವರಿದು “ಅವರು ಕೂಡ ನಿಮ್ಮಂತೆಯೇ ಮಾತೃಭಾಷೆಯ ಬಗ್ಗೆ ಯೋಚಿಸಿದ್ದರೆ ಇವತ್ತು ಭಾರತದಲ್ಲಿ ಇಂಗ್ಲೀಷಿನಲ್ಲಿ ಬರೆಯುವ ಲೇಖಕರು ಒಬ್ಬರೂ ಇರುತ್ತಿರಲಿಲ್ಲ. ಆದರೂ ಅವರು ಅದ್ಹೇಗೆ ಇಂಗ್ಲೀಷಿನಲ್ಲಿ ಬರೆದರು? ಬರೆದು ಯಶಸ್ವಿಯಾದರು? ಅಂದರೆ ನೀವು ಇಂಗ್ಲೀಷಿನಲ್ಲಿ ಬರೆಯಲಾರದ್ದಕ್ಕೆ ಮಾತೃಭಾಷೆಯ ಗೋಡೆಯನ್ನು ಅಡ್ಡ ತರುತ್ತಿರುವಿರಿ. ಅದರಲ್ಲಿ ಬರೆದರೆ ಮಾತ್ರ ಪರಿಣಾಮಕಾರಿಯಾಗಿರುತ್ತದೆ, ಯಶಸ್ವಿಯಾಗಿರುತ್ತದೆ ಎಂದೆಲ್ಲ ಕುಂಟುನೆಪ ಹೇಳುತ್ತಾ ಜಾರಿಕೊಳ್ಳುತ್ತಿರುವಿರಿ. ಹಾಗೆ ಕುಂಟುನೆಪವೊಡ್ಡುವ ಬದಲು ನಾನು ಇಂಗ್ಲೀಷಿನಲ್ಲಿ ಬರೆಯಲು ಅಸಮರ್ಥನಿದ್ದೇನೆ ಎಂದು ನೇರವಾಗಿ ಒಪ್ಪಿಕೊಳ್ಳಿ. ಇಲ್ಲವೇ ಇಂಗ್ಲೀಷಿನಲ್ಲಿ ಬರೆದು ತೋರಿಸಿ. ಪ್ರಯತ್ನಿಸದೆಯೇ ನೀವು ಅದ್ಹೇಗೆ ಇಂಗ್ಲೀಷಿನಲ್ಲಿ ಬರೆದರೆ ಯಶಸ್ವಿಯಾಗುವದಿಲ್ಲವೆಂದು ಹೇಳುತ್ತೀರಿ?” ಎಂದು ಕೇಳಿದರು. ನನಗೆ ಒಂದು ಕ್ಷಣ ಪೆಚ್ಚೆನಿಸಿದರೂ “ಹೌದಲ್ಲವೆ? ಅವರು ಹೇಳುವದರಲ್ಲಿ ಸತ್ಯವಿದೆಯಲ್ಲವೆ?” ಎನಿಸಿತು. ಭಾರತೀಯ ಇಂಗ್ಲೀಷ್ ಬರಹಗಾರರಾದ ಆರ್. ಕೆ. ನಾರಾಯಣ್, ಮುಲ್ಕ್ರಾಜಾನಂದ, ರಾಜಾರಾವ್, ಸರೋಜಿನಿ ನಾಯ್ದು, ಟ್ಯಾಗೋರ್, ವಿಕ್ರಂ ಶೇಠ್, ತೋರು ದತ್, ನೀರಧ್ ಚೌಧರಿ, ಕಮಲಾ ದಾಸ್, ಎ.ಕೆ ರಾಮಾನುಜನ್, ಸಲ್ಮಾನ್ ರಶ್ದಿ, ಅನೀತಾ ದೇಸಾಯಿ, ಕಿರಣ್ ದೇಸಾಯಿ, ಅರುಂಧತಿ ರಾಯ್, ಶಶಿ ದೇಶಪಾಂಡೆ ಇನ್ನೂ ಮುಂತಾದವರದ್ಯಾರದು ಮಾತೃಭಾಷೆ ಇಂಗ್ಲೀಷ್ ಆಗಿರಲಿಲ್ಲ. ಅದು ಬೇರೆಯದೇ ಆಗಿತ್ತು. ಆದರೂ ಅವರೆಲ್ಲ ಇಂಗ್ಲೀಷಿನಲ್ಲಿ ಬರೆದು ಯಶಸ್ವಿಯಾದರಲ್ಲವೆ? ಹಾಗಾದಾರೆ ಕನ್ನಡದಲ್ಲಿ ಬರೆಯುವ ಇಂಗ್ಲೀಷ್ ಅಧ್ಯಾಪಕರೇಕೆ ಇಂಗ್ಲೀಷಿನಲ್ಲಿ ಬರೆಯುತ್ತಿಲ್ಲ? ಎನಿಸಿತು. ಇದುವರೆಗೂ ಅವರಲ್ಲಿ ಕೆಲವರು ಇಂಗ್ಲೀಷಿನಲ್ಲಿ ಒಂದಿಷ್ಟು ಅನುವಾದಗಳನ್ನು ಮಾಡಿದ್ದು ಬಿಟ್ಟರೆ, ಅಥವಾ ತಮ್ಮ ಪಿಎಚ್.