ವಿಶ್ವ ಕನ್ನಡ ಸಮ್ಮೇಳನದ ಸ್ಮರಣ ಸಂಚಿಕೆಗಾಗಿ ‘“ವಿದೇಶದಲ್ಲಿ ಕನ್ನಡ”’ ಎನ್ನುವ ವಿಷಯದ ಮೇಲೆ ಡಾ. ಹಂ. ಪ.ನಾಗರಾಜಯ್ಯನವರು ಒಂದು ಲೇಖನವನ್ನು ಬರೆದು ಕಳಿಸಿ ಎಂದು ನನ್ನ ಕೇಳಿದಾಗ ಸಮಯದಭಾವ ಮತ್ತು ನನ್ನ ಒಂದಿಷ್ಟು ಸೋಂಬೇರಿತನದಿಂದಾಗಿ ಲೇಖನ ಕಳಿಸಿಕೊಡಲಾಗಲಿಲ್ಲ. ಈಗ ವಿಶ್ವ ಕನ್ನಡ ಸಮ್ಮೇಳನ ಮುಗಿದು ಅದರ ಸ್ಮರಣ ಸಂಚಿಕೆಯೂ ಬಿಡುಗಡೆಯಾಗಿದ್ದು ಹಳೆಯ ಮಾತು. ಆದರೆ ಅದರ ಸಂಪಾದಕ ಮಂಡಳಿ ಇದೀಗ ಮತ್ತೆ ಆ ಪುಸ್ತಕವನ್ನು ಪುನರ್ ಪರಿಶೀಲಿಸಿ ಪ್ರಕಟಿಸುವದರಿಂದ ನನಗೆ ಮತ್ತೆ ಲೇಖನ ಬರೆದುಕೊಡಲು ಕೇಳಿದ್ದಾರೆ. ಹೀಗೆ ಕೇಳಿದ ಮೇಲೂ ನಾನು ಬರೆಯದೆ ಸುಮ್ಮನೆ ಕುಳಿತರೆ ಅದು ನನ್ನ ಅಹಂಕಾರವನ್ನು ಹಾಗೂ ನಿರ್ಲಕ್ಷ್ಯತನವನ್ನು ತೋರಿಸುವದರಿಂದ ಈ ಸಾರಿ ತಪ್ಪಿಸಿಕೊಳ್ಳಲು ನನ್ನ ಮನಸ್ಸು ಒಪ್ಪಲಿಲ್ಲ. ಅದರ ಪರಿಣಾಮವೇ ಈ ಲೇಖನ.
ಸಂಪಾದಕ ಮಂಡಳಿ ಹೊರನಾಡ ಕನ್ನಡಿಗರಿಗೆ ಮುಖ್ಯವಾಗಿ ಮೂರು ಪ್ರಶ್ನೆಗಳನ್ನು ಕೇಳಿತ್ತು. ಅವು ಯಾವುವೆಂದರೆ-
1. ನೀವು ಕಂಡಂತೆ ವಿದೇಶದಲ್ಲಿ ಕನ್ನಡ ಬೆಳೆದು ಬಂದ ಬಗೆ ಹೇಗೆ?
2. ಒಳನಾಡಿನ ಕನ್ನಡಿಗರಿಗಿಂತ ಹೊರನಾಡ ಕನ್ನಡಿಗರಿಗೆ ಕನ್ನಡ ಭಾಷೆಯ ಮೆಲೆ ಹೆಚ್ಚು ಪ್ರೀತಿ ಹಾಗೂ ಒಲವಿರುತ್ತದಂತೆ, ಹೌದೆ?
3. ಅಲ್ಲಿಯ ಕನ್ನಡ ಸಂಘಗಳಿಂದ ನಡೆಸುವ ಚಟುವಟಿಕೆಗಳು/ಕಾರ್ಯಕ್ರಮಗಳು ಹೇಗಿರುತ್ತವೆ? ಹಾಗೂ ಅಂಥ ಕಾರ್ಯಕ್ರಮಗಳನ್ನು ನಡೆಸುವಾಗ ಸ್ಥಳೀಯ ಸರಕಾರದಿಂದ ಪ್ರೋತ್ಸಾಹವೇನಾದರೂ ಸಿಗುತ್ತದೆಯೇ? ಅಥವಾ ತೊಂದರೆಗಳೇನಾದರೂ ಎದುರಾಗುತ್ತವೆಯೇ?
