ನಿಜಾರ್ ಖಬ್ಬಾನಿಯ ಒಂದಷ್ಟು ಪ್ರೇಮ ಕವನಗಳು; ಪ್ರೇಮಿಗಳ ದಿನಕ್ಕಾಗಿ
ಸಿರಿಯಾ ಮೂಲದ ಅರೇಬಿ ಕವಿ (1923-1998) ನಿಜಾರ್ ಖಬ್ಬಾನಿ ಇಪ್ಪತ್ತನೇ ಶತಮಾನದ ಪ್ರಸಿದ್ಧ ಕವಿ. ಅರೇಬಿ ಭಾಷೆಯ ‘ಪ್ರೇಮ ಕವಿ’ ಎಂದೇ ಖ್ಯಾತಿ ಹೊಂದಿರುವ ನಿಜಾರ್ ಖಬ್ಬಾನಿಯ ಬಹಳಷ್ಟು ಕವನಗಳು ಪ್ರೀತಿ ಮತ್ತು ಪ್ರಣಯದ ಸುತ್ತ ಸುತ್ತುತ್ತವೆ. ಆದರೆ ಈತನ ಕವನಗಳು ಪ್ರೀತಿಯ ಬಗ್ಗೆ ಅಗಾಧವಾದಂಥದ್ದೇನನ್ನೂ ಹೇಳದೆ ಅದರ ಹುಚ್ಚುತನಗಳನ್ನು ಮತ್ತದರ ಪರಕಾಷ್ಠತೆಯನ್ನು ಮಾತ್ರ ಕಟ್ಟಿಕೊಡುತ್ತವೆ. ಆದರೂ ವಿಮರ್ಶಕರು ‘ಪ್ರೇಮಿಗಳು ಈತನ ಕವನಗಳನ್ನು ಓದದ ಹೊರತು ಪ್ರೀತಿಯೆಂದರೇನೆಂದು ಅರ್ಥಮಾಡಿಕೊಳ್ಳಲಾರರು’ ಎಂದು ಅಭಿಪ್ರಾಯಪಡುತ್ತಾರೆ. ಅಂಥ ಒಂದಷ್ಟು ಕವನಗಳನ್ನು ಪ್ರೇಮಿಗಳ ದಿನಕ್ಕಾಗಿ ಕನ್ನಡಕ್ಕೆ ಅನುವಾದಿಸಿದ್ದೇನೆ.
ನಾನು ನಿನ್ನ ಬೇರೆ ಪ್ರಿಯಕರನಂತಲ್ಲ ಪ್ರಿಯೆ!
ನಾನು ನಿನ್ನ ಬೇರೆ ಪ್ರಿಯಕರನಂತಲ್ಲ ಪ್ರಿಯೆ!
ಅವನು ನಿನಗೆ ಮೋಡ ತಂದು ಕೊಟ್ಟರೆ
ನಾನು ನಿನಗೆ ಮಳೆಹನಿಯಾಗಿ ಸುರಿಯುವೆ
ಅವನು ನಿನಗೆ ಉರಿವ ದೀಪ ಕೊಟ್ಟರೆ
ನಾನು ನಿನಗೆ ಹೊಳೆವ ಚಂದಿರನನ್ನು ತರುವೆ
ಅವನು ನಿನಗೆ ಮರದ ಹೂಗಳನ್ನು ಕಿತ್ತುಕೊಟ್ಟರೆ
ನಾನು ನಿನಗೆ ಮರವಾಗಿ ನೆರಳನಿಡುವೆ
ಅವನು ನಿನಗೆ ಹಡಗನ್ನು ತಂದುಕೊಟ್ಟರೆ
ನಾನದರ ನಾವಿಕನಾಗಿ ಜೊತೆಯಲ್ಲಿ ಸಾಗುವೆ.
ಅವಸರದ ಮುತ್ತು
ಪ್ರತಿಸಲ ನಾವಿಬ್ಬರೂ
ಸಾಕಷ್ಟು ವಿರಹ ವೇದನೆಯನ್ನನುಭವಿಸಿ
ಮತ್ತೆ ಒಂದಾಗಿ
ನಾನು ನಿನಗೆ ಮುತ್ತನ್ನಿಡುವಾಗಲೆಲ್ಲಾ
ನನಗನಿಸುತ್ತೆ
ಅವಸರವಸರವಾಗಿ
ನಾನೊಂದು ಪ್ರೇಮಪತ್ರವನ್ನು ಬರೆದು
ಅಂಚೆಡಬ್ಬಕ್ಕೆ ಹಾಕುತ್ತಿದ್ದೇನೆಂದು!