ಡಿ ಪ್ರಬಂಧವನ್ನು ಇಂಗ್ಲೀಷಿನಲ್ಲಿ ಬರೆದಿದ್ದು ಬಿಟ್ಟರೆ ಅಥವಾ ಯಾವುದಾದರು ಸೆಮೆನಾರಿಗೆ ಇಂಗ್ಲೀಷಿನಲ್ಲಿ ಒಂದಿಷ್ಟು ಪೇಪರ್ ಪ್ರಸೆಂಟ್ ಮಾಡಿದ್ದು ಬಿಟ್ಟರೆ ಯಾರೊಬ್ಬರು ಹೆಚ್ಚಿಗೆ ಏನನ್ನೂ ಬರೆದಂತೆ ಕಾಣುವದಿಲ್ಲ. ಏಕೆ ಬರೆಯಲಿಲ್ಲ? ವನ್ಸ ಅಗೇನ್ ಅದೇ ಮಾತೃಭಾಷೆಯ ಪ್ರಶ್ನೆ ಏಳುತ್ತದೆ.
ನನಗೆ ಮೊದಲಿಗೆ ಅವರ ವಾದದಲ್ಲಿ ತಿರುಳಿದೆ ಎನಿಸಿದರೂ ಯೋಚಿಸುತ್ತಾ ಹೋದಂತೆ ನನ್ನ ಗ್ರಹಿಕೆಗೆ ಸಿಕ್ಕಿದ್ದನ್ನು ನಿಧಾನಕ್ಕೆ ಅವರಿಗೆ ಹೇಳುತ್ತಾ ಹೋದೆ; ಕನ್ನಡದಲ್ಲಿ ಬರೆಯುವ ಇಂಗ್ಲೀಷ್ ಅಧ್ಯಾಪಕರು ಇಂಗ್ಲೀಷ್ ಬರಹಗಾರರಾರೇ ಆಗಿರಬೇಕೆಂದು ನೀವೇಕೆ ಬಯಸುತ್ತೀರಿ? ಅವರು ಇಂಗ್ಲೀಷಿನಲ್ಲಿಯೇ ಬರೆಯಬೇಕೆಂಬ ಅಲಿಖಿತ ನಿಯಮವೇನಾದರು ಇದೆಯೇನು? ನೀವು ಹೇಳುವದು ಹೇಗಿದೆಯೆಂದರೆ ಎಲ್ಲ ಕಂಪ್ಯೂಟರ್ ಇಂಜಿನೀಯರುಗಳು ಬಿಲ್ ಗೇಟ್ಸೇ ಆಗಬೇಕು, ಎಲ್ಲ ಸಿವಿಲ್ ಇಂಜಿನೀಯರುಗಳು ವಿಶ್ವೇಶರಯ್ಯನೇ ಆಗಬೇಕು, ಎಲ್ಲ ವಿಜ್ಞಾನದ ವಿದ್ಯಾರ್ಥಿಗಳು ವಿಜ್ಞಾನಿಗಳೇ ಆಗಬೇಕು, ಎಲ್ಲ ಉದ್ಯಮಿಗಳು ಅಂಬಾನಿ ತರಾನೆ ಆಗಬೇಕು ಎನ್ನುವಂತಿದೆ. ಹಾಗೆ ಎಲ್ಲರೂ ಆಗಲು ಸಾಧ್ಯವೆ? ಒಂದು ವೇಳೆ ಪ್ರಯತ್ನಿಸಿದರೂ ಅವರಂತೆ ಎಲ್ಲರೂ ಆಗಬಲ್ಲರೆ? ಸಾಧ್ಯವಿಲ್ಲ. ಏಕೆಂದರೆ ಈ ಜಗತ್ತಿನಲ್ಲಿ ಒಬ್ಬರೋ ಇಬ್ಬರೋ ಮಾತ್ರ ಉದಾಹರಣೆಯಾಗಬಲ್ಲರು. ಎಲ್ಲರೂ ಅಲ್ಲ. ಒಬ್ಬ ವ್ಯಕ್ತಿಯ ಯಶಸ್ಸು ಅವನ ಪರಿಶ್ರಮದ ಮೇಲೆ ನಿರ್ಧಾರವಾಗುತ್ತಾದರೂ ಪರಿಶ್ರಮಪಟ್ಟವರೆಲ್ಲ ಯಶಸ್ವಿಯಾಗುತ್ತಾರೆಂದು ಹೇಳಲು ಬರುವದಿಲ್ಲ.
