ನಿಮಗೆ ಆಶ್ಚರ್ಯವಾಗಬಹುದು-ನನಗೆ ಹಸಿವೆಯೇ ಎನಿಸುತ್ತಿರಲಿಲ್ಲ. ಆದರೂ ಆಗೊಮ್ಮೆ ಈಗೊಮ್ಮೆ ಪಾರ್ಸಲ್ಲಿನಲ್ಲಿದ್ದ ಸಿಹಿತಿಂಡಿಯನ್ನು ತಿಂದು ನನ್ನ ಅಲ್ಪಸ್ವಲ್ಪ ಹಸಿವೆಯನ್ನು ನೀಗಿಸಿಕೊಳ್ಳುತ್ತಿದ್ದೆ. ಮರದಲ್ಲಿ ಸಿಹಿಯಾದ ಹಣ್ಣುಗಳು ಕಾಣಿಸಿದವು. ಆದರೆ ಅವನ್ನು ತಿನ್ನಲು ಹೋಗಲಿಲ್ಲ. ಏಕೆಂದರೆ ಅವುಗಳಲ್ಲಿ ಬಹಳಷ್ಟು ಹಣ್ಣುಗಳು ನೋಡಲು ಚನ್ನಾಗಿದ್ದರೂ ಕೆಲವೊಮ್ಮೆ ವಿಷಪೂರಿತವಾಗಿರುತ್ತವೆಂದು ನನಗೆ ಗೊತ್ತಿತ್ತು. ನಾನು ಮುಸ್ಸಂಜೆಯವರೆಗೂ ನಡೆಯುತ್ತಲೇ ಇದ್ದೆ. ಕೊನೆಗೆ ನದಿ ದಂಡೆ ಮೇಲೆ ಒಂದು ನುಣುಪಾದ ಜಾಗ ಸಿಕ್ಕಿತು. ಅಂದು ಆ ರಾತ್ರಿಯನ್ನು ಅಲ್ಲಿಯೇ ಕಳೆಯಲು ನಿರ್ಧರಿಸಿದೆ.
ಮರುದಿವಸ ಬೆಳಿಗ್ಗೆ ಎದ್ದಾಗ ಸೂರ್ಯ ಅದಾಗಲೇ ನೆತ್ತಿಯ ಮೇಲೆ ಬಂದಿದ್ದ. ದಿನನಿತ್ಯದ ವಾಡಿಕೆಯಂತೆ ಕೋಲಿನಿಂದ ಹುಲ್ಲನ್ನು ಸರಿಸುತ್ತಾ, ನೆಲವನ್ನು ತಡಕಾಡುತ್ತಾ, ಜೇಡರ ಹುಳುಗಳೇನಾದರೂ ಇವೆಯೋ ಎಂಬುದನ್ನು ಪರೀಕ್ಷಿಸುತ್ತಾ ಎಚ್ಚರಿಕೆಯಿಂದ ನಡೆಯುತ್ತಿದ್ದೆ. ಒಮ್ಮೊಮ್ಮೆ ನದಿ ದಂಡೆಯ ಮೇಲಿನ ರಸ್ತೆ ದುಸ್ತರವಾದಾಗ ಈಜಿಕೊಂಡು ಹೋಗುತ್ತಿದ್ದೆ. ಹೀಗೆ ನಡೆದುಕೊಂಡು ಹೋಗುತ್ತಿರುವಾಗ ನನ್ನ ಬ್ಯಾಗಿನಲ್ಲಿದ್ದ ಸಿಹಿತಿಂಡಿಗಳು ತೂತಿನ ಮೂಲಕ ಬಿದ್ದುಹೋಗಿದ್ದವು. ನನಗೆ ಹಸಿವಿಯೇ ಅನಿಸದಿದ್ದರಿಂದ ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ.
ನಡೆಯುತ್ತಾ ಹೋದಂತೆ ಸ್ವಲ್ಪ ದೂರದರಲ್ಲಿಯೇ ನನಗೆ ರಣಹದ್ದುಗಳು ಕಂಡವು. ಬಹುಶಃ, ಅಲ್ಲೆಲ್ಲೋ ಹೆಣಗಳಿರಬೇಕು. ಅವು ವಿಮಾನ ಅಪಘಾತದಲ್ಲಿ ಮಡಿದ ವ್ಯಕ್ತಿಗಳ ಮಾಂಸ ತಿನ್ನಲು ಅಲ್ಲಿ ಸೇರಿರಬೇಕು ಎಂದು ನನಗೆ ಕೂಡಲೇ ಗೊತ್ತಾಯಿತು. ಎಲ್ಲಿ ಹೆಣಗಳಿರುತ್ತವೋ ಅಲ್ಲಿ ಸಾಮಾನ್ಯವಾಗಿ ಹದ್ದುಗಳಿರುತ್ತವೆ.
ನಾನಿನ್ನೂ ನಮ್ಮ ವಿಮಾನದ ಭಗ್ನಾವಶೇಷಗಳು ಬಿದ್ದ ಜಾಗದಲ್ಲಿಯೇ ಇದ್ದೆ. ನಾನು ನಡೆದು ಹೋಗುತ್ತಿದ್ದಂತೆ ವಿಮಾನದ ಮೈಕಟ್ಟಿನ ಒಂದು ಭಾಗ ಅಲ್ಲಿ ಬಿದ್ದಿರುವದು ಕಾಣಿಸಿತು. ವಿಮಾನದ ಸಂಖ್ಯೆ ಇನ್ನೂ ಹಾಗೆ ಕಾಣುತ್ತಿತ್ತು. ಸ್ವಲ್ಪ ದೂರದರಲ್ಲಿಯೇ ಮುರಿದು ಬಿದ್ದ ವಿಮಾನದ ಇನ್ನೊಂದು ಭಾಗ ಕಾಣಿಸಿತು. ಅದು ಕ್ಯಾಬಿನ್ನಿನಂತಿದ್ದು ಅದರ ವೈರ್ ಗಳು ತಳಕುಹಾಕಿಕೊಂಡಿದ್ದವು.
ಅಲ್ಲಿ ಪೆಟ್ರೋಲ್ ವಾಸನೆ ಇನ್ನೂ ಹಾಗೆ ಇತ್ತು. ಆದರೆ ಬದುಕುಳಿದವರ ಬಗ್ಗೆ ಯಾವಂದೂ ಕುರುಹುಗಳು ಕಾಣಿಸಲಿಲ್ಲ. ಆ ಅವಶೇಷದ ಬಳಿ ನಾನು ಬಹಳ ಹೊತ್ತು ನಿಲ್ಲಲಿಲ್ಲ. ಏಕೆಂದರೆ ನಾನು ಮುಂದೆ ಸಾಗಲೇಬೇಕಿತ್ತು. ಆದರೂ ನಾನು ನಡೆದು ಹೋಗಬೇಕಾದ ದಾರಿ ನಿಧಾನವಾಗಿ ಸಾಗುತ್ತಿದ್ದರಿಂದ ನನ್ನ ಪಯಣ ಅಷ್ಟಾಗಿ ಪ್ರಗತಿ ಕಂಡಿರಲಿಲ್ಲ.
ಎರಡನೆಯ ದಿನವಾಗಲಿ, ಮೂರನೆಯ ದಿನವಾಗಲಿ ನನ್ನ ಗಾಯಗಳು ನಂಗೆ ಒಂಚೂರು ನೋವು ಕೊಡಲಿಲ್ಲ. ಬದಲಾಗಿ ಅತಿಯಾದ ಬಿಸಿಲಿನಿಂದ ನನ್ನ ಬೆನ್ನಲ್ಲಿ ಅಸಾಧ್ಯ ಉರಿಯೂತವುಂಟಾಯಿತು. ಏಕೆಂದರೆ ನನ್ನ ಡ್ರೆಸ್ಸಿನ ಹಿಂಭಾಗದಲ್ಲಿ ಕಟ್ಟಿಕೊಳ್ಳುವ ಬೆಲ್ಟಿನ ಗುಂಡಿ ಕಿತ್ತುಹೋಗಿತ್ತು ಹಾಗೂ ನನ್ನ ಬೆನ್ನು ಬಿಸಿಲಿಗೆ ತೆರೆದುಕೊಂಡಿತ್ತು. ಮರಗಳ ಸಂಧಿಯಿಂದ ತೂರಿ ಬರುವ ಸೂರ್ಯನ ಕಿರಣಗಳು ನನ್ನ ಬೆನ್ನನ್ನು ಸುಟ್ಟುಹಾಕಿದ್ದವು. ಪೆರುವಿನ ಕಾಡುಗಳಲ್ಲಿ ಎಷ್ಟು ಕೆಟ್ಟ ಮಳೆ ಇರುತ್ತದ್ ಅಷ್ಟೇ ಕೆಟ್ಟ ಬಿಸಿಲು ಕೂಡ ಇರುತ್ತದೆ. ಹಿತಮಿತವಾದ ಹವಾಮಾನ ಜೀವನಕ್ಕೆ ಒಗ್ಗಿಕೊಂಡ ಯೂರೋಪಿನ ಜನ ಇವೆರೆಡೂ ವೈಪರಿತ್ಯಗಳಿಗೆ ಹೊಂದಿಕೊಳ್ಳಲಾರರು.
