ನಾನು S.S.L.C. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ತೆಗೆದುಕೊಂಡು ಪಾಸಾಗಿದ್ದರಿಂದ ಧಾರವಾಡದಲ್ಲಿ ಆಗಲೇ ವಕೀಲ ವೃತ್ತಿಯನ್ನು ಮಾಡುತ್ತಿದ್ದ ನನ್ನ ಚಿಕ್ಕಪ್ಪ (ಜಗದೀಶ್ ಇಟಗಿ) ಇನ್ನುಮುಂದೆ ನಾನು ಓದಿಸುತ್ತೇನೆಂದು ಕರೆದುಕೊಂಡು ಬಂದನು. ನನಗೆ ಹೆಚ್ಚು ಅಂಕಗಳು ಬಂದಿದ್ದರಿಂದ ಸಹಜವಾಗಿ ಎಲ್ಲರ ಮನೆಯಲ್ಲೂ ಹೇಳುವಂತೆ ನಮ್ಮ ಮನೆಯಲ್ಲೂ ಸಾಯಿನ್ಸ್ ತೆಗೆದುಕೊಳ್ಳಲು ಹೇಳಿದರು. ನನಗೆ ಮೊದಲಿನಿಂದಲೂ ಕಥೆ ಕಾದಂಬರಿಗಳ ಹುಚ್ಚು ಇದ್ದುದರಿಂದ “ನಾನು ಆರ್ಟ್ಸ್ ತಗೋತಿನಿ. ನನಗೆ ಸಾಯಿನ್ಸ್ ಅಂದ್ರ ಅಷ್ಟಕ್ಕಷ್ಟ. ದಯವಿಟ್ಟು ಆರ್ಟ್ಸ್ ತಗೊಳ್ಳೋಕೆ ಬಿಡ್ರಿ” ಎಂದು ಗೋಗರೆದರೂ ನಮ್ಮ ಮನೆಯವರು “ಆರ್ಟ್ಸ್ ತಗೊಂಡು ಏನ್ಮಾಡ್ತಿ? ಮಣ್ಣು ತಿಂತಿಯಾ? ಸುಮ್ಕ ಸಾಯಿನ್ಸ್ ತಗೊಂಡು ಉದ್ದಾರ ಆಗು” ಎಂದು ಹೇಳಿದರು. ಅದರ ಹಿಂದೆ ಅವರ ಕಾಳಜಿಯಿತ್ತಾದರೂ ಆ ಕಾಳಜಿ ನನಗೆ ಹಿಂಸೆ ಎನಿಸಿದ್ದಂತೂ ಸತ್ಯ.
ನನಗೋ ಅತ್ತ ಖಡಾಖಂಡಿತವಾಗಿ ಬೇಡ ಎಂದು ಹೇಳಲಾಗದೆ ಇತ್ತ ಒಪ್ಪಿಕೊಳ್ಳಲಾಗದ ಸಂದಿಗ್ಧತೆ ಹುಟ್ಟಿತು. ಒಟ್ಟಿನಲ್ಲಿ ನನಗೆ ಆ ಸಂದಿಗ್ಧತೆಯಿಂದ ಹೇಗಾದರು ಪಾರಾದರೆ ಸಾಕೆಂದು “ನನಗ ಫಿಜಿಕ್ಸ್, ಕೆಮಿಸ್ಟ್ರಿ ಅಂದ್ರ ಆಗಲ್ಲ. ನಾನು ಅರ್ಟ್ಸೇ ತಗೊಳ್ಳತೀನಿ” ಎಂದು ಬಚಾವಾಗಲು ನೋಡಿದೆ. ಆದರೆ ಅದಾಗಲೇ ಸಾಯಿನ್ಸ್ ತಗೊಂಡು ವೆಟರ್ನರಿ ಡಾಕ್ಟರ್ ಆಗಿದ್ದ ನನ್ನ ದೊಡ್ಡಪ್ಪನ ಮಗ “ನಿನಗೆ ಮ್ಯಾಥ್ಸ್ ನಲ್ಲಿ ಒಳ್ಳೆ ಮಾರ್ಕ್ಸ್ ಬಂದಿದೆ. ಮ್ಯಾಥ್ಸ್ ಬಂದ್ರ ಫಿಜಿಕ್ಸ್, ಕೆಮಿಸ್ಟ್ರಿ ಬಂದಂಗ” ಎಂದು ಅದ್ಯಾವ ತರ್ಕದ ಮೇಲೆ ಈ ಐಡಿಯಾ ಕೊಟ್ಟನೋ ಅಂತೂ ನಾನೂ ಕನ್ವಿನ್ಸ್ ಆಗಿ ಅವರಿಚ್ಛೆಯಂತೆ ನಡೆದುಕೊಂಡಿದ್ದಾಯಿತು. ಮೇಲಾಗಿ ನನಗೆ ಗಣಿತ ಅಚ್ಚುಮೆಚ್ಚಿನ ವಿಷಯವಾಗಿತ್ತು ಹಾಗೂ ನಾನು ಅತ್ಯಂತ ಪ್ರೀತಿಯಿಂದ, ಶ್ರದ್ಧೆಯಿಂದ ಲೆಕ್ಕಗಳನ್ನು ಅಚ್ಚುಕಟ್ಟಾಗಿ ಬಿಡಿಸುತ್ತಿದ್ದೆ. ಈಗಲೂ ಅಷ್ಟೆ ನನಗೆ ಗಣಿತವೆಂದರೆ ಪಂಚಪ್ರಾಣ! ಹೇಗೂ ಗಣಿತವಿರುತ್ತದಲ್ಲ? ಅದರ ಜೊತೆ ಇನ್ನುಳಿದಿದ್ದನ್ನು ಕಷ್ಟಪಟ್ಟು ಓದಿ ಪಾಸ್ ಮಾಡಿದರಾಯಿತು ಎಂದುಕೊಂಡು ಒಂದುತರದ ಹುಂಬತನದ ಮೇಲೆ ಸಾಯಿನ್ಸ್ ತಗೊಂಡಾಯ್ತು.
ಧಾರವಾಡದ ಕಿಟೆಲ್ ಕಾಲೇಜಿನಲ್ಲಿ ನಾನು ಅಟೆಂಡ್ ಮಾಡುತ್ತಿದ್ದುದು ಬರಿ ಮೂರೇ ಮೂರು ಕ್ಲಾಸು; ಕನ್ನಡ,ಇಂಗ್ಲೀಷ್ ಮತ್ತು ಗಣಿತ. ಉಳಿದವುಗಳನ್ನು ಬಲವಂತವಾಗಿ ಕಷ್ಟಪಟ್ಟು ಕೇಳಿಸಿಕೊಂಡರೂ ತಲೆಗೆ ಹೋಗದು. ಇಷ್ಟವೇ ಇಲ್ಲದ ಮೇಲೆ ಹೇಗೆ ತಾನೆ ತಲೆಗೆ ಹೋದೀತು? ನನ್ನ ಕಾಲೇಜಿನ ಅವಧಿಯನ್ನು ಬಹಳಷ್ಟು ಸಾರಿ ಕಾಲೇಜು ಲೈಬ್ರರಿಯಲ್ಲೋ ಇಲ್ಲ ವಿದ್ಯಾವರ್ಧಕ ಸಂಘದ ಲೈಬ್ರರಿಯಲ್ಲೋ ಕಳೆಯುತ್ತಿದ್ದೆ. ಪರಿಣಾಮ, ದ್ವಿತಿಯ ಪಿ.ಯು.ಸಿ.ಯಲ್ಲಿ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ವಿಷಯಗಳಲ್ಲಿ ಗೋತಾ ಹೊಡೆದೆ. ಇದರಿಂದ ನನ್ನ ಮೇಲೆ ಅಗಾಧ ನಿರೀಕ್ಷೆ ಇಟ್ಟುಕೊಂಡವರಿಗೆ ಬಲವಾದ ಪೆಟ್ಟುಬಿತ್ತು. ನಾನು ಫೇಲಾಗಿದ್ದು ಕೇಳಿ ನಮ್ಮ ಮನೆಯವರೆಲ್ಲರೂ ತುಚ್ಛವಾಗಿ ಕಂಡರು. ನನಗೆ ಆಶ್ರಯ ಕೊಟ್ಟಿದ್ದ ಚಿಕ್ಕಪ್ಪ “ನೀನು ಚನ್ನಾಗಿ ಓದುತ್ತೀಯೆಂದು ಕರೆದುಕೊಂಡುಬಂದೆ. ಇನ್ನು ನಿಂದು ನೀ ನೋಡ್ಕೋ” ಎಂದು ಹೇಳಿ ಕೈ ತೊಳೆದುಕೊಂಡರು.