ಈ ಮೇಲಿನ ಪ್ರಶ್ನೆಗಳನ್ನು ಗಮನದಲ್ಲಿಟ್ಟುಕೊಂಡು ಲೇಖನ ಸಿದ್ಧಪಡಿಸಿ ಎಂದು ಹೇಳಿತ್ತು. ಆದ ಕಾರಣ ಲೇಖನದಲ್ಲಿ ನನಗನಿಸಿದ್ದನ್ನು ನೇರವಾಗಿ ಹೇಳಿದ್ದೇನೆ. ಇದೀಗ ಅದು ಪ್ರಿಂಟಾಗಿ ಹೊರಬರಲಿದೆ ಎಂದು ಅದರ ಜವಾಬ್ದಾರಿಯನ್ನು ಹೊತ್ತುಕೊಂಡ ಜಿ. ಎನ್. ಮೋಹನ್ ಸರ್ ಹೇಳಿದ್ದಾರೆ. ಅದೇ ಲೇಖನವನ್ನು ನನ್ನ ಬ್ಲಾಗಿನಲ್ಲಿ ಹಾಕುತ್ತಿದ್ದೇನೆ.
ವಿದೇಶಿ ಕನ್ನಡಿಗರು ಹಾಗೂ ಅವರ ಕನ್ನಡ ಪ್ರೇಮ ಕುರಿತಂತೆ ಒಂದು ವಿಶೇಷವಾದ ಪ್ರೀತಿ ಹಾಗು ಅಭಿಮಾನದಿಂದ ಮಾತನಾಡುವ ಚಟ ನಮ್ಮಲ್ಲಿ ಮೊದಲಿನಿಂದಲೂ ಜಾರಿಯಲ್ಲಿದೆ. ಏಕೆಂದರೆ ನಮಗೆ ಹತ್ತಿರದಲ್ಲಿರುವವರಿಗಿಂತ ದೂರದಲ್ಲಿರುವವರ ಬಗ್ಗೆಯೇ ಹೆಚ್ಚು ಕುತೂಹಲ ಹಾಗೂ ಆಸಕ್ತಿ. ಹೀಗಾಗಿ ಅವರೇನೇ ಮಾಡಿದರು ಅದು ವಿಶೇಷ ಅನಿಸುತ್ತದೆ ಹಾಗೂ ಸಹಜವಾಗಿ ಬೇರೆಯವರ ಮೆಚ್ಚುಗೆಗೆ ಪಾತ್ರವಾಗುತ್ತದೆ. ನನಗೆ ಒಂದೊಂದು ಸಾರಿ ಈ ರೀತಿಯ ಮೆಚ್ಚುಗೆ ಉತ್ಪ್ರೇಕ್ಷೆ ಅನಿಸಿಬಿಡುತ್ತದೆ. ಏಕೆಂದರೆ ಒಬ್ಬನು ವಿದೇಶದಲ್ಲಿದ್ದು ತನ್ನ ತಾಯ್ನಾಡಿಗೆ ಮರಳಿ ಬಂದು ಕನ್ನಡದಲ್ಲಿ ಮಾತನಾಡಿದರೆ ‘“ಓ! ಪರ್ವಾಗಿಲ್ರಿ ಅವನಿನ್ನೂ ಕನ್ನಡದಲ್ಲಿಯೇ ಮಾತನಾಡುತ್ತಾನೆ”’ ಎಂದು ಉದ್ಗಾರ ತೆಗೆಯುತ್ತಾರೆ. ಉದಾಹರಣೆಗೆ ಮೊನ್ನೆ ವಿಶ್ವ ಕನ್ನಡ ಸಮ್ಮೇಳನದಲ್ಲಿ ಹೊರನಾಡ ಕನ್ನಡತಿ ಐಶ್ಚರ್ಯ್ ರೈ ತಪ್ಪು ತಪ್ಪು ಕನ್ನಡದಲ್ಲಿ ಮಾತನಾಡಿದಾಗಲೂ ಸಹ ಜನ ಚಪ್ಪಾಳೆ ಹೊಡೆದರು. ಆಕೆಯ ಭಾಷಣಕ್ಕೆ ಚಪ್ಪಾಳೆ ಹೊಡೆದಷ್ಟು ಅನಂತಮೂರ್ತಿಯವರ ಭಾಷಣಕ್ಕಾಗಲಿ, ಶಿವರುದ್ರಪ್ಪನವರ ಭಾಷಣಕ್ಕಾಗಲಿ ಹೊಡೆಯಲಿಲ್ಲ. ಏಕೆಂದರೆ ಆಕೆ ಒಬ್ಬ ಸಿನಿಮಾ ತಾರೆ, ವಿಶ್ವ ಸುಂದರಿ ಎನ್ನುವದರ ಜೊತೆಗೆ ಹೊರನಾಡ ಕನ್ನಡತಿ ಎಂಬ ಕಾರಣವೂ ಇದ್ದಿರಬಹುದಲ್ಲವೆ ಆಕೆಗೆ ವಿಶೇಷ ರಿಯಾಯಿತಿ ತೋರಿಸಲು? ಪರ್ವಾಗಿಲ್ಲ ಇಷ್ಟಾದರು ಕನ್ನಡದಲ್ಲಿ ಮಾತನಾಡಿದಳಲ್ಲ ಎಂದು ಜನ ಅಷ್ಟಕ್ಕೆ ಸಮಾಧಾನಪಟ್ಟುಕೊಂಡರು. ಇನ್ನು ಅಲ್ಲಿಗೆ ಬಂದ ಕೆಲವು ವಿದೇಶಿ ಕನ್ನಡಿಗರು ಸಭೆಯನ್ನು ಉದ್ದೇಶಿಸಿ ಮಾತನಡುವಾಗ ಮಧ್ಯ ಮಧ್ಯ ಒಂದೆರೆಡು ವಾಕ್ಯಗಳನ್ನು ಇಂಗ್ಲೀಷಿನಲ್ಲಿಯೇ ಉದ್ದರಿಸಿದರು. ಆದರೂ ಅವರು ಅಡಿದ್ದೆಲ್ಲವೂ ಚೆಂದವಾಗಿಯೇ ಕಂಡಿತು. ಅದನ್ಯಾರು ಪ್ರತಿಭಟಿಸಲು ಹೋಗಲಿಲ್ಲ. ಏಕೆಂದರೆ ಅವರೆಲ್ಲಾ ಅಷ್ಟಾದರೂ ಕನ್ನಡಕ್ಕೆ ಕಿಂಚಿತ್ತು ಸೇವೆ ಸಲ್ಲಿಸುತ್ತಿದ್ದಾರಲ್ಲ ಎಂದು ಜನ ಭಾವಿಸಿದಂತಿತ್ತು. ಇನ್ನು ವಿದೇಶದಲ್ಲಿದ್ದವನು ಬರಹಗಾರನಾಗಿದ್ದರಂತೂ ಮುಗಿದೇಹೋಯಿತು. ಅವನದು ಕಳಪೆ ಸಾಹಿತ್ಯವಾಗಿದ್ದರೂ ಸರಿಯೇ. ದೂರದ ದೇಶದಲ್ಲಿದ್ದರೂ ಅವರಿಗೆ ಕನ್ನಡ ಭಾಷೆಯ ಮೇಲೆ ವಿಶೇಷ ಅಕ್ಕರೆ ಹಾಗೂ ಒಲವು ಎಂಬ ಕನಿಕರ ಭಾವಕ್ಕೊಳಗಾಗುತ್ತದೆ. ಮಾತ್ರವಲ್ಲ ಅವರು ಬರೆದಿದ್ದು ‘ಕನ್ನಡದ ಕೈಂಕರ್ಯ’ ಎಂಬ ಅನುಕಂಪದ ಲೇಬಲ್ ನಡಿ ವಿಶೇಷ ಸ್ಥಾನಮಾನ ಗಳಿಸಿಬಿಡುತ್ತದೆ. ನನ್ನ ಪ್ರಕಾರ ಇದೇ ರೀತಿಯ ಬೆಳವಣಿಗೆಗಳು ಮುಂದುವರೆದರೆ ಇಂಥ ಕಳಪೆ ಸಾಹಿತ್ಯವನ್ನೇ ಮುಂದೆ ಎಂದಾದರೂ ಒಂದು ದಿನ ಶ್ರೇಷ್ಟ ಸಾಹಿತ್ಯ ಎಂದು ಪರಿಗಣಿಸುವ ದಿನಗಳು ದೂರವಿಲ್ಲ ಎಂದನಿಸುತ್ತದೆ.