ಇನ್ನು ಇಂಗ್ಲೀಷ್ ಅಧ್ಯಾಪಕರಾಗಿರುವ ಕನ್ನಡದ ಲೇಖಕರು ಕನ್ನಡವನ್ನೇ ತಮ್ಮ ಅಭಿವ್ಯಕ್ತಿಗೆ ಏಕೆ ಆಯ್ಕೆಮಾಡಿಕೊಂಡರೆಂದು ಕೇಳಿದರೆ ಇಂಗ್ಲೀಷಿಗಿಂತ ಅದರಲ್ಲಿ ಬರೆಯುವದು ಅವರಿಗೆ ಹೆಚ್ಚು ನಿರಾಳವೆನಿಸಬಹುದು. ಅಥವಾ ನೀವು ಹೇಳುವಂತೆ ನೇರವಾಗಿ ಇಂಗ್ಲೀಷಿನಲ್ಲಿ ಬರೆಯಲು ಅವರ ಹ್ಯಾಡಿಕ್ಯಾಪ್ಟ್ ಆಟಿಟ್ಯುಡ್ ಕಾರಣವಾಗಿರಬಹುದು. ಅಂದರೆ ಇಂಗ್ಲೀಷಿನಲ್ಲಿ ತಿಣುಕಾಡಿ ಬರೆಯುವದಕ್ಕಿಂತ ಕನ್ನಡದಲ್ಲೇ ಸಲೀಸಾಗಿ ಬರೆಯಬಹುದಲ್ಲ ಎಂಬ ಧೋರಣೆಯಿರಬಹುದು. ಹಾಗಂತ ಅವರೆಲ್ಲ ಇಂಗ್ಲೀಷಿನಲ್ಲಿ ಅಸಮರ್ಥರಾಗಿದ್ದಾರೆ ಎಂದರ್ಥವಲ್ಲ. ಒಂದು ಭಾಷೆಯನ್ನು ಕಲಿಸುವದಕ್ಕೂ ಹಾಗೂ ಬರಹದ ಮಾಧ್ಯಮವನ್ನಾಗಿ ಆಯ್ಕೆ ಮಾಡಿಕೊಳ್ಳುವದಕ್ಕೂ ತುಂಬಾ ವ್ಯತ್ಯಾಸವಿದೆ. ಉದಾಹರಣೆಗೆ ನನ್ನನ್ನೇ ತೆಗೆದುಕೊಳ್ಳಿ. ಇಂಗ್ಲೀಷ ಅಧ್ಯಾಪಕನಾಗಿದ್ದುಕೊಂಡು ಕನ್ನಡದಲ್ಲಿ ಬರೆಯುವವನು ನಾನೂ ಒಬ್ಬ. ನಾನು ಕನ್ನಡದಲ್ಲಿ ಏಕೆ ಬರೆಯುತ್ತೇನೆಂದರೆ ಅದನ್ನು ನನ್ನ ಮನೆಯ ಭಾಷೆಯಾಗಿ ಬಾಲ್ಯದಿಂದಲೇ ಕಲಿತುಕೊಂಡು ಬಂದಿದ್ದೇನೆ. ಅದು ನನ್ನ ಮೈ ಮನಗಳಲ್ಲಿ ಹಾಸುಹೊಕ್ಕಾಗಿದೆ. ಕನ್ನಡದಲ್ಲಿ ಬರೆದಾಗ ಮಾತ್ರ ನಾನು ಸಂಪೂರ್ಣವಾಗಿ ನ್ಯಾಯ ಒದಗಿಸಿದ್ದೇನೆ ಎಂದನಿಸುತ್ತದೆ. ನನ್ನ ಬೇರುಗಳು ಕನ್ನಡದಲ್ಲಿರುವದರಿಂದ ನಾನು ಅದರಲ್ಲಿ ಬರೆಯುವಾಗ ನನ್ನೆಲ್ಲ ಭಾವನೆಗಳನ್ನು ಸಂಪೂರ್ಣವಾಗಿ ಹೊರಹಾಕಬಲ್ಲೆ. ನನ್ನ ಸಂವೇದನೆಗಳೆಲ್ಲ ಅದರಲ್ಲಿಯೇ ಮುಳುಗಿ ತೇಲಾಡಿದ್ದರಿಂದ ನನ್ನ ಬರಹಗಳೆಲ್ಲ ನನ್ನ ಅಂತರಂಗವನ್ನು ಮೀಟಿಕೊಂಡು ಬರಬಲ್ಲವು. ಬಾಲ್ಯದಲ್ಲಿ ಯಾವ ಭಾಷೆ ನಮ್ಮ ಸಂವೇದನೆಯಲ್ಲಿ ಬೆರೆತಿರುತ್ತದೋ ಅದೇ ಭಾಷೆ ಕೊನೆ ತನಕ ಬರುತ್ತದೆ ಮತ್ತು ಅದೊಂದೇ ಭಾಷೆ ನಮ್ಮ ಸಂವೇದನೆಯ, ಅಭಿವ್ಯಕ್ತಿಯ, ಸೃಜನಶೀಲತೆಯ ತಾಯಿ ಬೇರಾಗಿರುತ್ತದೆ. ಈ ಹಿಂದೆ ನನ್ನ ಬ್ಲಾಗ್ ಮಿತ್ರರೊಬ್ಬರು “ಕರ್ನಾಟಕದಲ್ಲಿ ಇಂಗ್ಲೀಷಿನಲ್ಲಿ ಬರೆಯುವವರು ತುಂಬಾ ಕಮ್ಮಿ. ನೀವೇಕೆ ಕನ್ನಡದಲ್ಲಿ ಬರೆಯುವ ಬದಲು ಇಂಗ್ಲೀಷಿನಲ್ಲಿ ಬರೆದು ಆ ಕೊರತೆಯನ್ನು ನೀಗಿಸಬಾರದು?” ಎಂದು ಸಲಹೆಕೊಟ್ಟಿದ್ದರು. ಸರಿ, ಒಮ್ಮೆ ನೋಡಿಯೇಬಿಡೋಣವೆಂದು ನೇರವಾಗಿ ಇಂಗ್ಲೀಷನಲ್ಲಿ ಬರೆಯತೊಡಗಿದರೆ ಅದರಲ್ಲಿ ಜೀವ ಮಾತ್ರವಿದ್ದು ಭಾವದ ಕೊರತೆ ಎದ್ದು ಕಾಣುತ್ತಿತ್ತು. ಹಾಗೂ ಅದರಲ್ಲಿ ಬರೀ ನನ್ನ ಅಕ್ಷರಗಳಿದ್ದವೇ ವಿನಃ ನಾನಿರಲಿಲ್ಲ. ಹೀಗಾಗಿ ಕನ್ನಡದಲ್ಲಿ ಬರೆಯಲು ಗಟ್ಟಿಯಾದ ನಿರ್ಧಾರ ಮಾಡಿದೆ. ಇನ್ನು ಭಾರತೀಯ ಇಂಗ್ಲೀಷ್ ಲೇಖಕರ ಬಗ್ಗೆ ಹೇಳುವದಾದರೆ ಬಹುಶಃ ಇಂಗ್ಲೀಷ ವಾತಾವರಣ ಅಥವಾ ಇಂಗ್ಲೀಷಿನಲ್ಲಿ ಬರೆಯಲು ಪೂರಕವಾಗುವ ಅಂಶಗಳು ಅವರಿಗೆ ಬಾಲ್ಯದಿಂದಲೇ ಸಿಕ್ಕಿರಬಹುದು. ಅಥವಾ ಇಂಗ್ಲೀಷಿನಲ್ಲಿ ಬರೆದರೆ ಮಾತ್ರ ಅದನ್ನು ಎಲ್ಲರಿಗೂ ಮುಟ್ಟಿಸಿ ಖ್ಯಾತಿಯನ್ನು ಪಡೆಯಬಹುದೆಂಬ ಒಳ ಆಸೆಯಿಂದ ಅವರು ಅನಿವಾರ್ಯವಾಗಿ ಇಂಗ್ಲೀಷಿನಲ್ಲಿ ಬರೆದಿರಬಹುದು.