ಭಾಷೆ
ಪ್ರೀತಿಯಲ್ಲಿ ಮುಳುಗಿದ ಹುಡುಗನೊಬ್ಬ
ಹೇಗೆ ತಾನೆ ಮತ್ತೆ ಮತ್ತೆ ಅವವೆ
ಸವಕಳಿ ಹಿಡಿದ ಪದಗಳನ್ನು ಬಳಸಿಯಾನು
ಎಲ್ಲ ಹುಡುಗಿಯರು
ತನ್ನ ಪ್ರಿಯತಮ
ಭಾಷಾತಜ್ಞನಾಗಿರಬೇಕು
ಭಾಷಾಪಂಡಿತನಾರಬೇಕೆಂದು ಹಂಬಲಿಸುವಾಗ?
ಹಾಗೆಂದೇ ನಾನು ಆ ಭಾಷೆ ಈ ಭಾಷೆಗಳನ್ನು ಬಿಟ್ಟು
ಬರೀ ಪ್ರೀತಿಯ ಭಾಷೆಯೊಂದನ್ನು ಮಾತ್ರ
ಸೂಟುಕೇಸಿನಲ್ಲಿ ತುಂಬಿಕೊಂಡುಬಂದು
ಅವಳ ಮುಂದೆ ಸುರಿದೆ
ಅವಳು ಕುಣಿದು ಕುಪ್ಪಳಿಸಿದಳು.
ನಿನ್ನ ಧ್ಯಾನ
ನಾನು ಆಗಾಗ
ಸಮುದ್ರ ತಟದ ಮೇಲೆ ಕುಳಿತುಕೊಂಡು
ನಿನ್ನ ಬಗ್ಗೆ ಧೇನಿಸುವಾಗಲೆಲ್ಲಾ
ಅಲೆಗಳು ಬಂದು
ನನ್ನ ಪಾದಗಳಿಗೆ ಕಚಗುಳಿಯನ್ನಿಟ್ಟು
ಏನು ಯೋಚಿಸುತ್ತಿರುವಿ ಎಂದು ಕೇಳುತ್ತವೆ?
ಏನೆಂದು ಹೇಳಲಿ ನಾನು ಅವಕೆ?
ನಾನೇನಾದರೂ
ನಿನ್ನನ್ನು ಎಷ್ಟೊಂದು ಪ್ರೀತಿಸುತ್ತಿದ್ದೇನೆ,
ಎಷ್ಟೊಂದು ಹಚ್ಚಿಕೊಂಡಿದ್ದೇನೆಂದು
ಆ ಅಲೆಗಳಿಗೆ ಹೇಳಿದ್ದರೆ
ಬಹುಶಃ, ಅವು ಎರಡೂ ದಡಗಳನ್ನು ಬಿಟ್ಟು
ಸುಮ್ಮನೆ ನನ್ನನ್ನು ಹಿಂಬಾಲಿಸುತ್ತಿದ್ದವೇನೋ!
ಉರಿವ ದೀಪಕ್ಕಿಂತ ಹೊಳೆವ ಸೂರ್ಯ ಚೆಂದ
ಉರಿವ ದೀಪಕ್ಕಿಂತ ಹೊಳೆವ ಸೂರ್ಯ ಚೆಂದ
ಬರಡು ಶಬ್ದಗಳಿಗಿಂತ ಮಿಡಿವ ಕವನ ಚೆಂದ
ಬಿರಿದ ಅಧರಗಳಿಗಿಂತ ಮಧುರ ಮುತ್ತು ಚೆಂದ
ನಮ್ಮಿಬ್ಬರಿಗಿಂತ ನಾನು ನಿನಗೆ ಬರೆದ ಪ್ರೇಮ ಪತ್ರಗಳೇ ಚೆಂದ
ಏಕೆಂದರೆ ಕೊನೆಗೆ ಈ ಜಗದಲ್ಲಿ ಉಳಿವ ಏಕೈಕ ಸಾಕ್ಷಿ ಅವೊಂದೇ!