ಸರಿ, ಮುಂದೆ ಏನು ಮಾಡುವದು? ಎಲ್ಲಿಗೆ ಹೋಗುವದು? ಇನ್ಮುಂದೆ ನನ್ನ ಜವಾಬ್ದಾರಿ ತೆಗೆದುಕೊಳ್ಳೋರು ಯಾರು? ನನ್ನೂರಿಗೆ ಹೋಗುವದೆ? ಮೊದಲಿನಿಂದಲೂ ನನ್ನೂರಿನಲ್ಲಿ ಇದ್ದು ಅಭ್ಯಾಸವಿಲ್ಲದ್ದರಿಂದ ಅಲ್ಲಿಗೆ ಹೋಗಿ ಮಾಡುವದಾದರು ಏನನ್ನು? ಯಾರ ಹತ್ತಿರ ಇರಬೇಕು? ಹೀಗೆ ಹತ್ತಾರು ಪ್ರಶ್ನೆಗಳು ನನ್ನ ಕಾಡತೊಡಗಿದವು. ಬಣ್ಣಬಣ್ಣದ ಕನಸು ಕಾಣಬೇಕಾದ ಹದಿಹರೆಯದಲ್ಲಿ ಇನ್ನು ಮುಂದೆ ಹೇಗೆ ಬದುಕಬೇಕು ಎನ್ನುವದರ ಕುರಿತು ಸುದೀರ್ಘವಾಗಿ ಆಲೋಚಿಸುತ್ತಿದ್ದೆ. ಅಲ್ಲಿಂದ ನನ್ನ ಬದುಕು ಹಳಿ ತಪ್ಪುತ್ತಲೇ ಹೋಯಿತು.
ಮುಂದೆ ಒಂದೆರೆಡು ತಿಂಗಳು ದೊಡ್ಡಮ್ಮನ ಊರು ಕಲಕೋಟಿ, ಹಾಗೂ ಅಕ್ಕನ ಬಳಿ ಗದುಗಿನಲ್ಲಿ ಕಳೆದೆ. ಒಂದೊಂದು ಸಾರಿ ನಾನು ಹುಟ್ಟಿ ಏನು ಪ್ರಯೋಜನ ಎಂದು ನನ್ನಷ್ಟಕ್ಕೆ ನಾನೇ ಒಬ್ಬನೇ ಕುಳಿತು ಬಿಕ್ಕುತ್ತಿದ್ದೆ. ಆ ಬಿಕ್ಕುಗಳಿಗೆ ಅಲ್ಲಿ ಆ ಕ್ಷಣದ ಸಾಂತ್ವನ ಮಾತ್ರವಿತ್ತು. ಈ ಸಮಯದಲ್ಲಾದರೂ ಅಪ್ಪನಾದವನು ಮುಂದೆ ಏನು ಮಾಡುತ್ತಿ? ಹೇಗೆ? ಏನು? ಎತ್ತ? ಎಂದು ಕೇಳುವ ವ್ಯವಧಾನವನ್ನು ಒಂಚೂರು ತೋರಲಿಲ್ಲ. ಮುಂಚಿನಿಂದಲೂ ಆತನ ಬಗ್ಗೆ ಗೊತ್ತಿದ್ದರಿಂದ ನಾನು ಕೂಡ ಆತನನ್ನು ‘ಮುಂದೆ ಹೇಗೆ?’ ಎಂದು ಕೇಳುವ ಗೊಡವೆಗೆ ಹೋಗಲಿಲ್ಲ. ಆದರೆ ನನ್ನ ಸಿಟ್ಟು, ಆಕ್ರೋಶಗಳು ಒಳಗೊಳಗೆ ಭುಸಗುಟ್ಟುತ್ತಲೇ ಇದ್ದವು.