ಸಾಮಾನ್ಯವಾಗಿ ನಾವೆಲ್ಲರೂ ಇಂಗ್ಲೀಷ್ ಭಾಷೆಯನ್ನು ಬರೆಯುವಾಗ/ಮಾತನಾಡುವಾಗ ಮೊದಲು ನಾವು ನಮ್ಮ ಮಾತೃಭಾಷೆಯಲ್ಲಿ ಯೋಚಿಸಿ ಆನಂತರ ಅದನ್ನು ಇಂಗ್ಲೀಷಿಗೆ ಭಾಷಾಂತರಗೊಳಿಸುತ್ತೇವೆ. ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಒಮ್ಮೆ “ನಾನು ಏನಾದರೂ ಬರೆಯುವದಿದ್ದರೆ ಮೊದಲು ಕನ್ನಡದಲ್ಲಿ ಬರೆಯುತ್ತೇನೆ. ಆನಂತರ ಅದನ್ನು ಇಂಗ್ಲೀಷಿಗೆ ಭಾಷಾಂತರಿಸುತ್ತೇನೆ. ಆಗಲೇ ನನ್ನೆಲ್ಲ ಭಾವನೆಗಳು ಸ್ಪಷ್ಟವಾಗಿ ಮೂಡಲು ಸಾಧ್ಯ.” ಎಂದು ಹೇಳಿದ್ದರು. ಈ ಎಲ್ಲ ಹಿನ್ನೆಲೆಯಲ್ಲಿ ಕನ್ನಡದ ಇಂಗ್ಲೀಷ್ ಅಧ್ಯಾಪಕರೇಕೆ ಇಂಗ್ಲೀಷಿನಲ್ಲಿ ಬರೆಯಲಿಲ್ಲ/ಬರೆಯುತ್ತಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ಹೇಳಿದೆ.
ನನ್ನ ಉತ್ತರದಿಂದ ಅವರು ಕನ್ವಿನ್ಸ್ ಆದಂತೆ ಕಾಣಲಿಲ್ಲ. ನಾನೂ ಕೂಡ ಅವರನ್ನು ಹೆಚ್ಚು ಬಲವಂತದಿಂದ ಕನ್ವಿನ್ಸ್ ಮಾಡಲು ಹೋಗಲಿಲ್ಲ.
-ಉದಯ್ ಇಟಗಿ
(ಇಂದಿಗೆ ನನ್ನ ಬ್ಲಾಗಿಗೆ ಎರಡು ವರ್ಷ. ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಮುಂದುವರಿಯಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು)
ಈ ಲೇಖನವನ್ನು ‘ಅವಧಿ’ ಬಳಗವು ಪ್ರಕಟಿಸಿದೆ. ಅವರಿಗೆ ವಿಶೇಷವಾದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅದರ ಲಿಂಕ್ ಇಲ್ಲಿದೆ. http://avadhi.wordpress.com/2010/12/30/%E0%B2%87%E0%B2%82%E0%B2%97%E0%B3%8D%E0%B2%B2%E0%B3%80%E0%B2%B7%E0%B3%8D-%E0%B2%85%E0%B2%A7%E0%B3%8D%E0%B2%AF%E0%B2%BE%E0%B2%AA%E0%B2%95%E0%B2%B0%E0%B3%87%E0%B2%95%E0%B3%86-%E0%B2%87%E0%B2%82%E0%B2%97/#comments
ಅಂದ ಹಾಗೆ http://ashok567.blogspot.com/ ಬ್ಲಾಗಿನ ಅಶೋಕ ಕುಮಾರ್ ರವರು ಈ ವಾರ “ಉದಯವಾಣಿ” ಯಲ್ಲಿ ನನ್ನ ಬ್ಲಾಗನ್ನು ಪರಿಚಯಿಸಿದ್ದಾರೆ. ಅವರಿಗೆ ವಿಶೇಷವಾದ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಅದರ ಲಿಂಕ್ ಗಳು ಇಲ್ಲಿವೆ;
1) http://www.udayavani.com/news/38929L15-%E0%B2%A8-%E0%B2%B8-%E0%B2%A4-%E0%B2%A4--%E0%B2%B8-%E0%B2%B8-%E0%B2%B0.html
2) http://74.127.61.106/epaper/PDF/2010-12-27/Man27121006M.pdf
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ2 ವಾರಗಳ ಹಿಂದೆ
-
-
ಅರ್ಬುದನ ಡೈರಿ – ಹೊಸ ಪುಸ್ತಕ1 ತಿಂಗಳ ಹಿಂದೆ
-
ದಾವಣಗೆರೆಯಲ್ಲಿ ಸಿಟಿ ಬಸ್ ಹಿಡಿದು...3 ತಿಂಗಳುಗಳ ಹಿಂದೆ
-
Hello world!5 ತಿಂಗಳುಗಳ ಹಿಂದೆ
-
ಮಾತು ಮರೆತವರೇ ಜಗತ್ತನ್ನಾಳುತ್ತಾರೆ7 ತಿಂಗಳುಗಳ ಹಿಂದೆ
-
Sawanna @168 ತಿಂಗಳುಗಳ ಹಿಂದೆ
-
-
ತರಚೀ ಪುಷ್ಪೋಪಾಖ್ಯಾನ1 ವರ್ಷದ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ2 ವರ್ಷಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!3 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು6 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?6 ವರ್ಷಗಳ ಹಿಂದೆ
-
ದ್ವಿಪದಿಗಳು6 ವರ್ಷಗಳ ಹಿಂದೆ
-
ಹೊಸ ದಿನ6 ವರ್ಷಗಳ ಹಿಂದೆ
-
The story of telling a story!6 ವರ್ಷಗಳ ಹಿಂದೆ
-
-
-
ಆಸೆ....!!!7 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 27 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!7 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ7 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?8 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!8 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್8 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ9 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!9 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ9 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು9 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!10 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:10 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್11 ವರ್ಷಗಳ ಹಿಂದೆ