ನಾನು ಈ ಮೊದಲೇ ಹೇಳಿದಂತೆ ಹೊರನಾಡ ಕನ್ನಡಿಗರ ಬಗ್ಗೆ ‘ವಿದೇಶದಲ್ಲಿದ್ದರೂ ಕನ್ನಡ ಭಾಷೆಯ ಮೇಲೆ ಅವರಿಗೆ ಅಪಾರ ಪ್ರೀತಿ, ಒಲವು ಹಾಗೂ ಕನ್ನಡ ಭಾಷೆಯ ಮೇಲೆ ಎಲ್ಲರಿಗಿಂತ ತುಸು ಹೆಚ್ಚೇ ಅಭಿಮಾನವಿರುತ್ತದೆ’ ಎಂದು ಜನ ವೈಭವಿಕರಿಸಿ ಹೇಳುವದು ವಾಡಿಕೆ. ಆದರೆ ನನ್ನ ಪ್ರಕಾರ ಅದು ಶುದ್ಧ ತಪ್ಪು. ಅದೇನಿದ್ದರೂ ಬರೀ ಹಪಹಪಿಕೆ ಅಷ್ಟೇ. ಒಬ್ಬ ಕನ್ನಡಿಗ ಉದ್ಯೋಗ ನಿಮಿತ್ತ ಹೊರನಾಡಿಗೆ ಹೋದಾಗ ಕನ್ನಡಿಗರಿಲ್ಲದ ನೆಲದಲ್ಲಿ ಆತ ತನ್ನ ಮಾತೃಭಾಷೆಯಾದ ಕನ್ನಡವನ್ನು ಕುರಿತು ಯೋಚಿಸುವದು ಸರ್ವೇಸಾಮಾನ್ಯ. ಏಕೆಂದರೆ ಅಲ್ಲಿ ಕನ್ನಡದಲ್ಲಿ ಮಾತನಾಡುವವರು ಯಾರಾದರೂ ಸಿಗುತ್ತಾರೆಯೇ ಎಂದು ಸದಾ ಹಂಬಲಿಸುತ್ತಿರುತ್ತಾನೆ, ಹಪಹಪಿಸುತ್ತಿರುತ್ತಾನೆ. ಈ ಹಪಹಪಿಕೆಯನ್ನೇ ನಾವು ಅಭಿಮಾನವೆಂದು ತಪ್ಪಾಗಿ ಗ್ರಹಿಸುವದು ಎಷ್ಟರಮಟ್ಟಿಗೆ ಸರಿ?
ನಾವು ನಮ್ಮ ಕನ್ನಡ ನೆಲದಿಂದ ಉದ್ಯೋಗ ಅರಸಿ ಹೊರನಾಡಿಗೆ ಹೋದಾಗ ಸಹಜವಾಗಿ ನಮ್ಮ ನಾಡಿನ ಬಗ್ಗೆ, ಭಾಷೆಯ ಬಗ್ಗೆ ಒಂದು ಪ್ರೀತಿ ಇದ್ದೇ ಇರುತ್ತದೆ. ಈ ಪ್ರೀತಿಯೇ ನಮ್ಮನ್ನು ನಮ್ಮ ಭಾಷೆಯ ಬಗ್ಗೆ ಸದಾ ಯೋಚಿಸುವಂತೆ, ಚಿಂತಿಸುವಂತೆ ಮಾಡುತ್ತದೆ. ಜೊತೆಗೆ ಕನ್ನಡ ಸಂಘಗಳನ್ನು ಹುಟ್ಟುಹಾಕುವಂತೆ ಪ್ರೇರಣೆ ನೀಡುತ್ತದೆ. ನಾವು ಇಂಥ ಸಂಘಗಳನ್ನು ಹುಟ್ಟುಹಾಕುವ ಮೂಲ ಉದ್ದೇಶ ಅಲ್ಲಿರುವ ಕನ್ನಡಿಗರೆಲ್ಲರನ್ನೂ ಒಂದು ಕಡೆ ಕಲೆ ಹಾಕುವದಕ್ಕೆ. ಬರೀ ಸಂಘವೊಂದಿದ್ದರೆ ಎಲ್ಲರೂ ಒಟ್ಟಾಗಿ ಸೇರಲು ಹೇಗೆ ಸಾಧ್ಯ? ಅಲ್ಲಿ ಏನಾದರೊಂದು ಕಾರ್ಯಕ್ರಮ ನಡೆದರೆ ತಾನೆ ಸಾಧ್ಯವಾಗೋದು? ಹೀಗಾಗಿ ಅಲ್ಲಿ ಒಂದಿಷ್ಟು ಕಾರ್ಯಕ್ರಮಗಳು ನಡೆಯುತ್ತವೆ. ಇಂಥ ಕಾರ್ಯಕ್ರಮಗಳು ಕನ್ನಡದಲ್ಲಿಯೇ ನಡೆಯುತ್ತಾವಾದರೂ ಅವು ಕನ್ನಡ ಭಾಷೆಯ ಬೆಳವಣಿಗೆಗೆ ಒಂಚೂರು ಸಹಾಯ ಮಾಡುವದಿಲ್ಲ ಎನ್ನುವದು ನನ್ನ ಅಭಿಪ್ರಾಯ. ಏಕೆಂದರೆ ಕನ್ನಡ ಭಾಷೆಯ ಅಭಿವೃದ್ಧಿಗೆ ಪೂರಕವಾಗುವಂಥ ಯಾವೊಂದೂ ಗಂಭೀರ ಚಿಂತನೆಯೂ ಅಲ್ಲಿ ನಡೆಯುವದಿಲ್ಲ. ಅಕಸ್ಮಾತ್ ಆ ಸಂಘಗಳು ಸಾಹಿತ್ಯಿಕ ಪತ್ರಿಕೆಗಳನ್ನೇನಾದರೂ ಹೊರತರುತ್ತಿದ್ದರೆ ಅವು ಗುಣಮಟ್ಟದಲ್ಲಿ ಅತ್ಯಂತ ಕೆಳದರ್ಜೆಯಿಂದ ಕೂಡಿದ್ದು ಅವುಗಳಲ್ಲಿ ಕೇವಲ ಬೆರಳಣಿಕೆಯಷ್ಟು ಲೇಖನಗಳು ಮಾತ್ರ ಚನ್ನಾಗಿರುತ್ತವೆ. ಇನ್ನುಳಿದಂತೆ ಇತರೆ ಪುಟಗಳ ತುಂಬ ಬರೀ ‘ಪುಷ್ಫ ಕವಿ’, ‘ಪೋರಿ ಕವಿ’, ‘ಮತ್ಸ್ಯ ಕವಿ’ ‘ಪತಂಗ ಕವಿ’ಗಳ ಕವನಗಳೇ ರಾರಾಜಿಸುತ್ತಿರುತ್ತವೆ. ಈ ನಿಟ್ಟಿನಲ್ಲಿ ವಿದೇಶದಲ್ಲಿ ನಾವು ಹುಟ್ಟುಹಾಕಿದ ಕನ್ನಡದ ವೇದಿಕೆಗಳಿಂದ ನಿಜಕ್ಕೂ ಕನ್ನಡ ಭಾಷೆಯ ಬೆಳವಣಿಗೆಯಾಗುತ್ತದೆ ಎನ್ನುವದು ಬರಿ ಭ್ರಮೆ ಅಷ್ಟೇ.
ಇನ್ನು ಈ ತರದ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವಾಗ ನಮ್ಮಲ್ಲಿ ಅಲ್ಲಿಯ ಸರಕಾರದಿಂದ ಯಾವುದೇ ಪ್ರೋತ್ಸಾಹ ಸಿಗುವದಿಲ್ಲ. ಹಾಗೆ ನಿರೀಕ್ಷಿಸುವದು ಕೂಡ ತಪ್ಪಾಗುತ್ತದೆ. ಆದರೆ ಇದುವರೆಗೂ ಲಿಬಿಯಾದಲ್ಲಿ ನಮ್ಮ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗಲಿ, ಆತಂಕವಾಗಲಿ ಎದುರಾಗಿಲ್ಲ. ಹಾಗೆ ನೋಡಿದರೆ ಕರ್ನಾಟಕದಲ್ಲಿಯೇ ಇಂಥ ಪ್ರಸಂಗಗಳು ಎದುರಾಗೋದು ಹೆಚ್ಚು. ಉದಾಹರಣೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಅಂದರೆ ಹೆಚ್ಚಾಗಿ ಗಡಿ ಭಾಗಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡರೂ ನೆರೆರಾಜ್ಯದವರಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಈಗ ವಿಶ್ವ ಕನ್ನಡ ಸಮ್ಮೇಳನವನ್ನೇ ನೋಡಿ. ಅದನ್ನು ಬೆಳಗಾವಿಯಲ್ಲಿ ನಡೆಸಕೂಡದೆಂದು ಮರಾಠಿಗರು ಎಷ್ಟೊಂದು ಬೆದರಿಕೆಯನ್ನು ಒಡ್ಡಿದ್ದರು. ಸಮ್ಮೇಳನ ಮುಗಿಯುವವರೆಗೂ ಅವರು ಏನಾದರೂ ತೊಂದರೆ ಮಾಡಿಯಾರು ಎಂಬ ಭಯ, ಆತಂಕವಿದ್ದೇ ಇತ್ತು. ಈ ತರದ ತೊಂದರೆಗಳ್ಯಾವವು ಅಲ್ಲಿ ಜರಗುವದಿಲ್ಲ ಎನ್ನುವದು ಮಾತ್ರ ನೆಮ್ಮದಿಯ ವಿಷಯ.