ಹೀಗಿರುವಾಗ ನನ್ನ ಸೋದರ ಮಾವ ಲಕ್ಷ್ಮೇಶ್ವರದ ದವಾಖಾನೆಯೊಂದರಲ್ಲಿ ಕೌಂಪೊಂಡರ್ ಕೆಲಸ ಹುಡುಕಿ ಅಲ್ಲಿಗೆ ನನ್ನ ಸೇರಿಸಿದರು. ಅದು ಅವರೂರು ಸುಲ್ತಾನಪೂರಕ್ಕೆ ಹತ್ತು ಕಿಲೊಮೀಟರ್ ದೂರದಲ್ಲಿತ್ತು. ನನ್ನ ಮಾವ ದಿನಾ ಬಸ್ಸಿಗೆ ಇಲ್ಲಿಂದಾನೆ ಓಡಾಡು ಎಂದರು. ಆ ಪ್ರಕಾರ ದಿನಾ ಬೆಳಿಗ್ಗೆ ಬುತ್ತಿಕಟ್ಟಿಕೊಂಡು ಎಂಟು ಗಂಟಗೆ ಹೋಗಿ ರಾತ್ರಿ ಎಂಟರ ಬಸ್ಸಿಗೆ ಇಲ್ಲವಾದರೆ ಒಮ್ಮೊಮ್ಮೆ ಹತ್ತರ ಬಸ್ಸಿಗೆ ವಾಪಾಸಾಗುತ್ತಿದ್ದೆ. ಅದು ನಾನು ಜೀವನದಲ್ಲಿ ಮೊಟ್ಟಮೊದಲಬಾರಿಗೆ ಹಿಡಿದ ಕೆಲಸವಾಗಿತ್ತು. ಆ ದವಾಖಾನೆ ಇಡಿ ಲಕ್ಷ್ಮೇಶ್ವರದಲ್ಲಿಯೇ ಪ್ರಸಿದ್ದಿ ಪಡೆದ ದವಾಖಾನೆಯಾಗಿತ್ತು. ಅಲ್ಲಿ ನನ್ನ ಜೊತೆ ಇನ್ನೊಬ್ಬ ಕೌಂಪೊಂಡರ ಈಗಾಗಲೇ ತುಂಬಾ ವರ್ಷದಿಂದ ಕೆಲಸ ಮಾಡುತ್ತಿದ್ದ. ಅವನಿಂದ ಡ್ರೆಸ್ಸಿಂಗ್ ಮಾಡುವದು, ಆಪರೇಶನ್ ಥೇಟರ್ ರೆಡಿ ಮಾಡುವದು, ಡಾಕ್ಟರ್ ಗಳಿಗೆ ಸಹಾಯ ಮಾಡುವದು, VRL ಮೂಲಕ ದೂರದ ಊರಿಂದ ಬರುವ ಔಷಧಿಗಳನ್ನು ಆಸ್ಪತ್ರೆಯ ಔಷಧಿ ಅಂಗಡಿಗೆ ತಂದುಹಾಕುವದು ಇವೆ ಮೊದಲಾದ ಕೆಲಸಗಳನ್ನು ಕಲಿತುಕೊಂಡೆ.
ನಾನು ಮಾಡುವ ಕೆಲಸವನ್ನು ಅತ್ಯಂತ ಖುಶಿಯಿಂದಲೇ ಮಾಡುತ್ತಿದ್ದೆ. ನನಗೆ ಕೌಂಪೊಂಡರ್ ಕೆಲಸ ಕೀಳಾಗಿ ಕಾಣಲಿಲ್ಲ. ಇದು ಬಿಟ್ಟರೆ ಬೇರೆ ಅವಕಾಶಗಳು ಇರಲಿಲ್ಲ. ಪಿ.ಯು.ಸಿ ಫೇಲಾದವನಿಗೆ ಇದಕ್ಕಿಂತ ಬೇರೆ ಯಾವ ಕೆಲಸ ತಾನೆ ಸಿಕ್ಕೀತು? ಮೇಲಾಗಿ ಈ ಕೆಲಸ ಇಲ್ಲದಿದ್ದರೆ ಬೇರೆ ಎಲ್ಲ ರೀತಿಯಿಂದಲೂ ನಾನು ಇನ್ನೊಬ್ಬರ ಮೇಲೆ ಅವಲಂಬನೆಯಾಗಬೇಕಿತ್ತು. ಅದು ನನಗೆ ಇಷ್ಟವಿರಲಿಲ್ಲ. ಏನಾದರಾಗಲಿ ಸ್ವತಂತ್ರವಾಗಿ ಬದುಕಬೇಕು ಎಂದುಕೊಂಡು ಕೆಲಸವನ್ನು ಚನ್ನಾಗಿ ಕಲಿಯತೊಡಗಿದೆ. ಅವತ್ತು ಶುರುವಾದ ನನ್ನ ಸ್ವಾಲಂಬನೆಯ ಪ್ರಜ್ಞೆ ಮುಂದೆ ನನ್ನಲ್ಲಿ ಬಲಗೊಳ್ಳುತ್ತಲೇ ಹೋಯಿತು.
ಮೊಟ್ಟಮೊದಲಬಾರಿಗೆ ಬದುಕನ್ನು ಕಟ್ಟಿಕೊಳ್ಳುವ ನೆಪದಲ್ಲಿ ಜಗತ್ತಿನೆದುರು ನಿಂತಿದ್ದೆ. ಅಲ್ಲಿ ಕ್ರಮೇಣ ಜಗತ್ತಿನ ಇನ್ನೊಂದು ಮುಖದ ಪರಿಚಯವಾಗತೊಡಗಿತು. ಅಲ್ಲಿಯವರೆಗೂ ಕಥೆ, ಕಾದಂಬರಿಗಳಂತೆ ಜೀವನವಿರುತ್ತದೆ ಎಂದು ಕಲ್ಪಿಸಿಕೊಂಡಿದ್ದವನಿಗೆ ವಾಸ್ತವದ ಕಹಿಸತ್ಯಗಳು ಬೇರೊಂದು ಸತ್ಯವನ್ನು ತೆರೆದಿಟ್ಟಿದ್ದವು. ಮೊಟ್ಟಮೊದಲಬಾರಿಗೆ ಕಲ್ಪನೆಗೂ ವಾಸ್ತವಕ್ಕೂ ಇರುವ ಅಂತರ ತಿಳಿದಿತ್ತು. ನನ್ನಿಂದ ನಾನು ಆಚೆ ನಿಂತು ಜಗತ್ತು ನೋಡಿದ್ದೆ. ಹುಚ್ಚಿಗೆ ಬಿದ್ದು ಕಥೆ, ಕಾದಂಬರಿಗಳನ್ನು ಓದಿ ಖುಶಿಪಡುತ್ತಿದ್ದವನಿಗೆ ವಾಸ್ತವದ ಬದುಕು ಭ್ರಮೆನಿರಸನಗೊಳಿಸಿತ್ತು. “ಕಥೆ, ಕಾದಂಬರಿಯಂತೆ ಜೀವನ ಇರೋದಿಲ್ಲಾ. ಅವನ್ನೋದಿ ಹಾಳಾಗಬೇಡ” ಎಂದು ನಮ್ಮ ಮನೆಯಲ್ಲಿ ದೊಡ್ಡವರು ಆಗಾಗ್ಗೆ ಹೇಳುತ್ತಿದ್ದುದು ಸ್ವಂತ ಅನುಭವಕ್ಕೆ ಬಂದಿತ್ತು. ದವಾಖಾನೆಯಲ್ಲಿ ಕಣ್ಣೆದುರಿಗೆ ನಡೆಯುವ ಮೋಸ, ವಂಚನೆ, ಸುಲಿಗೆಗಳನ್ನು ನೋಡಿ ಅಸಹಾಯಕನಾಗಿದ್ದೆ. ಮನಸ್ಸು ಆದರ್ಶ ಮತ್ತು ವಾಸ್ತವಗಳ ನಡುವೆ ತೂಗುತ್ತಿತ್ತು. ಇಂಥ ಕಡೆ ನಾನು ಕೆಲಸ ಮಾಡಬೇಕೆ? ಎಂಬ ಸಂದಿಗ್ಧತೆಯೂ ಆಗಾಗ ಎದುರಾಗುತ್ತಿತ್ತು. ಆದರೆ ಬೇರೆ ದಾರಿಯೇ ಇರಲಿಲ್ಲ! ಮೆಲ್ಲನೆ ಆದರ್ಶಗಳಿಗಿಂತ ಬದುಕು ದೊಡ್ಡದು ಎನಿಸತೊಡಗಿತು. ವಿಚಿತ್ರವೆಂದರೆ ಸಾಹಿತ್ಯ ಮತ್ತು ವಾಸ್ತವಬದುಕಿನ ನಡುವಿನ ಅಂತರ ತಿಳಿದ ಮೇಲೂ ನಾನು ಸಾಹಿತ್ಯ ಓದುವದನ್ನು ಕೈ ಬಿಡಲಿಲ್ಲ. ಅದು ಕೂಡ ಅಷ್ಟೆ; ನನ್ನನ್ನು ಯಾವತ್ತೂ ಕೈ ಬಿಡಲಿಲ್ಲ. ನಾನು ಸೋತಾಗ, ಹತಾಶಗೊಳಗಾದಾಗ, ಅವಮಾನಕ್ಕೀಡಾದಾಗ, ನೋವನ್ನುಂಡಾಗ..... ಹೀಗೆ ಬದುಕಿನ ಬೇರೆ ಬೇರೆ ಸಂದರ್ಭಗಳಲ್ಲಿ ನನ್ನ ಜೊತೆಗಿದ್ದುಕೊಂಡೇ ನನಗೊಂದಿಷ್ಟು ಸಮಾಧಾನ ಹೇಳಿದೆ.