-
ಕತ್ತಲೆ.................11 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..11 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ11 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ11 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು11 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!11 ವರ್ಷಗಳ ಹಿಂದೆ
-
-
ಗಾಜಿನ ಲೋಟದಲ್ಲಿ ರಸ್ನಾ12 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ12 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ12 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?13 ವರ್ಷಗಳ ಹಿಂದೆ
-
ತೀರ....13 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ13 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?13 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ13 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು13 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ13 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)14 ವರ್ಷಗಳ ಹಿಂದೆ
-
(ಮಹಿಳಾ)ವಾದ:14 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ14 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…14 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ14 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್15 ವರ್ಷಗಳ ಹಿಂದೆ
-
ಕಫನ್15 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …15 ವರ್ಷಗಳ ಹಿಂದೆ
-
ನನ್ನ ಜಡೆ15 ವರ್ಷಗಳ ಹಿಂದೆ
-
ಕೇಳಿ-೫15 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು15 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು16 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧16 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ16 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ16 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು17 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು17 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?17 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !17 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...19 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ತಸ್ಲೀಮಾರ ಮೂರು ಅನುವಾದಿತ ಕವನಗಳು
- ನನ್ನೊಳಗಿನ ಬರಹಗಾರ ರೂಪಗೊಂಡಿದ್ದು ಭಾಗ-೧
- A Ghazal
- ಅಪ್ಪ
- ಹೀಗೆ ಸುಮ್ಮನೆ
- 17. The Mauritanian beauties that often spoil our minds…
- ಕೇವಲ ಬೂದಿ
- ಇವತ್ತಿನ ರೂವಾರಿ.ಕಾಂನಲ್ಲಿ ನನ್ನ ನಾಟಕ ಶೇಕ್ಸ್ಪಿಯರ್ ನ ಶ್ರೀಮತಿ ಕುರಿತು ಪಾರ್ವತಿ ಐತಾಳ್ ಅವರು ಬರೆದಿರುವ ವಿಮರ್ಶ
- Reviews Received So Far for the Libya Diary
- ನಾವು ಹುಡುಗರೇ ಹೀಗೆ........
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
8 ಕಾಮೆಂಟ್(ಗಳು):
ಉದಯ್ ಸರ್..
ಕಾರ್ನಾಡರು ಹೇಳಿದ್ದು ಸತ್ಯ..