ಎರಡನೆಯ ರಾತ್ರಿ ಸಾಕಷ್ಟು ವಿಶ್ರಾಂತಿ ತೆಗೆದುಕೊಂಡೆ. ಮಾರನೆಯ ದಿನ ಮತ್ತೆ ನನ್ನ ಪ್ರಯಾಣವನ್ನು ಮುಂದುವರೆಸಿದೆ. ಬೆನ್ನ ಮೇಲೆ ಅಸಾಧ್ಯ ಉರಿಯೂತವಿದ್ದಾಗ್ಯೂ ನಾನು ಸಾಕಷ್ಟು ದೂರವನ್ನು ನಡೆದೆ. ನಾನು ನೀರು ಮತ್ತು ಸಿಹಿತಿಂಡಿಗಳನ್ನು ಬಿಟ್ಟು ಬೇರೇನೂ ತಿನ್ನುತ್ತಿರಲಿಲ್ಲ. ಆದರೂ ನನ್ನಲ್ಲಿ ಶಕ್ತಿ ಇನ್ನೂ ಉಳಿದಿದೆ ಎಂದನಿಸುತ್ತಿತ್ತು. ಮೇಲಿಂದ ಮೇಲೆ ನನಗೆ ಸೊಳ್ಳೆಗಳು, ನೊಣಗಳು ಕಚ್ಚಿ ಹಿಂಸೆಯಿಡುತ್ತಿದ್ದವು. ಅವುಗಳನ್ನು ದೂರವಿಡಲು ಸಾಧ್ಯವಿರಲಿಲ್ಲ. ಅವನ್ನು ಲೆಕ್ಕಿಸದೆ ನಡೆಯಬೇಕಿತ್ತು. ಪ್ರತಿಸಾರಿ ಸೊಳ್ಳೆಗಳು ಕಚ್ಚಿದಾಗ ಅವು ನನ್ನ ಚರ್ಮದ ಕೆಳಗೆ ಮೊಟ್ಟೆಗಳನ್ನಿಡುತ್ತಿದ್ದವು ಹಾಗೂ ತದನಂತರದಲ್ಲಿ ಅವು ಮರಿಗಳಾಗಿ ಹೊರಬರುತ್ತಿದ್ದವು. ಇದನ್ನು ನಾನು ಗಮನಿಸಲೇ ಇಲ್ಲ.
ಮುಂದೆ ಸ್ವಲ್ಪ ಹೊತ್ತಿನಲ್ಲಿಯೇ ವಿಮಾನಗಳ ಹಾರಾಟದ ಸದ್ದು ಕೇಳಿಸಿತು. ನಾನು ಖುಶಿಯಿಂದ ವಿಮಾನದ ಸದ್ದು ಬಂದತ್ತ ಕೂಗಿದೆ. ಮತ್ತೆ ಮತ್ತೆ ಕೂಗಿದೆ ಹಾಗೆ ಜೋರಾಗಿ ಕೂಗುತ್ತಾ ಹೋದೆ. ನಂಗೆ ಗೊತ್ತಿತ್ತು ನಾನು ಕೂಗುವದು ಅವರಿಗೆ ಕೇಳಿಸುವದಿಲ್ಲ-ಅದೊಂದು ವ್ಯರ್ಥ ಪ್ರಯತ್ನವೆಂದು. ಆದರೂ ಬಿಡದೆ ಒಂದೇ ಸಮನೆ “ಹಲೋ, ಹೆಲ್ಪ್....ಹೆಲ್ಪ್” ಎಂದು ಕೂಗುತ್ತಾ ಹೋದೆ. ಬಾರಿ ಬಾರಿ ಕೂಗಿದೆ “ಹಲೋ, ಹೆಲ್ಪ್” ಎಂದು. ಊಹೂಂ, ಪ್ರಯೋಜನವಾಗಲಿಲ್ಲ.