ಈ ಎಲ್ಲದರ ಮಧ್ಯ ಒಂದಿಷ್ಟು ಕನಸುಗಳು ಚಿಗುರತೊಡಗಿದ್ದವು. ಅವು ಕೌಂಪೊಂಡರ್ ಆಗುವ ಕನಸುಗಳು. ಅವನ್ನು ನನ್ನ ಕೆಲಸ ಹುಟ್ಟುಹಾಕಿದ್ದೋ ಇಲ್ಲ ಬೇರೆಯವರು ನನ್ನ ಕೌಂಪೊಂಡರ್ ಕೆಲಸ ನೋಡಿ ಅವನ್ನು ಮನದಲ್ಲಿ ಬಿತ್ತಿ ಬೆಳೆದರೋ ಗೊತ್ತಿಲ್ಲ. ಅಂತೂ ಕೌಂಪೊಂಡರ್ ಆಗುವ ಕನಸು ಕಾಣತೊಡಗಿದೆ. ಆಗ ನಮ್ಮ ಮನೆಯವರು “ಕೌಂಪೊಂಡರ್ ಆಗಿ ಒಳ್ಳೆ ಕೆಲಸ ಮಾಡಿದೆ. ಹಾಗೆ ಮುಂದುವರಿ. ನಿನಗೆ ಒಳ್ಳೆ ಭವಿಷ್ಯವಿದೆ. ಕೌಂಪೊಂಡರ್ ಆಗಿ ಕೆಲಸ ಕಲಿತ ಮೇಲೆ ನಾಲ್ಕಾರು ಹಳ್ಳಿ ಸುತ್ತಿ ಪೇಶೆಂಟ್ಸ್ ನೋಡಿ ಬಂದ್ರ ಒಳ್ಳೆ ದುಡ್ದು ಮಾಡಬಹುದು.” ಎಂದೆಲ್ಲಾ ಪ್ರೋತ್ಸಾಹಿಸುವಾಗ ನಾನು ಕೌಂಪೊಂಡರ್ ಆಗಿ ಕಾಸು ಎಣಿಸೋ ಕನಸು ಕಂಡಿದ್ದೇನೆ. ಆದರೆ ಆ ಕನಸು ಒಂದು ತಿಂಗಳು ಮುಗಿಯುವಷ್ಟೊತ್ತಿಗೆ ಮುರುಟಿಬಿತ್ತು. ಏಕೆಂದರೆ ಅಲ್ಲಿ ಕೆಲಸಕ್ಕೆ ಸೇರುವ ಮುನ್ನ ನನ್ನ ಸಂಬಳ ಇಷ್ಟಿಷ್ಟೇ ಅಂತ ನಿಗದಿಯಾಗಿರಲಿಲ್ಲ. ಕರುಣೆ ಆಧಾರದ ಮೇಲೆ ಕೆಲಸ ಕೊಡುವವರನ್ನು ಇಷ್ಟಿಷ್ಟೇ ಕೊಡಿ ಅಂತ ಕರಾರುವಕ್ಕಾಗಿ ಹೇಗೆ ಕೇಳೋದು? ತಿಂಗಳ ಕೊನೆಯಲ್ಲಿ ಆ ಡಾಕ್ಟರು ಕೊಟ್ಟಿದ್ದು ಬರೀ 200 ರೂಪಾಯಿ. ಆ ಸಂಬಳ ನಾನು ದಿನಾಲೂ ಹೋಗಿ ಬರುವ ಬಸ್ ಚಾರ್ಜಿಗೂ ಸಾಕಾಗುತ್ತಿರಲಿಲ್ಲವಾದ್ದರಿಂದ ಆ ಕೆಲಸಕ್ಕೆ ಎಳ್ಳು ನೀರು ಬಿಡಬೇಕಾಯಿತು. ಅಲ್ಲಿಂದ ನನ್ನ ಬದುಕು ಮತ್ತಷ್ಟು ಮೂರಾಬಟ್ಟೆಯಾಗುತ್ತಾ ಹೋಯಿತು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಅರ್ಬುದನ ಡೈರಿ – ಹೊಸ ಪುಸ್ತಕ2 ವಾರಗಳ ಹಿಂದೆ
-
ದಾವಣಗೆರೆಯಲ್ಲಿ ಸಿಟಿ ಬಸ್ ಹಿಡಿದು...3 ತಿಂಗಳುಗಳ ಹಿಂದೆ
-
Hello world!4 ತಿಂಗಳುಗಳ ಹಿಂದೆ
-
ಮಾತು ಮರೆತವರೇ ಜಗತ್ತನ್ನಾಳುತ್ತಾರೆ7 ತಿಂಗಳುಗಳ ಹಿಂದೆ
-
Sawanna @167 ತಿಂಗಳುಗಳ ಹಿಂದೆ
-
-
-
ತರಚೀ ಪುಷ್ಪೋಪಾಖ್ಯಾನ1 ವರ್ಷದ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು6 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?6 ವರ್ಷಗಳ ಹಿಂದೆ
-
ದ್ವಿಪದಿಗಳು6 ವರ್ಷಗಳ ಹಿಂದೆ
-
ಹೊಸ ದಿನ6 ವರ್ಷಗಳ ಹಿಂದೆ
-
The story of telling a story!6 ವರ್ಷಗಳ ಹಿಂದೆ
-
-
-