- ಉದಯ್ ಇಟಗಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಅರ್ಬುದನ ಡೈರಿ – ಹೊಸ ಪುಸ್ತಕ3 ವಾರಗಳ ಹಿಂದೆ
-
ದಾವಣಗೆರೆಯಲ್ಲಿ ಸಿಟಿ ಬಸ್ ಹಿಡಿದು...3 ತಿಂಗಳುಗಳ ಹಿಂದೆ
-
Hello world!4 ತಿಂಗಳುಗಳ ಹಿಂದೆ
-
ಮಾತು ಮರೆತವರೇ ಜಗತ್ತನ್ನಾಳುತ್ತಾರೆ7 ತಿಂಗಳುಗಳ ಹಿಂದೆ
-
Sawanna @167 ತಿಂಗಳುಗಳ ಹಿಂದೆ
-
-
-
ತರಚೀ ಪುಷ್ಪೋಪಾಖ್ಯಾನ1 ವರ್ಷದ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು6 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?6 ವರ್ಷಗಳ ಹಿಂದೆ
-
ದ್ವಿಪದಿಗಳು6 ವರ್ಷಗಳ ಹಿಂದೆ
-
ಹೊಸ ದಿನ6 ವರ್ಷಗಳ ಹಿಂದೆ
-
The story of telling a story!6 ವರ್ಷಗಳ ಹಿಂದೆ
-
-
-
ಆಸೆ....!!!7 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 27 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!7 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ7 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?8 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!8 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್8 ವರ್ಷಗಳ ಹಿಂದೆ
-
ಮಾಯೆ9 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ9 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!9 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ9 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು9 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!10 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:10 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..11 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ11 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ11 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು11 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!11 ವರ್ಷಗಳ ಹಿಂದೆ
-
-
ಗಾಜಿನ ಲೋಟದಲ್ಲಿ ರಸ್ನಾ12 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ12 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ12 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....13 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ13 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?13 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ13 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು13 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ13 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)14 ವರ್ಷಗಳ ಹಿಂದೆ
-
(ಮಹಿಳಾ)ವಾದ:14 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ14 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…14 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ14 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್15 ವರ್ಷಗಳ ಹಿಂದೆ
-
ಕಫನ್15 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …15 ವರ್ಷಗಳ ಹಿಂದೆ
-
ನನ್ನ ಜಡೆ15 ವರ್ಷಗಳ ಹಿಂದೆ
-
ಕೇಳಿ-೫15 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು15 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು16 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧16 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ16 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ16 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು17 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?17 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !17 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಹುಚ್ಚರು
- 2. Libya Diary: An Attempt to Seek the Inner Truth
- 5. The Story of Libya’s Fall
- ಪ್ರೀತಿಗಿಂತ ಬದುಕು ದೊಡ್ದದು ಕಣೇ.....................!
- 17. The Mauritanian beauties that often spoil our minds…
- 15. The Fleeting Desires of Love and Lust amidst the Sahara's Winter
- ನನ್ನೊಳಗಿನ ಬರಹಗಾರ ರೂಪಗೊಂಡಿದ್ದು (ಕೊನೆಯ ಭಾಗ)
- ಒಂದು ಕಾಲದಲ್ಲಿ....
- 18 Lion of the Deserti
- ಪುಸ್ತಕ ಪ್ರಕಟಣೆಯ ಕನಸು ನನಸಾದೀತೆ?
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.