ವಿಮಾನಗಳೇನೋ ನನಗೆ ಹತ್ತಿರವಾಗಿಯೇ ಇದ್ದವು. ಆದರೆ ವಿಮಾನ ಚಾಲಕರು ಮರದ ಕೆಳಗಿದ್ದ ನನ್ನನ್ನು ಹೇಗೆ ನೋಡಿಯಾರು? ಅಥವಾ ನನ್ನ ದನಿಯಾದರೂ ಅವರಿಗೆ ಹೇಗೆ ಕೇಳಿಸೀತು? ನಾನಾದರೂ ಆ ಮರಗಳ ಸಂಧಿಯಿಂದ ಅವರನ್ನು ಹೇಗೆ ನೋಡೇನು? ಯಾವುದೊಂದೂ ಸಾಧ್ಯವಿರಲಿಲ್ಲ! ಆದರೂ ಅವರ ಗಮನವನ್ನು ನನ್ನತ್ತ ಸೆಳೆಯಲು ಹರಸಾಹಸ ಮಾಡುತ್ತಿದ್ದೆ.
ವಿಮಾನದ ಸದ್ದು ಕ್ರಮೇಣ ಸತ್ತುಹೋಯಿತು. ನಾನು ಪುನಃ ಒಂಟಿಯಾದೆ. ಆದರೆ ದೃತಿಗೆಡಲಿಲ್ಲ. ಸುಮ್ಮನೆ ನಡೆಯುತ್ತಾ ಹೋದೆ. ನಂಗೆ ಹಸಿವೆ ಎನಿಸುತ್ತಿರಲಿಲ್ಲ. ಆಗಾಗ ಮಾತ್ರ ನದಿಯ ಶುಭ್ರ ನೀರನ್ನು ಕುಡಿದು ಮುಂದೆ ಸಾಗುತ್ತಿದ್ದೆ. ಕೈಯಲ್ಲಿ ಭರವಸೆ ಮಾತ್ರ ಇನ್ನೂ ಹಾಗೆಯೇ ಉಳಿದಿತ್ತು.
ನನ್ನ ಬಳಿಯಿದ್ದ ಸಿಹಿತಿಂಡಿಗಳೆಲ್ಲಾ ಇದೀಗ ಖಾಲಿಯಾಗಿದ್ದವು. ತಿನ್ನಲೂ ಏನೂ ಇರಲಿಲ್ಲ. ಆದರೂ ಯೋಚಿಸಲಿಲ್ಲ. ನಾನು ನದಿ ದಂಡೆಯ ಮೇಲೆ ಪ್ರಯಾಸದಿಂದ ಸಾಗುತ್ತಿದ್ದೆ. ಆಗೆಲ್ಲಾ ಮೊಸಳೆಗಳು ನನ್ನತ್ತ ಈಜಿಕೊಂಡು ಬರುತ್ತಿದ್ದವು. ನನಗೆ ತಕ್ಷಣ ಅಲ್ಲಿ ವಿಷಕಾರಿ ಮೀನುಗಳಿರುವದು ನೆನಪಿಗೆ ಬಂತು. ಅವು ಸಾಮಾನ್ಯವಾಗಿ ನದಿ ದಂಡೆ ಮೇಲೆಯೇ ಮಲಗಿರುತ್ತಿದ್ದವು. ನಾನು ಅಕಸ್ಮಾತಾಗಿ ಈ ಮೀನಿನ ಮೇಲೆ ಕಾಲಿಟ್ಟರೆ ನನ್ನ ಕಥೆ ಮುಗಿದಂತೆಯೇ ಸರಿ ಎಂದುಕೊಂಡು ಈಗ ಮತ್ತಷ್ಟು ಹುಶಾರಾಗಿ ನಡೆಯುತ್ತಾ ಹೋದೆ.
ಒಂಬತ್ತನೆಯ ದಿನ ನಡೆಯುತ್ತಾ ಹೋದಂತೆ ಅನತಿ ದೂರದಲ್ಲಿ ಒಂದು ದೋಣಿ ಇರುವದು ಕಾಣಿಸಿತು. ನಾನು ಮೊದಲು ಅದಾಗಲೇ ಯಾರೋ ಬಳಸಿ ಬೀಸಾಡಿದ ಮುರುಕಲು ದೋಣಿಯಾಗಿರಬಹುದೆಂದುಕೊಂಡೆ. ಆದರೆ ಹತ್ತಿರ ಹೋಗಿ ನೋಡಿದ ಮೇಲೆ ಗೊತ್ತಾಯಿತು ಅದೊಂದು ಗಟ್ಟಿ ಮರದಿಂದ ಹೊಸದಾಗಿ ಮಾಡಿದ ದೋಣಿಯೆಂದು.
ಮೂಲ ಇಂಗ್ಲೀಷ್: ಜ್ಯೂಲಿಯನ್ ಕೆಫ್ಕೆ
ಕನ್ನಡಕ್ಕೆ: ಉದಯ್ ಇಟಗಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಅರ್ಬುದನ ಡೈರಿ – ಹೊಸ ಪುಸ್ತಕ2 ವಾರಗಳ ಹಿಂದೆ
-
ದಾವಣಗೆರೆಯಲ್ಲಿ ಸಿಟಿ ಬಸ್ ಹಿಡಿದು...3 ತಿಂಗಳುಗಳ ಹಿಂದೆ
-
Hello world!4 ತಿಂಗಳುಗಳ ಹಿಂದೆ
-
ಮಾತು ಮರೆತವರೇ ಜಗತ್ತನ್ನಾಳುತ್ತಾರೆ7 ತಿಂಗಳುಗಳ ಹಿಂದೆ
-
Sawanna @167 ತಿಂಗಳುಗಳ ಹಿಂದೆ
-
-
-
ತರಚೀ ಪುಷ್ಪೋಪಾಖ್ಯಾನ1 ವರ್ಷದ ಹಿಂದೆ
-
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು6 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?6 ವರ್ಷಗಳ ಹಿಂದೆ
-
ದ್ವಿಪದಿಗಳು6 ವರ್ಷಗಳ ಹಿಂದೆ
-
ಹೊಸ ದಿನ6 ವರ್ಷಗಳ ಹಿಂದೆ
-
The story of telling a story!6 ವರ್ಷಗಳ ಹಿಂದೆ
-
-
-
ಆಸೆ....!!!7 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 27 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!7 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ7 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?8 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!8 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್8 ವರ್ಷಗಳ ಹಿಂದೆ
-
ಮಾಯೆ9 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ9 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!9 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ9 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು9 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!10 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:10 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..11 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ11 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ11 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು11 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!11 ವರ್ಷಗಳ ಹಿಂದೆ
-
-
ಗಾಜಿನ ಲೋಟದಲ್ಲಿ ರಸ್ನಾ12 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ12 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ12 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....13 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ13 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?13 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ13 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು13 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ13 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)14 ವರ್ಷಗಳ ಹಿಂದೆ
-
(ಮಹಿಳಾ)ವಾದ:14 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ14 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…14 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ14 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್15 ವರ್ಷಗಳ ಹಿಂದೆ
-
ಕಫನ್15 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …15 ವರ್ಷಗಳ ಹಿಂದೆ
-
ನನ್ನ ಜಡೆ15 ವರ್ಷಗಳ ಹಿಂದೆ
-
ಕೇಳಿ-೫15 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು15 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು16 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧16 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ16 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ16 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು17 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?17 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !17 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ಹುಚ್ಚರು
- 2. Libya Diary: An Attempt to Seek the Inner Truth
- 5. The Story of Libya’s Fall
- ಪ್ರೀತಿಗಿಂತ ಬದುಕು ದೊಡ್ದದು ಕಣೇ.....................!
- 17. The Mauritanian beauties that often spoil our minds…
- 15. The Fleeting Desires of Love and Lust amidst the Sahara's Winter
- ನನ್ನೊಳಗಿನ ಬರಹಗಾರ ರೂಪಗೊಂಡಿದ್ದು (ಕೊನೆಯ ಭಾಗ)
- ಒಂದು ಕಾಲದಲ್ಲಿ....
- 18 Lion of the Deserti
- ಪುಸ್ತಕ ಪ್ರಕಟಣೆಯ ಕನಸು ನನಸಾದೀತೆ?
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
0 ಕಾಮೆಂಟ್(ಗಳು):
ಕಾಮೆಂಟ್ ಪೋಸ್ಟ್ ಮಾಡಿ