ಆಸೆ....!!!7 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 27 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!7 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ7 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?8 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!8 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್8 ವರ್ಷಗಳ ಹಿಂದೆ
-
ಮಾಯೆ9 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ9 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!9 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ9 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು9 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!10 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:10 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..11 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ11 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ11 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು11 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!11 ವರ್ಷಗಳ ಹಿಂದೆ
-
-
ಗಾಜಿನ ಲೋಟದಲ್ಲಿ ರಸ್ನಾ12 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ12 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ12 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....13 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ13 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?13 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ13 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು13 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ13 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)14 ವರ್ಷಗಳ ಹಿಂದೆ
-
(ಮಹಿಳಾ)ವಾದ:14 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ14 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…14 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ14 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್15 ವರ್ಷಗಳ ಹಿಂದೆ
-
ಕಫನ್15 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …15 ವರ್ಷಗಳ ಹಿಂದೆ
-
ನನ್ನ ಜಡೆ15 ವರ್ಷಗಳ ಹಿಂದೆ
-
ಕೇಳಿ-೫15 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು15 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು16 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧16 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ16 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ16 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು17 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?17 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !17 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಹುಚ್ಚರು
- 2. Libya Diary: An Attempt to Seek the Inner Truth
- 5. The Story of Libya’s Fall
- ನನ್ನೊಳಗಿನ ಬರಹಗಾರ ರೂಪಗೊಂಡಿದ್ದು (ಕೊನೆಯ ಭಾಗ)
- ಪ್ರೀತಿಗಿಂತ ಬದುಕು ದೊಡ್ದದು ಕಣೇ.....................!
- ಒಂದು ಕಾಲದಲ್ಲಿ....
- 17. The Mauritanian beauties that often spoil our minds…
- 15. The Fleeting Desires of Love and Lust amidst the Sahara's Winter
- 18 Lion of the Deserti
- ಸಹವಾಸ ದೋಷ
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
4 ಕಾಮೆಂಟ್(ಗಳು):
ವಿದ್ಯಾಲಯದಲ್ಲಿ ಕಲಿಯುವದಕ್ಕಿಂತ ಬದುಕಿನಲ್ಲಿ ಕಲಿಯುವದೇ ಹೆಚ್ಚಿನದು ಎನ್ನುವದನ್ನು ನಿಮ್ಮ ಲೇಖನ ಚೆನ್ನಾಗಿ ಎತ್ತಿ ತೋರಿಸುತ್ತದೆ.
Common sir continue please ....
ಸರ್,
ನಿಮಗಿಷ್ಟವಿಲ್ಲದ ಕಾಂಪೌಂಡರ್ ಕೆಲಸ, ಇಷ್ಟಪಡದ ಓದಿನ ವಿಚಾರಗಳು, ಫೇಲ್, ಇತ್ಯಾದಿಗಳನ್ನು ಓದುತ್ತಾ...ಮುಂದೇನು ಅಂತ ಕುತೂಹಲದಿಂದ ಕಾಯುತ್ತಿದ್ದೇನೆ. ಬದುಕು ಎಷ್ಟು ಕುತೂಹಲವಲ್ವಾ ಸರ್..
ಬದುಕನ್ನು ಸ್ವಪ್ರಯತ್ನದಲ್ಲಿ ಕಟ್ಟಿಕೊಳ್ಳುವ ತವಕದ ನಿಮ್ಮ ಸ್ವಾನುಭವ ಲೇಖನ ಕುತೂಹಲಕರವಾಗಿದೆ.ನಿಮಗೆ `ಮಕರ ಸಂಕ್ರಮಣದ ಶುಭಾಶಯಗಳು.' ನನ್ನ ಬ್ಲಾಗ್ ಗೊಮ್ಮೆ ಬನ್ನಿ
ಕಾಮೆಂಟ್ ಪೋಸ್ಟ್ ಮಾಡಿ