ನಮ್ಮ ಆಡು ಭಾಷೆ, ಮಾತೃಭಾಷೆಯಲ್ಲಿ ಯೋಚಿಸುತ್ತೇವೆ..
ಯಾವ ಭಾಷೆಯಲ್ಲಿ ಯೋಚಿಸುತ್ತೇವೆಯೋ ಅದರಲ್ಲೇ ಬರೆಯುವದು ಸುಲಭ..
ಮತ್ತು ಸಹಜ..
ಎರಡು ವರ್ಷ ತುಂಬಿದ ನಿಮ್ಮ ಬ್ಲಾಗಿಗೆ ಅಭಿನಂದನೆಗಳು..
ನಿಮ್ಮ ಬ್ಲಾಗಿನಲ್ಲಿ ಬರುವ ಎಲ್ಲ ವಿಷಯಗಳೂ ವಿಶಿಷ್ಟವಾಗಿರುತ್ತದೆ..
ಅದರಲ್ಲೂ...
ಬೇರೆ.. ಬೇರೆ ಭಾಷೆಗಳ ಕಥೆಗಳನ್ನು, ಕವನಗಳನ್ನು ಅನುವಾದಿಸಿ..
ನಮಗೆ ಉಣ ಬಡಿಸಿತ್ತೀರಲ್ಲ ಅದು ನನಗಂತೂ ಬಹಳ ಇಷ್ಟ...
ಮತ್ತೊಮ್ಮೆ ಅಭಿನಂದನೆಗಳು..
"ನೇರವಾಗಿ ಇಂಗ್ಲೀಷನಲ್ಲಿ ಬರೆಯತೊಡಗಿದರೆ ಅದರಲ್ಲಿ ಜೀವ ಮಾತ್ರವಿದ್ದು ಭಾವದ ಕೊರತೆ ಎದ್ದು ಕಾಣುತ್ತಿತ್ತು." - ನೂರೂ ಶೇಕಡಾ ನಿಜ!
ಶುಭಾಶಯಗಳು. ನಿಮ್ಮಿಂದ ಮತ್ತಷ್ಟು ವೈವಿಧ್ಯಮಯ ಬರಹ ಬರಲಿ.
ಉದಯ,
ಹುಟ್ಟು ಹಬ್ಬದ ಶುಭಾಶಯಗಳು ಹಾಗು ಹೊಸ ವರ್ಷದ ಶುಭಾಶಯಗಳು.
ನೀವು ಇಲ್ಲಿ ಬರೆದಿದ್ದು ಸಂಪೂರ್ಣ ಸತ್ಯವಾಗಿದೆ. ದಯವಿಟ್ಟು ಕನ್ನಡದಲ್ಲಿಯೇ ಬರವಣಿಗೆಯನ್ನು ಮುಂದುವರೆಸಿ.
ಶುಭಾಶಯಗಳು ಉದಯ ಅವರೇ, ನಿಮ್ಮ ಬರಹಗಳು ಮುಂದುವರಿಯಲಿ.
ಸರ್, ಹೌದು, ನಾವು ಯಾವ ಭಾಷೆಯಲ್ಲಿ ಭಾವನೆಯ ಜೀವ ತುಂಬಬಲ್ಲೆವು ಎಂಬ ತೃಪ್ತಿ ನಮಗೆ ಸಿಗುತ್ತದೋ ಅದೇ ಭಾಷೆಯಲ್ಲಿ ಬರೆಯಬೇಕು. ಅದರಿಂದಲೇ ಅಲ್ಲವೇ ನಮ್ಮ ಹಲವಾರು ಸಾಹಿತಿಗಳ ಮನೆಮಾತು ಬೇರೆಯಾಗಿದ್ದರೂ ಕನ್ನಡದಲ್ಲಿ ಬರೆದು ಶ್ರೀಮಂತಗೊಳಿಸಿದ್ದು. ಒಂದಿಷ್ಟು ಜನ ಇಂಗ್ಲೀಷಿನಲ್ಲಿ ಬರೆದು ಯಶಸ್ವಿ ಆಗಿರಬಹುದು. ಆದರೆ ಯಶಸ್ವಿಯಾದುದ್ದೆಲ್ಲಾ ಅತ್ಯುತ್ತಮವಾದದ್ದೇ ಆಗಿರಬೇಕಂತಿಲ್ಲ. ;) .ಇರಲಿ.