ಅವಕೆ ಮಾತ್ರ ಸಾಧ್ಯ - ನಿನ್ನ ಸೌಂದರ್ಯವನ್ನು ಬಿಡಿಸಿಡಲು
ಹಾಗೂ ನನ್ನ ಹುಚ್ಚುತನವನ್ನು ಸಾರಿ ಹೇಳಲು!
ನಿನ್ನ ಪ್ರೀತಿ
ನಿನ್ನ ಪ್ರೀತಿ
ನಿನ್ನ ಕಂಗಳಷ್ಟೇ
ನಿಗೂಢ,
ಗಹನ,
ಹಾಗೂ ಇಂದ್ರಿಯಾತೀತ.
ಹುಟ್ಟು, ಸಾವುಗಳನ್ನು
ಊಹಿಸಲಾಗದಂತೆ
ನಿನ್ನ ಪ್ರೀತಿಯನ್ನು ಸಹ
ಊಹಿಸಲಾಗದು.
ನಮ್ಮ ಮನೆಯ ಟೆಲಿಫೋನು ರಿಂಗಣಿಸಿದಾಗ
ನಮ್ಮ ಮನೆಯ ಟೆಲಿಫೋನು ರಿಂಗಣಿಸಿದಾಗ
ಸಣ್ಣ ಮಗುವಿನಂತೆ
ನಾನು ಅತ್ಯುತ್ಸಾಹದಿಂದ
ಅದರತ್ತ ಓಡುತ್ತೇನೆ.
ಆ ನಿರ್ಭಾವುಕ ಸಾಧನವನ್ನು
ತಬ್ಬಿಕೊಳ್ಳುತ್ತೇನೆ.
ತಬ್ಬಿಕೊಳ್ಳುತ್ತಾ
ಅದರ ತಣ್ಣನೆಯ ತಂತಿಗಳನ್ನು ಹಿಂಡುತ್ತೇನೆ.
ಹಿಂಡುತ್ತಾ ಹಿಂಡುತ್ತಾ ಕಾಯುತ್ತೇನೆ
ನಿನ್ನ ಬೆಚ್ಚನೆಯ ದನಿಗಾಗಿ
ಹಾಗೂ ಮಧುರ ಸಂಗೀತದಂತೆ ತೇಲಿ ಬರುವ
ನಿನ್ನ ಮಾತುಗಳಿಗಾಗಿ.
ತಕ್ಷಣ ನಾನು ಖುಶಿಯಿಂದ ಕಿರುಚುತ್ತೇನೆ
ನೀನು ನನ್ನನ್ನು ನೆನಪಿಸಿಕೊಂಡಿದ್ದಕ್ಕಾಗಿ
ಹಾಗೂ ಕಾಣದ ಜಗವೊಂದರಿಂದ
ನನಗೆ ಕರೆ ಮಾಡಿದ್ದಕ್ಕಾಗಿ!
ನಿನಗಾಗಿ
ನಿನಗಾಗಿ
ಕೇವಲ ನಿನಗಾಗಿ
ನಾನು ಪ್ರತ್ಯೇಕ ಪದಗಳನ್ನು
ಬಳಸಬೇಕಿದೆ
ಹೊಸ ಭಾಷೆಯೊಂದನ್ನು
ಹುಟ್ಟುಹಾಕಬೇಕಿದೆ
ನಿನ್ನ ದೇಹ ಸೌಂದರ್ಯವನ್ನು ಬಣ್ಣಿಸಲು
ಹಾಗೂ ನನ್ನ ಪ್ರೀತಿಯ ಆಳವನ್ನು ಹಿಡಿದಿಡಲು!
ಬೇಕಾಗಿದೆ
ನಾನು ಶಬ್ದಕೋಶ
ಹಾಗೂ ನನ್ನ ತುಟಿಗಳಿಗೆ ವಿದಾಯ ಹೇಳಬೇಕಿದೆ.
ಏಕೆಂದರೆ ನನಗೆ ಬಳಸಿದ ಪದಗಳನ್ನೇ
ಬಳಸಿ ಬಳಸಿ ಸಾಕಾಗಿಹೋಗಿದೆ.
ನನಗೆ ಬೇರೇನೋ ಬೇಕಾಗಿದೆ
ಚೆರಿ-ಗಿಡವನ್ನಾಗಿ
ಅಥವಾ ಬೆಂಕಿಪೊಟ್ಟಣವನ್ನಾಗಿ
ಬದಲಾಯಿಸುವಂಥದ್ದು
ಅಥವಾ ಮಾತುಗಳನ್ನು
ಮುತ್ತುಗಳನ್ನಾಗಿ ಪರಿವರ್ತಿಸುವಂಥದ್ದು
ಅಪ್ಸರೆಯರು ಸಾಗರದಿಂದ ಎದ್ದು ಬರುವಂತೆ
ಅಥವಾ ಮಾಂತ್ರಿಕನ ದಂಡದಿಂದ ಕೋಳಿಪಿಳ್ಳೆಗಳು ಉದುರುವಂತೆ
ಶಬ್ದಗಳು ತಾವೇ ತಾವಾಗಿ ಹೊರಹೊಮ್ಮುವಂಥ
ಬಾಯೊಂದು ನನಗೆ ಬೇಕಿದೆ.
ಮೂಲ ಅರೇಬಿ: ನಿಜಾರ್ ಖಬ್ಬಾನಿ
ಕನ್ನಡಕ್ಕೆ: ಉದಯ್ ಇಟಗಿ
ಈ ಕವನಗಳು ಇವತ್ತಿನ ಕೆಂಡಸಂಪಿಗೆಯಲ್ಲಿ ಪ್ರಕಟವಾಗಿವೆ. ಅದರ ಲಿಂಕ್ ಇಲ್ಲಿದೆ http://kendasampige.com/article.php?id=5120
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ತಿಂಗಳ ನಾಟಕ ಓದು3 ದಿನಗಳ ಹಿಂದೆ
-
-
-
"ಮಾದೇವ"ನ ಯಶಸ್ವಿ ಪ್ರದರ್ಶನ...5 ವಾರಗಳ ಹಿಂದೆ
-
ತರಚೀ ಪುಷ್ಪೋಪಾಖ್ಯಾನ1 ತಿಂಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …7 ತಿಂಗಳುಗಳ ಹಿಂದೆ
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
Pic by Hengki Lee4 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?7 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!7 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್7 ವರ್ಷಗಳ ಹಿಂದೆ
-
ಮಾಯೆ8 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ8 ವರ್ಷಗಳ ಹಿಂದೆ
-
ಅನುಸಂಧಾನ-೩8 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..10 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ10 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ10 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...11 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ11 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....12 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ12 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?12 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)13 ವರ್ಷಗಳ ಹಿಂದೆ
-
(ಮಹಿಳಾ)ವಾದ:13 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್14 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು15 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧15 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ15 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು16 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?16 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ವಿನೂತನ ಶೈಲಿಯ ಉದಯ ಇಟಗಿ ಅವರ ನಾಟಕ- ಶೇಕ್ಸ್ ಪಿಯರನ ಶ್ರೀಮತಿ
- ಪಾದ್ರಿ
- Whore!
- It is just a visual poetry of Shakespeare's as well as his wife Anna Hathway's life.
- ಲಂಚಿನ್
- Poems of Pravara Kotturu
- To Dear Mehajabeen ...
- ಮೌಮರ್ ಗಡಾಫಿ ಮತ್ತವನ ಗ್ರೀನ್ ಬುಕ್
- One should not be afraid to speak in favour of humanity (A conversation with renowned revolutionary Nepali language poet Mr. Manoj Bogati)
- ಅನುಯಾಯಿಗಳು
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
2 ಕಾಮೆಂಟ್(ಗಳು):
ವಾಹ್ ಸರ್.
ನಿನ್ನ ಧ್ಯಾನ ತುಂಬಾ ತುಂಬಾ ಚೆನ್ನಾಗಿದೆ.
ಸ್ವರ್ಣಾ
really too nice sir I like this all thoughts so nice
Vijayakumar
Bnagalore
+91-7795502586
ಕಾಮೆಂಟ್ ಪೋಸ್ಟ್ ಮಾಡಿ