ಎರಡು ವರ್ಷ ಪೂರೈಸಿದ್ದಕ್ಕೆ ಅಭಿನಂದನೆಗಳು.
ಬರೆಯುತ್ತಿರಿ.
ಇಂಗ್ಲಿಷ್ ಅಧ್ಯಾಪಕರಾಗುವುದು ಒಂದು Profession ಮಾತ್ರ . ಪ್ರತಿಯೊಬ್ಬ ಮನುಷ್ಯನೂ ಯೋಚಿಸುವುದು ಮತ್ತು
ಅಭಿವ್ಯಕ್ತಿಸುವುದು ತನ್ನ ಮಾತೃ ಭಾಷೆಯಲ್ಲಿ ಮಾತ್ರ ಅಲ್ಲವೇ ? .. ಇಂಗ್ಲಿಷ್ ಸಾಹಿತ್ಯ ಓದೋದರಿಂದ ನಮ್ಮ ಯೋಚನಾ ಲಹರಿ
ವಿಸ್ತಾರವಾಗಬಹುದು ಹಾಗಂತ ಅದೇ ಭಾಷೆಯಲ್ಲಿ ತಾನೂ ಬರೆಯಬೇಕೆಂಬ ವಾದ ಸರಿಯಲ್ಲ . ಪ್ರತಿಯೊಬ್ಬನಿಗೂ ತಾನು ಬರೆದಿದ್ದನ್ನು ಜನ
ಓದಲೇಬೇಕು ಎಂಬ ಹಂಬಲ ಇದ್ದೆ ಇರುತ್ತೆ . ಹಾಗಾಗಿ ತನ್ನ Nativity ಗೆ ತಕ್ಕಂತೆ ಬರೆಯಲು .ಬರೆದದ್ದನ್ನು ಸಾಮಾನ್ಯ ಓದುಗನಿಗೊಬ್ಬನಿಗೂ ತಲುಪಿಸಲು ಮಾತೃಭಾಷೆಯೇ ಮಾಧ್ಯಮ . ಅರುಂದತಿ ರಾಯ್ , ಸಲ್ಮಾನ್ ರಶ್ದಿ , ಆಶಿಶ್ ನಂದಿ , ಯಂತ NRI ಲೇಖಕರ ಬರಹಗಳನ್ನು ಬುದ್ದಿವಂತ ವರ್ಗ ಮಾತ್ರ ಓದಲು ಸಾಧ್ಯ. ಆದರೆ ಅನಂತಮೂರ್ತಿ . ಕುವೆಂಪು ,ಕಾರ್ನಾಡ್,ಮಾಸ್ತಿ, ಲಂಕೇಶ್ , ಬೇಂದ್ರೆ ಇಂತಹವರ ಬರಹಗಳನ್ನು ಯಾರಾದರು ಓದಬಹುದಲ್ಲವೆ ? ಇವರಲ್ಲಿ ಬಹುತೇಕರು ಇಂಗ್ಲಿಷ್ ನಲ್ಲೇ ಪದವಿ ಗಳಿಸಿದವರಲ್ಲವೇ ????
So let them write in the language,in which their thoughts have been generated. ಭಾಷೆ ಯಾವುದಾದರೇನು ಭಾವ ಮುಖ್ಯ
ಏನಂತೀರಿ ??????
Nimma vishleshaNe thumba ishta aaythu uday sir.... nan friends yaavaagalu english blog bari anthaare... naanu aagella heltha irteeni nanage English nalli abhivyakthi padisoke aagalla antha...
ನಲ್ಮೆಯ ಉದಯ್
ಹಾರ್ದಿಕ ಶುಭಾಶಯಗಳು ಮತ್ತು ಬಿಸಿಲ ಹನಿ ಎರಡು ವಸಂತಗಳನ್ನು ಕಂಡ ಶುಭಘಳಿಗೆಯಲ್ಲಿ ಮತ್ತೂ ಹೆಚ್ಚು ಹೆಚ್ಚು ಬರೆಯುವ ಬಿಸಿಲ ಹನಿಯ ಪಸರಿಸುವಿಕೆ ಹಾರೈಕೆ...ಹೌದು..ಇಂಗ್ಲೀಷಿನ ಅಧ್ಯಾಪಕರುಗಳು ಹೆಚ್ಚು ಬರೆಯೊಲ್ಲವೇ..?
ಕಾಮೆಂಟ್ ಪೋಸ್ಟ್ ಮಾಡಿ